ವಾಹನ ತಪಾಸಣೆ ಕೇಂದ್ರ ಗುಂಡ್ಮಿ ಟೋಲ್‌ ಗೇಟ್‌ ಗೆ ಸ್ಥಳಾಂತರ


Team Udayavani, Apr 7, 2018, 9:20 AM IST

Tapasane-6-4.jpg

ತೆಕ್ಕಟ್ಟೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ತೆಕ್ಕಟ್ಟೆ ರಾ.ಹೆ. 66ರ ಪ್ರಮುಖ ಭಾಗದಲ್ಲಿ ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಾಹನ ತಪಾಸಣೆ ಕೇಂದ್ರ ತೆರೆಯಲಾಗಿತ್ತು. ಇದನ್ನು ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ತರಾತುರಿಯಲ್ಲಿ ಗುಂಡ್ಮಿ ಟೋಲ್‌ ಗೇಟ್‌ ಗೆ ಎ. 6ರಂದು ಸ್ಥಳಾಂತರಿಸಲಾಗಿದೆ. ವಾಹನ ತಪಾಸಣೆ ಕೇಂದ್ರವು ಮಾ. 27ರಂದು ಪ್ರಾರಂಭಗೊಂಡಿತ್ತು. ತಪಾಸಣೆಯ ಸಂದರ್ಭದಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್‌ ಜಾಮ್‌ ಹಾಗೂ ನಿರಂತರವಾಗಿ ಅಪಘಾತಗಳು ಸಂಭವಿಸಿವೆ. ಇಲ್ಲಿ ರಸ್ತೆ ವಿಸ್ತರಣೆಯೂ ಪ್ರಗತಿಯಲ್ಲಿದ್ದು, ಸಂಚಾರದ ಬಗ್ಗೆ ಗೊಂದಲ ಉಂಟಾಗುತ್ತಿದೆ. ತಪಾಸಣೆ ಕೇಂದ್ರದಿಂದ ಸಮಸ್ಯೆ ಉಂಟಾಗುತ್ತಿರುವುದರ ಬಗ್ಗೆ ಸಾರ್ವಜನಿಕರು ಹಲವು ದಿನಗಳಿಂದ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಮಾಧ್ಯಮಗಳಲ್ಲೂ ಇಲ್ಲಿ ಆಗುತ್ತಿರುವ ಸಮಸ್ಯೆ- ಅಪಘಾತಗಳ ಬಗ್ಗೆ ವರದಿಗಳು ಪ್ರಕಟಗೊಂಡಿದ್ದವು.

ವಾಹನ ತಪಾಸಣೆ ಕೇಂದ್ರದಿಂದ ಸಂಭವಿಸಿದ ಅಪಘಾತಗಳು:
– ರಾ.ಹೆ. 66ರಲ್ಲಿ ವಾಹನ ತಪಾಸಣೆಯ ಸಂದರ್ಭದಲ್ಲಿ ನಿಂತ ಕಾರಿಗೆ ಚಲಿಸುತ್ತಿದ್ದ ಲಾರಿಯು ಢಿಕ್ಕಿಯಾಗಿ ಜಖಂಗೊಂಡ ಘಟನೆ ಎ. 2ರಂದು ಸಂಭವಿಸಿತ್ತು.

– ತೆಕ್ಕಟ್ಟೆ ಜಂಕ್ಷನ್‌ನಲ್ಲಿ ವಾಹನ ತಪಾಸಣೆಯ ಸಂದರ್ಭದಲ್ಲಿ ಸರಣಿ ಆಪಘಾತ ಸಂಭವಿಸಿ ನಾಲ್ಕು ವಾಹನಗಳು ಜಖಂಗೊಂಡ ಘಟನೆ ಎ. 4ರಂದು ಸಂಭವಿಸಿತ್ತು.

– ಎ. 5ರಂದು ಚಲಿಸುತ್ತಿದ್ದ ಲಾರಿ ನಿಂತ ಹುಂಡೈ ಐ 20 ಕಾರಿಗೆ ಢಿಕ್ಕಿಯಾಗಿ ಜಖಂಗೊಂಡಿದೆ.

ಓರ್ವನ ಮೇಲೆ ಪ್ರಕರಣ ದಾಖಲು
ಎ. 5ರಂದು ತೆಕ್ಕಟ್ಟೆ ರಾ.ಹೆ. 66ರಲ್ಲಿ ಟ್ರಾಫಿಕ್‌ ಜಾಮ್‌ ಆಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಮನಗಂಡ ಸತೀಶ್‌ ಪ್ರಭು ಎನ್ನುವವರು ತನ್ನ ವಾಹನವನ್ನು ರಸ್ತೆಯಲ್ಲಿಯೇ ನಿಲ್ಲಿಸಿ ಕರ್ತವ್ಯ ನಿರತ ಶಸ್ತ್ರಸಜ್ಜಿತ ಸಿ.ಆರ್‌.ಪಿ.ಎಫ್‌. ನಾಲ್ವರು ಯೋಧರು ಹಾಗೂ ಪೊಲೀಸ್‌ ಸಿಬಂದಿಯಲ್ಲಿ ಮಾತುಕತೆಗೆ ಮುಂದಾದಾಗ ತತ್‌ಕ್ಷಣವೇ ಕೋಟ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿ ವಿಚಾರಣೆಗೆ ಒಳಪಡಿಸಿದ ಘಟನೆ ಕೂಡ ಸಂಭವಿಸಿದೆ.

ಸಿ.ಆರ್‌.ಪಿ.ಎಫ್‌.ನ ಶಸ್ತ್ರಸಜ್ಜಿತ ನಾಲ್ವರು ಯೋಧರ ಸಹಿತ ಪೊಲೀಸ್‌ ಸಿಬಂದಿಗೆ ವಾಹನ ತಪಾಸಣೆಗೈಯಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಆದೇಶಿಸಿದ ಹಿನ್ನೆಲೆಯಲ್ಲಿ ತಪಾಸಣೆ ಕೇಂದ್ರವನ್ನು ಗುಂಡ್ಮಿ ಟೋಲ್‌ ಗೇಟ್‌ ಗೆ ಸ್ಥಳಾಂತರಿಸಲಾಗಿದೆ.
– ಸಂತೋಷ್‌ ಕಾಯ್ಕಿಣಿ, ಠಾಣಾಧಿಕಾರಿಗಳು, ಕೋಟ ಪೊಲೀಸ್‌ ಠಾಣೆ

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.