ಹೈನುಗಾರರ ಶ್ರಮದ ಬದುಕಿಗೆ ಮನ್ನಣೆ ನೀಡಿದ ಸಂಘ

ಚಂದ್ರನಗರ ಹಾಲು ಉತ್ಪಾದಕರ ಸಹಕಾರ ಸಂಘ

Team Udayavani, Mar 1, 2020, 5:56 AM IST

Chandranagar

ಹೈನುಗಾರಿಕೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ನೆಲೆಯಲ್ಲಿ ಚಂದ್ರನಗರದ ಸಮಾನ ಮನಸ್ಕರ ಸಕಾಲಿಕ ಚಿಂತನೆಯಿಂದ ಮೂಡಿ ಬಂದ ಈ ಹಾಲು ಉತ್ಪಾದಕ ಸಹಕಾರಿ ಸಂಘವು ಪ್ರಸ್ತುತ ಒಂದು ಕೋಟಿ ವಹಿವಾಟಿನಲ್ಲಿ ತೊಡಗಿದ್ದು ಹೆಮ್ಮೆಯ ಸಂಗತಿಯಾಗಿದೆ.

ಕಾಪು: ಸೈಕಲ್‌ನಿಂದ ಹಾಲು ಸಂಗ್ರಹಿಸುತ್ತಿದ್ದವರು ಹೈನುಗಾರರ ಶ್ರಮಕ್ಕೆ ತಕ್ಕಂತೆ ಹಾಲಿಗೆ ಸೂಕ್ತ ದರ ನೀಡದೇ ಇರುವುದನ್ನು ಮನಗಂಡು ಊರಿನವರ ಸಕಾಲಿಕ ಚಿಂತನೆಯೊಂದಿಗೆ ರೂಪು ತಳೆದಿದ್ದೇ ಚಂದ್ರನಗರ ಹಾಲು ಉತ್ಪಾದಕರ ಸಂಘ.

ಹಿರಿಯರ ಒತ್ತಾಸೆ
ಕಳತ್ತೂರು ಗುರ್ಮೆ ಶೇಷಪ್ಪಯ್ಯ ಮಾಸ್ಟ್ರೆ, ಭೋಜ ಶೆಟ್ಟಿ, ಮುದ್ದು ಶೆಟ್ಟಿ, ವಿಠಲ ಶೆಟ್ಟಿ ಜತೆ ಸೇರಿ ಅಂದು ದ.ಕ. ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದ ಸುಕುಮಾರ್‌ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸಂಘ ಸ್ಥಾಪಿಸಿದರು. ಶೇಷಪ್ಪಯ್ಯ ಅವರು ಸ್ಥಾಪಕಾಧ್ಯಕ್ಷರಾದರೆ, ಲೀಲಾವತಿ ಅವರು ಕಾರ್ಯದರ್ಶಿಯಾದರು.

ಸೈಕಲ್‌ನಲ್ಲಿ ತೆರಳಿ ಹಾಲು ಸಂಗ್ರಹ
ಪಾದೂರು, ಹೇರೂರು, ಪೈಯ್ನಾರು, ಚಂದ್ರನಗರ, ಕಳತ್ತೂರು, ಜ್ಯೋತಿ ನಗರ, ಮಲಂಗೋಳಿ, ಪುಂಚಲಕಾಡು ಪರಿಸರದ ಹೈನುಗಾರರನ್ನು ಮೇಲೆತ್ತುವ ನಿಟ್ಟಿನಲ್ಲಿ ಸಂಘದ ಮೂಲಕ ಸೈಕಲ್‌ನಲ್ಲಿ ಮನೆಗಳಿಗೆ ತೆರಳಿ ಹಾಲು ಸಂಗ್ರಹಿಸಲಾಗುತ್ತಿತ್ತು. ಬಳಿಕ ರಿಕ್ಷಾದಲ್ಲಿ ಹಾಲು ಸಂಗ್ರಹಕ್ಕೆ ಚಾಲನೆ ನೀಡಲಾಯಿತು. ಪುಂಚಲಕಾಡು, ಪೈಯ್ನಾರು ಶಾಲೆ, ಕಳತ್ತೂರು ದೇವಸ್ಥಾನ, ಪಡುಕಳತ್ತೂರು ದುರ್ಗಾ ದೇವಿ ಮಂದಿರ, ಶಾಂತಿಗುಡ್ಡೆ ಪ್ರದೇಶಗಳಿಂದ ಈಗಲೂ ರಿಕ್ಷಾ ಮೂಲಕ ಹಾಲು ಸಂಗ್ರಹಿಸಲಾಗುತ್ತಿದೆ.

365 ಮಂದಿ ಸದಸ್ಯರು
10 ಮಂದಿ ಸದಸ್ಯರಿದ್ದ ಸಂಘದಲ್ಲೀಗ 365 ಮಂದಿ ಸದಸ್ಯರಿದ್ದಾರೆ. ಇದರಲ್ಲಿ ಹಾಲು ಹಾಕುವವರು 150 ಮಂದಿ. ನಿತ್ಯ 800 ರಿಂದ 1000 ಲೀ. ಹಾಲು ಸಂಗ್ರಹವಾಗುತ್ತಿದೆ. ಕಳೆದ 3 ವರ್ಷಗಳಿಂದ ಸಂಘದ ಸದಸ್ಯ ಹರೀಶ್‌ ಶೆಟ್ಟಿ ಗುರ್ಮೆ ಅವರು ದಿನಕ್ಕೆ 150 ರಿಂದ 200 ಲೀಟರ್‌ ಹಾಲನ್ನು ಹಾಕುತ್ತಿದ್ದು ದೊಡ್ಡ ಹೈನುಗಾರರಾಗಿದ್ದಾರೆ.

ಸವಲತ್ತು – ಸಹಕಾರ
ಒಕ್ಕೂಟದಿಂದ ಸಿಗುವ ಬಹುತೇಕ ಎಲ್ಲಾ ಸವಲತ್ತುಗಳನ್ನು ಹೈನುಗಾರರಿಗೆ ಒದಗಿಸಲಾಗುತ್ತದೆ. ಬಾಯಿ ಜ್ವರ ಲಸಿಕೆ, ಜಂತುಹುಳ ಔಷಧವಿತರಣೆ ಮಾಡಲಾಗುತ್ತಿದೆ. ತಳಿ ಅಭಿವೃದ್ಧಿಗೆ ಒತ್ತು, ಲವಣ ಮಿಶ್ರಿತ ಪಶು ಆಹಾರ ಪೂರೈಕೆ, ವಿಮಾ ಪರಿಹಾರ ವಿತರಣೆ, ಕಾಲು ಬಾಯಿ ಜ್ವರ ನಿವಾರಣೆ ಚುಚ್ಚುಮದ್ದು, ವಿವಿಧ ಲಸಿಕೆಗಳ ವಿತರಣೆ, ಬೀಜ ವಿತರಣೆ ಇತ್ಯಾದಿ ಕಾರ್ಯಕ್ರಮಗಳು ಸಂಯೋಜನೆಗೊಳ್ಳುತ್ತಿವೆ. ಇರಂದಾಡಿ ನಿತ್ಯ ಸಹಾಯ ಮಾತಾ ವಸತಿ ಶಾಲೆಯ ಮಕ್ಕಳಿಗೆ ಸಂಘದ ವತಿಯಿಂದ ಬ್ಯಾಗ್‌ಗಳನ್ನು ನೀಡಲಾಗಿದ್ದು, ಪೈಯ್ನಾರು ಅಯ್ಯಣ್ಣ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಲಾಗುತ್ತಿದೆ.

ಗ್ರಾಮದ ಪ್ರತಿ ಮನೆಗೆ ತೆರಳಿ 5 ರೂ. ದೇಣಿಗೆ ಸಂಗ್ರಹಿಸಿ ಪ್ರಾರಂಭಿಸಿದ ಚಂದ್ರನಗರ ಹಾಲು ಉತ್ಪಾದಕರ ಸಹಕಾರ ಸಂಘವು 1989ರ ಮೇ 8 ರಂದು ನೋಂದಣಿಗೊಂಡಿತ್ತು. 6 ಲೀ. ಹಾಲು ಸಂಗ್ರಹಣೆಯೊಂದಿಗೆ ಶುರುವಾದ ಸಂಘ, ಒಂದು ವರ್ಷ ಪೂರ್ಣಗೊಳ್ಳುವ ಮುನ್ನವೇ ನಿತ್ಯ 457.4 ಲೀ. ಹಾಲು ಸಂಗ್ರಹದ ಸಾಧನೆ ಮಾಡಿತ್ತು. 1999ರಲ್ಲಿ ಸಂಘ ಸ್ವಂತ ಕಟ್ಟಡವನ್ನೂ ಹೊಂದಿತು.

ಪ್ರಶಸ್ತಿ -ಪುರಸ್ಕಾರ
ಸಂಘವು 2 ಬಾರಿ ಒಕ್ಕೂಟದಿಂದ ಉತ್ತಮ ಸಂಘ ಪ್ರಶಸ್ತಿಯನ್ನು ಪಡೆದಿದೆ. 1 ಕೋಟಿ ರೂ.ವರೆಗೆ ವಹಿವಾಟು ಸಂಘವು ವಾರ್ಷಿಕವಾಗಿ 90 ಲಕ್ಷ ರೂ. ಗಳಿಂದ 1 ಕೋಟಿ ರೂ. ವರೆಗೆ ವಹಿವಾಟು ನಡೆಸುತ್ತಿದೆ. ಸದಸ್ಯರಿಗೆ ಶೇ. 10 ರಷ್ಟು ಡಿವಿಡೆಂಡ್‌ ಮತ್ತು ಬೋನಸ್‌ ನೀಡಲಾಗುತ್ತದೆ.

ಸಂಘವನ್ನು ಆಧುನಿಕತೆಗೆ ತಕ್ಕಂತೆ ಉತ್ತಮವಾಗಿ ರೂಪುಗೊಳಿಸಲಾಗಿದೆ. ಯಾವುದೇ ಸಾಲ ರಹಿತವಾಗಿ ಸಂಘ ಮುನ್ನಡೆಯುತ್ತಿದ್ದು, ಹೈನುಗಾರರಿಗೆ ಇನ್ನಷ್ಟು ಚೈತನ್ಯ ಮತ್ತು ಶಕ್ತಿ ತುಂಬುವ ಪ್ರಯತ್ನ ನಡೆಯುತ್ತಿದೆ.
-ಸುಧಾಕರ ಶೆಟ್ಟಿ,
ಅಧ್ಯಕ್ಷರು

ಅಧ್ಯಕ್ಷರು
ಶೇಷಪ್ಪಯ್ಯ ಗುರ್ಮೆ, ಭೋಜ ಶೆಟ್ಟಿ , ಮುದ್ದಣ್ಣ ಶೆಟ್ಟಿ , ಪ್ರವೀಣ್‌ ಕುಮಾರ್‌ ಗುರ್ಮೆ, ಸುಧಾಕರ ಶೆಟ್ಟಿ (ಹಾಲಿ) ಕಾರ್ಯದರ್ಶಿ
ಕಾರ್ಯದರ್ಶಿ : ಲೀಲಾವತಿ, ಶೋಭಾ, ಶಾರದ, ಜಗದೀಶ್‌ ಸಾಲ್ಯಾನ್‌ (ಹಾಲಿ)

-ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.