ಚಿಕ್ಕಮಗಳೂರು ಕ್ಷೇತ್ರ: ಅಮೃತ್ ಶೆಣೈ ಅವರಿಂದ ಮತ ಯಾಚನೆ
Team Udayavani, Apr 13, 2019, 6:56 AM IST
ಉಡುಪಿ: ಕೊಪ್ಪ, ಶೃಂಗೇರಿ, ಹರಿಹರಪುರ, ಜಯಪುರ ಮೊದಲಾದ ಸ್ಥಳಗಳಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಪಿ. ಅವರು ಬಿರುಸಿನ ಪ್ರಚಾರ ಕೈಗೊಂಡು ಮತ ಯಾಚಿಸಿದರು.
ಸಭೆಯನ್ನು ಉದ್ದೇಶಿಸಿ ಅಮೃತ್ ಶೆಣೈ ಮಾತನಾಡಿ, ಅಭಿವೃದ್ಧಿ ಹಾಗೂ ಸಾಮಾಜಿಕ ಸಾಮರಸ್ಯವನ್ನು ಎತ್ತಿ ಹಿಡಿಯುವ ಕೆಲಸವನ್ನು ಜತೆಜತೆಯಾಗಿ ಮಾಡುತ್ತೇನೆ. ಶೋಭಾ ಕರಂದ್ಲಾಜೆ ಮತ್ತು ಪ್ರಮೋದ್ ಮಧ್ವರಾಜ್ ಅವರ ಬಗ್ಗೆ ನಾನು ಯಾವುದೇ ಟೀಕೆ ಮಾಡುವುದಿಲ್ಲ ಎಂದರು.
ಅವರಿಬ್ಬರಿಗೂ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ದೇವರು ಈಗಾಗಲೇ ಕೊಟ್ಟಿದ್ದಾರೆ. ಅದೇ ರೀತಿ ತನಗೂ ಒಂದು ಅವಕಾಶ ನೀಡಿದರೆ ಮತದಾರರು ಇಟ್ಟ ಪ್ರೀತಿ, ವಿಶ್ವಾಸಕ್ಕೆ ಚ್ಯುತಿ ಬರದ ಹಾಗೆ ಕೆಲಸ ಮಾಡುತ್ತೇನೆ. ಅಲ್ಲದೆ ಕ್ಷೇತ್ರದ ಜನರ ಒಳಿತಿಗಾಗಿ ಚಿಕ್ಕಮಗಳೂರಿನಲ್ಲಿ ಮನೆ ಮಾಡಿ ಯಾವುದೇ ಹೊತ್ತಿನಲ್ಲೂ ಸಾರ್ವಜನಿಕರಿಗೆ ಸುಲಭವಾಗಿ ಭೇಟಿಯಾಗಲು ಸಿಗುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಕಳ ಕ್ಷೇತ್ರದ ಫ್ರಾನ್ಸಿಸ್, ಚಿಕ್ಕಮಗಳೂರು ಕ್ಷೇತ್ರದ ಹನೀಫ್, ತರಿಕೆರೆಯ ವರದರಾಜ್, ಕಾಪುವಿನ ಅಮೀರ್, ಜಯಶ್ರೀ ಭಟ್, ದಿನೇಶ್ ಮತ್ತಿತರರು ಶೆಣೈಯವರ ಪರ ಮಾತ ಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್