ಮುಖ್ಯ ಕಾರ್ಯದರ್ಶಿಗೆ ಕರಾವಳಿ ನಂಟು!


Team Udayavani, Dec 2, 2017, 9:35 AM IST

02-17.jpg

ಕಾರ್ಕಳ: ಇತ್ತೀಚೆಗಷ್ಟೇ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಐಎಎಸ್‌ ಅಧಿಕಾರಿ ರತ್ಮಪ್ರಭಾ ಅವರಿಗೂ ಕಾರ್ಕಳಕ್ಕೂ ನಂಟಿದೆ ಎಂಬುದು ಬಹುತೇಕರಿಗೆ ಗೊತ್ತೇ ಇಲ್ಲ !

ಹೌದು ಕಳೆದ ವಾರವಷ್ಟೇ ರಾಜ್ಯದ ಮುಖ್ಯ ಕಾರ್ಯದರ್ಶಿ ಹುದ್ದೆ ವಹಿಸಿದ ಮಹಿಳಾಮಣಿ ರತ್ನಪ್ರಭಾ ಅವರ ತಾಯಿ ಕಾರ್ಕಳದವರು. ಕಾರ್ಕಳದಲ್ಲಿ ಉದ್ಯಮಿ, ರಾಜಕಾರಣಿಯಾಗಿ ಗುರುತಿಸಿ ಜನಪ್ರಿಯರಾಗಿದ್ದ ಹಳೆ ದ್ವಾರಕಾ ಹೊಟೇಲಿನ ಮಾಲಕ ಸದಾನಂದ ಕಾಮತ್‌ ಅವರ ಸೋದರಿಯಾಗಿದ್ದ ವಿಮಲಾ ಬಾೖ ಅವರ ಮೂವರು ಮಕ್ಕಳಲ್ಲಿ ರತ್ನಪ್ರಭಾ ಕೊನೆಯವರು. 

ಕಾರ್ಕಳದಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸಿದ ದಿ|ವಿಮಲಾ ಬಾೖ ಅವರು ಆಂಧ್ರ ಮೂಲದ ಅಧಿಕಾರಿ ಚಂದ್ರಯ್ಯ ಅವರನ್ನು ವಿವಾಹವಾಗಿದ್ದರು.  ತಮ್ಮ ಬಾಲ್ಯ ಹಾಗೂ ಶಿಕ್ಷಣವನ್ನು ಆಂಧ್ರಪ್ರದೇಶದಲ್ಲಿಯೇ ಪೂರೈಸಿದ ರತ್ನಪ್ರಭಾ ಅವರು ತಾಯಿ ವಿಮಲಾ ಅವರ ಜತೆಗೆ ರಜಾದಿನಗಳಲ್ಲಿ ಕಾರ್ಕಳದತ್ತ ಬಂದು ಕುಟುಂಬದ ಸದಸ್ಯರ ಜತೆಗೆ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದರು.
ಈಗಲೂ ವರ್ಷಕ್ಕೊಂದು ಬಾರಿ ಕಾರ್ಕಳಕ್ಕೆ ಬರುವ ಅವರು, ಕುಟುಂಬದ ಕಾರ್ಯಕ್ರಮಗಳಲ್ಲಿ, ತಮ್ಮ ಕುಟುಂಬದ ದೇವಸ್ಥಾನದ ಪೂಜಾ ಮಹೋತ್ಸವಗಳಲ್ಲಿ  ಪಾಲ್ಗೊಳ್ಳುತ್ತಾರೆ.

ಕರಾವಳಿಯ ನಿಕಟ ಸಂಪರ್ಕ
ತಾಯಿ ವಿಮಲಾ ಅವರು ಮಂಗಳೂರು, ಪುತ್ತೂರು, ಕಾರ್ಕಳ ಮೊದಲಾದ ಕಡೆ ವೈದ್ಯೆಯಾಗಿ ಸೇವೆ ಸಲ್ಲಿಸಿದ್ದರಿಂದ ಆ ಊರುಗಳ ಸಂಪರ್ಕವೂ ರತ್ನಪ್ರಭಾ  ಅವರಿಗಿದೆ.  ವಿಮಲಾ ಅವರು ಮಂಗಳೂರಿನ ಲೇಡಿ ಗೋಶನ್‌ನಲ್ಲಿಯೂ ವೈದ್ಯೆಯಾಗಿ ಸೇವೆ ಸಲ್ಲಿಸಿದ್ದು ಸ್ಕಿನ್‌ ಸ್ಪೆಷಲಿಸ್ಟ್‌ ಆಗಿದ್ದರು. 2016ರಲ್ಲಿ ತಾಯಿ ನಿಧನ ಹೊಂದಿದಾಗ ಕೊನೆಯ ಬಾರಿ ಕಾರ್ಕಳಕ್ಕೆ ಭೇಟಿ ನೀಡಿದ್ದ ರತ್ನಪ್ರಭಾ ಅವರಿಗೆ ಕಾರ್ಕಳ ಇಷ್ಟವಾದ ತಾಣವಂತೆ. ಕಾರ್ಕಳದಲ್ಲಿರುವ ಪೂರ್ವಜರ ಮನೆ, ವಾತಾವರಣ ಎಲ್ಲವೂ ಅವರಿಗೆ ಮೆಚ್ಚುಗೆ ಎನ್ನುವ ಮಾಹಿತಿಯನ್ನು ಪ್ರಸ್ತುತ ಬೆಂಗಳೂರಿನಲ್ಲಿರುವ ಕಾರ್ಕಳದ ದಿ| ಸದಾನಂದ ಕಾಮತ್‌ ಅವರ ಮಕ್ಕಳು ನೀಡುತ್ತಾರೆ.

ಸಂಸ್ಕೃತಿ ಪ್ರಿಯೆ; ಕೊಂಕಣಿ ಮೋಹ
ರತ್ನಪ್ರಭಾ ಅವರಿಗೆ ಕೊಂಕಣಿ ಎಂದರೆ ಇಷ್ಟ . ಮನೆ ಭಾಷೆ ಕೊಂಕಣಿಯಾದ್ದರಿಂದ ಭಾಷೆಯ ಮೇಲೆ ಅಭಿಮಾನ ಜಾಸ್ತಿ. ಆಂಧ್ರ ಮೂಲದ ಹುಡುಗನನ್ನು ವರಿಸಿದ್ದರೂ, ಕೊಂಕಣಿ ಭಾಷೆ ಹಾಗೂ ಊರಿನ ವ್ಯಾಮೋಹದಿಂದ ತಮ್ಮ ಮಗ, ಮಗಳಿಗೂ ಕೊಂಕಣಿ ಕಲಿಸಿದ್ದಾರೆ. ಭಾಷಾ ಪ್ರೇಮವನ್ನೂ ಉಳಿಸಿಕೊಂಡಿದ್ದಾರೆ. ಅಲ್ಲದೇ ಟೆನ್ನಿಸ್‌ನಲ್ಲಿಯೂ ಅವರು ಪ್ರವೀಣೆಯಾಗಿದ್ದರು ಎನ್ನುವ ಮಾಹಿತಿಯನ್ನು ಸದಾನಂದ ಕಾಮತ್‌ ಮಕ್ಕಳು ನೀಡುತ್ತಾರೆ.

ಪ್ರಸಾದ್‌ ಶೆಣೈ ಕಾರ್ಕಳ

ಟಾಪ್ ನ್ಯೂಸ್

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.