“ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತ್‌ ಪಾತ್ರ ಮಹತ್ತರ’

 ಚಾರ ಗ್ರಾಮ ಪಂಚಾಯತ್‌: ನೂತನ ಕಟ್ಟಡ ಉದ್ಘಾಟನೆ

Team Udayavani, Mar 1, 2020, 5:18 AM IST

Chara-Gram-Panchayat

ಹೆಬ್ರಿ: ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ ಗ್ರಾಮದ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತ್‌ ಪಾತ್ರ ಮಹತ್ತರವಾಗಿದೆ.

ಈ ನಿಟ್ಟಿನಲ್ಲಿ ಚಾರಾ ಗ್ರಾ.ಪಂ. ಚಿಕ್ಕ ಕೊಠಡಿಯಲ್ಲಿ ಇದುವರೆಗೆ ಕಾರ್ಯನಿರ್ವಹಿಸುತ್ತಿದ್ದು ಇದೀಗ ವಿಶಾಲವಾದ ಸ್ವಂತ ಕಟ್ಟಡವನ್ನು ಹೊಂದಿ ಉಡುಪಿ ಜಿಲ್ಲೆಯಲ್ಲಿಯೇ ನೂತನವಾಗಿ ಘೋಷಣೆಯಾದ ಗ್ರಾಮ ಪಂಚಾಯತ್‌ಗಳಲ್ಲಿ ಮೊದಲಿಗೆ ನಿರ್ಮಾಣವಾದ ಕಟ್ಟಡಕ್ಕೆ ಚಾರಾ ಗ್ರಾ.ಪಂ. ಪಾತ್ರವಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಫೆ.29 ರಂದು ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಚಾರ ಗ್ರಾಮ ಪಂಚಾಯತ್‌ನ ಸ್ವಂತ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನೂತನ ಪಂಚಾಯತ್‌ ಕಟ್ಟಡವನ್ನು ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ವಿ.ಸುನಿಲ್‌ ಕುಮಾರ್‌ ಮಾತನಾಡಿ, ಈಗಾಗಲೇ ಚಾರಾ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಮಾರು 5ಕೋಟಿ ರೂ.ವೆಚ್ಚಕ್ಕೂ ಮಿಕ್ಕಿ ರಸ್ತೆ ಅಭಿವೃದ್ಧಿಯಾಗಿದೆ. ಮುಂದೆಯೂ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಗಿಸಿ, ಪಂಚಾಯತ್‌ಗೆ ಬೇಕಾದ ಸಮಗ್ರ ಪೀಠೊಪಕರಣಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಚಾರಾ ಗ್ರಾಮ ಪಂಚಾಯತ್‌ನಲ್ಲಿ ಈ ಹಿಂದೆ ಪಿಡಿಒ ಆಗಿ ಪಂಚಾಯತ್‌ನ ಅಭಿವೃದ್ಧಿಗೆ ಶ್ರಮಿಸಿದ ಸದಾಶಿವ ಮತ್ತು ಶೇಖರ್‌ ಪೂಜಾರಿಅವರನ್ನು ಸಮ್ಮಾನಿಸಲಾಯಿತು.

ಸಮಾರಂಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ಸದಸ್ಯೆ ಜ್ಯೋತಿ ಹರೀಶ್‌, ತಾ.ಪಂ.ಸದಸ್ಯ ಚಂದ್ರಶೇಖರ ಶೆಟ್ಟಿ, ಕಾರ್ಕಳ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ| ಮೇ| ಹರ್ಷ, ತಾ.ಪಂ. ಮಾಜಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಪಂಚಾಯತ್‌ ರಾಜ್‌ ಎಂಜಿನಿಯರ್‌ ಸತ್ಯನಾರಾಯಣ್‌, ಪಂ.ಅ. ಅಧಿಕಾರಿ ರಾಜೇಂದ್ರ, ಕಾರ್ಯದರ್ಶಿ ಸುಮನಾ ಭಟ್‌, ಉಪಾಧ್ಯಕ್ಷೆ ರೇಷ್ಮಾ ಮೊದಲಾದವರು ಉಪಸ್ಥಿತರಿದ್ದರು.

ಚಾರ ಗ್ರಾಮ ಪಂಚಾಯತ್‌ ಅಧ್ಯಕ್ಷ ಸಂದೀಪ್‌ ಸ್ವಾಗತಿಸಿ, ಪ್ರಕಾಶ್‌ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಪಂ.ಸದಸ್ಯ ದಿನೇಶ್‌ ಶೆಟ್ಟಿ ವಂದಿಸಿದರು.

ಜನರ ಸೇವೆಗೆ ಸದಾ ಸಿದ್ಧ
ಚಾರ ಗ್ರಾಮ ಪಂಚಾಯತ್‌ ಗೆ ಯಾವುದೇ ವಾಣಿಜ್ಯ ಕಟ್ಟಡಗಳ ತೆರೆಗೆ ವಸೂಲಿ ಮೊದಲಾದ ವಿಷಯಗಳಂತೆ ಹೆಚ್ಚಿನ ಆದಾಯ ಇಲ್ಲ. ಆದರೂ ಜನರಿಗೆ ಸಮಸ್ಯೆಯಾಗಬಾರದು ಎಂಬ ನಿಟ್ಟಿನಲ್ಲಿ ಪಂಚಾಯತ್‌ ಆಡಳಿತ ಯಾವುದೇ ಪಕ್ಷ ಬೇದವಿಲ್ಲದೆ ಸದಸ್ಯರು ಎಲ್ಲೂ ಒಟ್ಟಿಗೆ ಸೇರಿ ಜನಸೇವೆಯಲ್ಲಿ ತೊಡಗಿಕೊಂಡಿದ್ದು ಮುಂದೆಯೂ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತದೆ.ಚಾರ ಗ್ರಾಮದ ಅಭಿವೃದ್ಧಿಯಲ್ಲಿ ಶಾಸಕರ ಸಂಪೂರ್ಣ ಸಹಕಾರ ಅಗತ್ಯ ಎಂದು ಪ್ರಸ್ತಾವನೆಗೈದ ಪಂಚಾಯತ್‌ ಸದಸ್ಯ ಚಾರ ವಾದಿರಾಜ್‌ ಶೆಟ್ಟಿ ಹೇಳಿದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.