ಮೀನು ಆಯಲು ಬಾಲ ಕಾರ್ಮಿಕರ ಬಳಕೆ: ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ
Team Udayavani, Oct 29, 2020, 8:55 AM IST
ಉಡುಪಿ: ಇಲ್ಲಿನ ಮಲ್ಪೆ ಬಂದರಿನಲ್ಲಿ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ಗುರುವಾರ ಬೆಳಿಗ್ಗೆ ರಕ್ಷಣೆ ಮಾಡಲಾಗಿದೆ.
ಮಕ್ಕಳ ರಕ್ಷಣಾ ಘಟಕ ಹಾಗು ಇತರೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯುವ ಕಾರ್ಯದಲ್ಲಿ ತೊಡಗಿದ್ದ 17 ಮಂದಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಾರ್ವಜನೀಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ನಾಗರಿಕ ಸೇವಾ ಟ್ರಸ್ಟ್ ಉಡುಪಿ ಇದರ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಬಾಲ ಕಾರ್ಮಿಕರ ರಕ್ಷಣೆ ಮಾಡಲಾಗಿದೆ.
ಇದನ್ನೂ ಓದಿ:ಫರಂಗಿಪೇಟೆ ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ
ಈ ಮಕ್ಕಳು ಬಳ್ಳಾರಿ ಮತ್ತು ಕೊಪ್ಪಳ ಮೂಲದವರು ಎಂದು ಗುರುತಿಸಲಾಗಿದೆ. ಇವರನ್ನು ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸಕ್ಕೆ ದುಡಿಸಲಾಗುತ್ತಿತ್ತು. ಬಂದರಿನಿಂದ ರಕ್ಷಿಸಿದ 17 ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ,ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಯೋಗೀಶ್, ಸುರಕ್ಷಾ, ಸುನಂದಾ, ಮಹಿಳಾ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸಾವಿತ್ರಿ, ಅರುಣಾ, ಮಲ್ಪೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸವಿತಾ, ಜಗದೀಶ್, ನಿತ್ಯಾನಂದ ಒಳಕಾಡು, ಶಿಲ್ಪಾ, ಸುಶ್ಮಿತಾ, ಮಕ್ಕಳ ಸಹಾಯವಾಣಿಯ ಕಸ್ತೂರಿ, ತ್ರಿವೇಣಿ, ನೇತ್ರ, ವಿಶ್ವಾಸದಮನೆ ಶಂಕರಪುರ ಸಂಸ್ಥೆಯ ಕ್ರಿಸ್ಟೋಪರ್ ಭಾಗವಹಿಸಿದ್ಧರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ