ಚಾರ್ಮಾಡಿ ರಸ್ತೆ ಹಗಲು ಲಘು ವಾಹನ ಸಂಚಾರಕ್ಕೆ ಮುಕ್ತ
Team Udayavani, Aug 30, 2019, 1:09 AM IST
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ತಿರುವುಗಳಲ್ಲಿ ಉಂಟಾದ ಗುಡ್ಡ ಕುಸಿತದ ಪರಿಣಾಮ ತಾತ್ಕಾಲಿಕವಾಗಿ ತಡೆ ನೀಡಿದ್ದ ರಸ್ತೆ ಸಂಚಾರ ಮುಕ್ತಗೊಳಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಬೆಳಗ್ಗೆ 7ರಿಂಂದ ಸಂಜೆ 6ರ ವರೆಗೆ ಕಾರು ಜೀಪು ದ್ವಿಚಕ್ರ ಸಹಿತ ಲಘು ವಾಹನ ಸಂಚಾರಕ್ಕೆ ಮುಕ್ತವಾಗಿದೆ. ರಸ್ತೆ ಸಂಚಾರದಿಂದ ಉಂಟಾಗಿರುವ ಅಡಚಣೆಯನ್ನು ಪರಿಗಣಿಸಿ ತೆರವುಗೊಳಿಸಲಾಗಿದ್ದು ಬೆಳಗ್ಗಿನ ಸಮಯದಲ್ಲಿ ಮಾತ್ರ ಸಂಚಾರಕ್ಕೆ ತೆರವುಗೊಳಿಸಲಾಗಿದೆ.