ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸೀತಾಳೆ ಸಿಡುಬು ಭೀತಿ !


Team Udayavani, Mar 3, 2020, 7:25 AM IST

sitale-sidubu

ಸಾಂದರ್ಭಿಕ ಚಿತ್ರ

ಉಡುಪಿ: ಕೊರೊನಾ ವೈರಸ್‌ ಭೀತಿಯ ನಡುವೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಸೀತಾಳೆ ಸಿಡುಬು ರೋಗ (ಚಿಕನ್‌ ಪಾಕ್ಸ್‌) ಕಾಣಿಸಿಕೊಂಡಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದರಿಂದ ಬೇಸಗೆಯಲ್ಲಿ ಇತರ ಸಾಂಕ್ರಾಮಿಕ ರೋಗ ಹರಡುವ ಭೀತಿ ಆವರಿಸಿದೆ. ಅವಳಿ ಜಿಲ್ಲೆಯಲ್ಲಿ ಈಗಾಗಲೇ 40ಕ್ಕೂ ಅಧಿಕ ಮಂದಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಈ ಸಾಂಕ್ರಾಮಿಕ ರೋಗ 3ರಿಂದ 18 ವರ್ಷ ವಯೋಮಾನದವರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. 19ರಿಂದ
60 ವರ್ಷ ಮತ್ತು ಅನಂತರದ ವಯೋಮಾನದವರಲ್ಲಿ ಸಮ ಪ್ರಮಾಣದಲ್ಲಿ ಕಂಡುಬರುತ್ತದೆ. ಆರೋಗ್ಯ
ಇಲಾಖೆ ಅಧಿಕಾರಿಗಳು ಇದು ಸಹಜಕಾಯಿಲೆ ಎನ್ನುತ್ತಾರದರೂ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದು ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ಒಂದೇ ಮನೆಯ ಇಬ್ಬರು ಮಕ್ಕಳು ಸೋಂಕಿನಿಂದ ಬಾಧಿತರಾಗಿ ಚಿಕಿತ್ಸೆ ಪಡೆದ ಪ್ರಕರಣ ಬ್ರಹ್ಮಾವರದಲ್ಲಿ ಪತ್ತೆಯಾಗಿದೆ.

ಚಿಕನ್‌ ಪಾಕ್ಸ್‌ ಸಹಜವಾಗಿ ಚಳಿಗಾಲದಲ್ಲಿ ಹರಡುತ್ತದೆ. ಸೋಂಕು ಕಾಣಿಸಿಕೊಂಡ 2ರಿಂದ 3 ದಿನಗಳಲ್ಲಿ ಅದು ಬಾಧಿತರ ಅರಿವಿಗೆ ಬರುತ್ತದೆ. ಹಸಿವಾಗದೆ ಇರುವುದು, ಜ್ವರ, ಸ್ನಾಯುಗಳ ನೋವು, ಚರ್ಮದ ಮೇಲೆ ದಡ್ಡು, ನವೆ, ತುರಿಕೆ, ಕಿರಿಕಿರಿ ಉಂಟುಮಾಡುತ್ತದೆ. ಎಲ್ಲೆಂದರಲ್ಲಿ ತುರಿಕೆ ಆರಂಭವಾಗಿ ಅದು ಕೆಂಪು ಬಣ್ಣದ ಗುಳ್ಳೆಗಳಾಗುತ್ತವೆ. ಬಳಿಕ ಅದರಲ್ಲಿ ದ್ರವರೂಪದ ಪದಾರ್ಥ ಸೇರಿ ಉಲ್ಬಣಗೊಳ್ಳುತ್ತದೆ. ಕನಿಷ್ಠ 7ರಿಂದ 21 ದಿನಗಳವರೆಗೆ ಸೋಂಕು ಮೈಮೇಲೆ ಇರುತ್ತದೆ. “ವರಿಸೆಲ್ಲ’ ಎಂಬ ವೈರಸ್‌ನಿಂದ ಈ ರೋಗ ಹರಡುತ್ತದೆ. ಸೀನು, ಕೆಮ್ಮಿನ ಮೂಲಕ ಹರಡುತ್ತಿದ್ದು, ಸೂಕ್ತ ಚಿಕಿತ್ಸೆಯಿಂದ ಗುಣಪಡಿಸಬಹುದು ಎನ್ನುತ್ತಾರೆ ವೈದ್ಯರು.

ಪ್ರಕರಣಗಳಿಲ್ಲ: ಆರೋಗ್ಯ ಇಲಾಖೆ
ಚಿಕನ್‌ ಪಾಕ್ಸ್‌ ಸೋಂಕಿಗೆ ಮನೆಯಲ್ಲೆ ಚಿಕಿತ್ಸೆ ಪಡೆಯುವವರೇ ಹೆಚ್ಚು. ಹಳ್ಳಿಗಳ ಮಂದಿ ಆಸ್ಪತ್ರೆಗಳಿಗೆ
ತೆರಳದೆ ಈಗಲೂ ಮನೆ ಮದ್ದು ಮಾಡುತ್ತಾರೆ. ಖಾಸಗಿ ಕ್ಲಿನಿಕ್‌ಗಳಲ್ಲಿಯೂ ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಇದರ ಚಿಕಿತ್ಸೆಗೆಂದು ಸರಕಾರಿ ಆಸ್ಪತ್ರೆಗಳಿಗೆ ತೆರಳುವವರ ಸಂಖ್ಯೆ ಕಡಿಮೆ. ಜಿಲ್ಲೆಯ ಹಲವು ತಾಲೂಕುಗಳಲ್ಲಿ ಈ ಸೋಂಕು ತಗುಲಿದ ಬಗ್ಗೆ ಮಾಹಿತಿ ಇದೆ. ಆರೋಗ್ಯ ಇಲಾಖೆ ಮಾತ್ರ ಇಂತಹ ಪ್ರಕರಣಗಳು ಸಂಭವಿಸಿಯೇ ಇಲ್ಲ ಅನ್ನುವ ಮಾಹಿತಿ ನೀಡುತ್ತಿವೆ.

ಸೀತಾಳೆ ಸಿಡುಬು ರೋಗ
ಚಿಕನ್‌ ಪಾಕ್ಸ್‌ ತಾಯಿಯಿಂದ ಮಗುವಿಗೆ, ಕಾರ್ಮಿಕರು, ನೌಕರರು, ಒಟ್ಟಿಗೆ ಇರುವ ವ್ಯಕ್ತಿಗಳಿಂದ, ಮೈ ಕೈ ತಾಗಿಸಿ ಕೂರುವುದು, ಪರಸ್ಪರ ಹಸ್ತಲಾಘವ ಮಾಡುವುದು, ಸೋಂಕು ಬಾಧಿತರ ಚರ್ಮ ತಾಗುವಂತಹ ಕಾರಣಗಳಿಂದ ಹರಡುತ್ತದೆ.

ಚಿಕನ್‌ ಪಾಕ್ಸ್‌ ಸೋಂಕುವಿಗೆ ಸಂಬಂಧಿಸಿ ಪ್ರಕರಣಗಳು ಹರಡುತ್ತಿರುವ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ. ಜನರು ಭಯ ಪಡಬೇಕಿಲ್ಲ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲೆಯ ಎಲ್ಲ ಆಸ್ಪತೆಗಳಿಗೆ ಸೂಚಿಸಲಾಗುವುದು.
-ಡಾ| ಪಾಶಾ, ಜಿಲ್ಲಾ ಆರೋಗ್ಯಾಧಿಕಾರಿ (ಪ್ರಭಾರ), ಮಂಗಳೂರು

ಉಡುಪಿ ಜಿಲ್ಲೆಯಲ್ಲಿ ಚಿಕನ್‌ ಪಾಕ್ಸ್‌ಗೆ ಸಂಬಂಧಿಸಿ ಇದುವರೆಗೆ ಪ್ರಕರಣ ಬೆಳಕಿಗೆ ಬಂದಿಲ್ಲ. ಸೋಂಕು ತಗುಲಿದ ಪ್ರಕರಣಗಳಿದ್ದಲ್ಲಿ ನಮ್ಮ ಆರೋಗ್ಯ ಇಲಾಖೆ ಕಾರ್ಯಕರ್ತರು ಮನೆಗಳಿಗೆ ಭೇಟಿ ನೀಡುವ ಸಂದರ್ಭ ಗಮನಕ್ಕೆ ಬರುತಿತ್ತು. ಈ ಬಗ್ಗೆ ಪ್ರಾಥಮಿಕ ಕೇಂದ್ರಗಳ ವೈದ್ಯರನ್ನು ವಿಚಾರಿಸಿದಾಗಲೂ ಇಲ್ಲ ಎನ್ನುವ ಉತ್ತರ ಬಂದಿದೆ.
-ಡಾ| ಸುಧೀರ್‌ಚಂದ್ರ ಸೂಡ ಜಿಲ್ಲಾ ಆರೋಗ್ಯಾಧಿಕಾರಿ, ಉಡುಪಿ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.