ಬಾಲ್ಯ ವಿವಾಹ: ಉಡುಪಿ ರಾಜ್ಯಮಟ್ಟದಲ್ಲಿ ಶೂನ್ಯ ಪ್ರಕರಣ ಹೊಂದಿರುವ ಏಕೈಕ ಜಿಲ್ಲೆ  


Team Udayavani, Sep 21, 2021, 8:00 AM IST

ಬಾಲ್ಯ ವಿವಾಹ: ಉಡುಪಿ ರಾಜ್ಯಮಟ್ಟದಲ್ಲಿ ಶೂನ್ಯ ಪ್ರಕರಣ ಹೊಂದಿರುವ ಏಕೈಕ ಜಿಲ್ಲೆ  

ಉಡುಪಿ:  ಶೈಕ್ಷಣಿಕವಾಗಿ ಮುಂದು ವರಿಯುತ್ತಿರುವ ಉಡುಪಿಯಲ್ಲಿ ಬಾಲ್ಯ ವಿವಾಹದ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದು ಸಾಮಾಜಿಕ ಪಿಡುಗು ಮುಕ್ತ ಜಿಲ್ಲೆಯಾಗಿಸುವತ್ತ ಜಿಲ್ಲಾಡಳಿತ ಹೆಜ್ಜೆ ಹಾಕುತ್ತಿದೆ.

ಜಿಲ್ಲೆಯಲ್ಲಿ ಕಳೆದ 8 ವರ್ಷಗಳಲ್ಲಿ ಬಾಲ್ಯ ವಿವಾಹ ನಡೆದೇ ಇಲ್ಲ. ಆದರೆ 2017ರಲ್ಲಿ ಉಡುಪಿ ತಾಲೂಕಿನ ಪೆರಂಪಳ್ಳಿಯಲ್ಲಿ 17 ವರ್ಷ 11 ತಿಂಗಳು 16 ದಿನದ ಬಾಲಕಿಗೆ ಮದುವೆ ಮಾಡಲು ಪ್ರಯತ್ನ ನಡೆದಿತ್ತಾದರೂ, ಅಂದಿನ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಮಹಿಳಾ ಮತ್ತು ಮಕ್ಕಳ ಇಲಾಖೆಯ ಡಿ.ಡಿ. ಗ್ರೇಸಿ ಅವರು ಮದುವೆಯನ್ನು ತಡೆಯುವಲ್ಲಿ ಸಫ‌ಲರಾಗಿದ್ದರು. ಇದು ತಾಂತ್ರಿಕವಾಗಿ ಬಾಲ್ಯ ವಿವಾಹವೆನಿಸಿದರೂ ಉದ್ದೇಶಪೂರ್ವಕ ಬಾಲ್ಯ ವಿವಾಹವಲ್ಲ. 15 ದಿನ ಕಳೆದಿದ್ದರೆ ಈ ಪ್ರಕರಣ ಬಾಲ್ಯವಿವಾಹದ ವ್ಯಾಪ್ತಿಯಿಂದ ಹೊರಗೆ ಉಳಿಯುತ್ತಿತ್ತು.

ಸುಶಿಕ್ಷಿತರ ಜಿಲ್ಲೆ :

ಹೆತ್ತ ವರು ಎಷ್ಟೇ ಬಡತನವಿದ್ದರೂ, ಹೆಣ್ಣು ಮಕ್ಕಳಿಗೆ ಒತ್ತಾಯಪೂರ್ವಕವಾಗಿ ಕನಿಷ್ಠ 10ನೇ ತರಗತಿ ಹಾಗೂ ಓದಲು ಇಚ್ಛಿಸುವ ಮಕ್ಕಳಿಗೆ ಕನಿಷ್ಠವೆಂದರೂ ಪದವಿ ಶಿಕ್ಷಣ ನೀಡುವ ಅಭ್ಯಾಸ ಜಿಲ್ಲೆಯಲ್ಲಿದೆ.

ವ್ಯಾಸಂಗ ಮುಗಿಯುವ ವೇಳೆಗೆ ಮದುವೆಗೆ ವಯಸ್ಸಿಗೆ ಬರುತ್ತಾರೆ. ಅವರಲ್ಲಿ ಕೆಲವರಿಗೆ ಮದುವೆ ಮಾಡಿಸಿದರೆ ಇನ್ನು ಕೆಲವರು ಉದ್ಯೋಗಕ್ಕೆ ತೆರಳುತ್ತಾರೆ. ಇದರಿಂದಾಗಿ ಇದರಿಂದಾಗಿ ಜಿಲ್ಲೆಯಲ್ಲಿ ಬಾಲ್ಯ ವಿವಾಹಕ್ಕೆ ಬಲಿ ಯಾಗುವ ಅಪ್ರಾಪ್ತ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇದೆ.

ಕಾನೂನಿನ ಭೀತಿ :

ಪ್ರಸ್ತುತ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಿಗಿಯಾಗಿದ್ದು, ಅರ್ಚಕರು, ತಂದೆ-ತಾಯಿ, ಹುಡುಗನ ತಂದೆ- ತಾಯಿ, ಮದುವೆಗೆ ಬರುವ ಸಂಬಂಧಿಕರು, ಸಹಕಾರ ನೀಡಿದ ಸಂಘಟಕರ ಮೇಲೆಯೂ ಕಾನೂನಿನ ಅನ್ವಯ ಪ್ರಕರಣ ದಾಖಲಿಸಲು ಅವಕಾಶವಿದೆ. ಈ ಬಗ್ಗೆ ಸಾಮಾನ್ಯ ಅರಿವು ಜನರಲ್ಲಿ ಇರುವುದರಿಂದ ಬಾಲ್ಯವಿವಾಹ ನಡೆಯುತ್ತಿಲ್ಲ.

ಸ್ಥಳೀಯರಲ್ಲಿ ಜಾಗೃತಿ :

ಕಳೆದ ಐದಾರು ವರ್ಷಗಳ ಹಿಂದೆ ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ನಡೆಸುವ ಪ್ರಯತ್ನಗಳು ವಿಫ‌ಲವಾಗಿವೆ. ಸ್ಥಳೀಯರ ಜಾಗೃತ ಮನೋಭಾವ ಮತ್ತು ಅಧಿಕಾರಿಗಳು ಮಾಹಿತಿ ದೊರೆತ ತತ್‌ಕ್ಷಣ ಕಾರ್ಯ ಪ್ರವೃತ್ತ ರಾಗುತ್ತಿದ್ದಾರೆ. ಇದರಿಂದಾಗಿ ವಿವಾಹ ಪ್ರಯತ್ನಗಳು ಕೂಡ ನಡೆಯುತ್ತಿಲ್ಲ. ಶಿಕ್ಷಣ ಇಲಾಖೆಯ ಸಹಯೋಗ ದಲ್ಲಿ 6ರಿಂದ 18 ವರ್ಷ ದೊಳ ಗಿನವರ ಪಟ್ಟಿ ತಯಾರಿಸಿ ಮೂರು ತಿಂಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ. ಮಕ್ಕಳ ಹಾಜರಾತಿ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ.

ಹೊರ ಜಿಲ್ಲೆಯ ಕಂಟಕ:

ಹೊರ ಜಿಲ್ಲೆಯಲ್ಲಿ ಮದುವೆಯಾಗಿ ಬಂದು ಉಡುಪಿಯಲ್ಲಿ ನೆಲೆಸುತ್ತಿದ್ದಾರೆ. ಅವರಲ್ಲಿ ಹೆಚ್ಚಿನ ವರು ಗರ್ಭಿಣಿಯಾದವರು ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಾಗ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಕೊರೊನಾ ಲಾಕ್‌ಡೌನ್‌ ಬಳಿಕ ಸುಮಾರು 6 ಪ್ರಕರಣಗಳು ಪತ್ತೆಯಾಗಿದೆ. ಅಪ್ರಾಪ್ತ ಬಾಲಕಿ ಯರನ್ನು ರಕ್ಷಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

2019ರ ಕೋವಿಡ್‌-19 ಲಾಕ್‌ಡೌನ್‌ ಅವಧಿಯಲ್ಲಿ ರಾಜ್ಯಾ ದ್ಯಂತ ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ಘಟನೆಗಳು ಸಂಭವಿಸಿವೆ. ಆದರೆ ಉಡುಪಿ ಜಿಲ್ಲೆಯಲ್ಲಿ ಇದಕ್ಕೆ ಪ್ರಯತ್ನವೂ ನಡೆದಿಲ್ಲ. ರಾಜ್ಯಮಟ್ಟದ ಪಟ್ಟಿಯಲ್ಲಿ ಶೂನ್ಯ ಪ್ರಕರಣ ಹೊಂದಿರುವ ಏಕೈಕ ಜಿಲ್ಲೆಯಾಗಿ ಇದು ಗುರುತಿಸಿಕೊಂಡಿದೆ.

ಉಡುಪಿಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಕಳೆದ ಹಲವು ವರ್ಷಗಳಿಂದ ಶೂನ್ಯವಿದೆ. ಹೊರ ಜಿಲ್ಲೆಯವರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಂಡು ಉದ್ಯೋಗ ನಿಮಿತ್ತ ಉಡುಪಿಯಲ್ಲಿ ನೆಲೆಸುತ್ತಿದ್ದಾರೆ. ಇಂತಹ ಪ್ರಕರಣಗಳು ಅಪ್ರಾಪ್ತರು ಗರ್ಭಿಣಿಯಾಗಿ ಚಿಕಿತ್ಸೆಗೆ ದಾಖಲಾದ ಸಮಯದಲ್ಲಿ ಬೆಳಕಿಗೆ ಬರುತ್ತಿದೆ. ಅಂತಹವರನ್ನು ತತ್‌ಕ್ಷಣ ರಕ್ಷಿಸಿ, ಅಗತ್ಯವಿರುವ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.ರೋನಾಲ್ಡ್‌  ಫ‌ುರ್ಟಾಡೊ,  ಅಧ್ಯಕ್ಷರು,  ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಉಡುಪಿ

 

-ವಿಶೇಷ ವರದಿ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.