Cheque Bounce Case: ದೋಷಿಗೆ 18 ತಿಂಗಳು ಜೈಲು ಶಿಕ್ಷೆ
Team Udayavani, Feb 26, 2024, 9:38 PM IST
ಹೆಬ್ರಿ: ಕಾರ್ಕಳದ ನ್ಯಾಯಾಲಯವು ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ವ್ಯಕ್ತಿಯೊಬ್ಬರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ 18 ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ನಾಡ್ಪಾಲು ಗ್ರಾಮದ ಬೈದೆ ಬೆಳಾರ ನಿವಾಸಿ ಶಿವರಾಮ ಪೂಜಾರಿ ಅವರು ಪರಿಚಯಸ್ಥ ಮಡಾಮಕ್ಕಿ ಗ್ರಾಮದ ಕಾಸನಮಕ್ಕಿ ಕೊಡ್ಸನ್ ಬೈಲು ನಿವಾಸಿ ದಿನಕರ ನಾಗು ಶೆಟ್ಟಿ ಅವರಿಗೆ 2016ರಲ್ಲಿ ಮೂರು ತಿಂಗಳ ಮಟ್ಟಿಗೆ 3,32,000 ರೂ. ನೀಡಿದ್ದು, ಮರುಪಾವತಿಗಾಗಿ ದಿನಕರ ಶೆಟ್ಟಿ 3 ಚೆಕ್ಗಳನ್ನು ನೀಡಿದ್ದರು. ಅವು ಬೌನ್ಸ್ ಆದ ಹಿನ್ನೆಲೆಯಲ್ಲಿ ಶಿವರಾಮ ಪೂಜಾರಿ ಕಾರ್ಕಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.
ಸುದೀರ್ಘವಾದ ವಿಚಾರಣೆ ಬಳಿಕ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ದಿನಕರ ಶೆಟ್ಟಿ ಅವರನ್ನು ತಪ್ಪಿತಸ್ಥ ಎಂದು ಪರಿಗಣಿಸಿದ ನ್ಯಾಯಾಲಯ, ಇನ್ನು ಒಂದು ತಿಂಗಳ ಒಳಗೆ ಖರ್ಚು ವೆಚ್ಚಗಳು ಸೇರಿ 4,35,000 ರೂ. ಅನ್ನು ಶಿವರಾಮ ಪೂಜಾರಿಗೆ ನೀಡಬೇಕು. ತಪ್ಪಿದ್ದಲ್ಲಿ ಪ್ರತ್ಯೇಕ ಮೂರು ಪ್ರಕರಣಗಳಿಗೆ ತಲಾ ಆರು ತಿಂಗಳಂತೆ ಒಟ್ಟು 18 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದೆ.
ಶಿವರಾಮ ಪೂಜಾರಿ ಪರ ನ್ಯಾಯವಾದಿ ಎಚ್. ರತನ್ ಕುಮಾರ್ ಹೆಬ್ರಿ ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!