ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

ಉಡುಪಿ ಕ್ರಿಶ್ಚಿಯನ್‌ ಪ್ರೌಢಶಾಲೆ

Team Udayavani, Dec 17, 2019, 5:29 AM IST

NEW-SCHOOL

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಉಡುಪಿ: ಜರ್ಮನ್‌ ಮಿಷನರಿಗಳು ಸ್ಥಾಪಿಸಿದ ಜಿಲ್ಲೆಯ ಮೊದಲ ಪ್ರೌಢಶಾಲೆ “ಕ್ರಿಶ್ಚಿಯನ್‌ ಹೈಸ್ಕೂಲ್‌’ಗೆ ಇದೀಗ 121ರ ಸಂಭ್ರಮ. ಈ ಶಾಲೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಜ್ಞಾನದ ಜತೆಗೆ ಬದುಕು ರೂಪಿಸಿಕೊಟ್ಟಿದೆ.

ಜಿಲ್ಲೆಯ ಮೊದಲ ಪ್ರೌಢಶಾಲೆ ಕ್ರಿಶ್ಚಿಯನ್‌ ಹೈಸ್ಕೂಲ್‌ ಜಿಲ್ಲೆಯ ಮೊದಲ ಪ್ರೌಢಶಾಲೆಯಾಗಿದೆ. ಜರ್ಮನಿಯ ಕ್ರೈಸ್ತ ಮಿಷನರಿಗಳು ಧರ್ಮ ಪ್ರಚಾರಕ್ಕೆ ಬಂದ ಸಮಯ ಉಡುಪಿಯಲ್ಲಿ ಸಾಕಷ್ಟು ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಸ್ಥಾಪಿಸಿದ್ದರು. ಅಂದಿನ ಕಾಲದಲ್ಲಿ ಪ್ರಾಥಮಿಕ ಶಿಕ್ಷಣ ಅನಂತರ ಉನ್ನತ ಶಿಕ್ಷಣ ಕಲಿಕೆಗೆ ಅಗತ್ಯವಿರುವ ಸಂಸ್ಥೆಗಳಿಲ್ಲದ ಕಾರಣದಿಂದ ವಿದ್ಯಾರ್ಥಿಗಳು 7ನೇ ತರಗತಿ ಬಳಿಕ ಶಿಕ್ಷಣವನ್ನು ಮೊಟಕುಗೊಳಿಸುತ್ತಿದ್ದರು. ಸಮಸ್ಯೆ ಅರಿತ ಮಿಷನರಿಗಳು ಉಡುಪಿಯಲ್ಲಿ ಪ್ರೌಢಶಾಲೆ ಪ್ರಾರಂಭಿಸಲು ನಿರ್ಧರಿಸಿದ್ದರು.

1898ರಲ್ಲಿ ಸ್ಥಾಪನೆ
ಜರ್ಮನ್‌ ಮಿಷನರಿಗಳು 1898ರಲ್ಲಿ ಉಡುಪಿಯಲ್ಲಿ ಕ್ರಿಶ್ಚಿಯನ್‌ ಪ್ರೌಢಶಾಲೆ ಪ್ರಾರಂಭಿಸಿದ್ದರು. ಆ ಸಂದರ್ಭ ಶಾಲೆಯಲ್ಲಿ 36 ಮಕ್ಕಳು ಹಾಗೂ 8 ಮಂದಿ ಅಧ್ಯಾಪಕರು ಇದ್ದರು. ಹಂತ ಹಂತವಾಗಿ ಅಭಿವೃದ್ಧಿ ಕಂಡ ಶಾಲೆ 1907ರ ಹೊತ್ತಿಗೆ 267 ಮಕ್ಕಳಿಗೆ ವಿದ್ಯೆ ನೀಡುವಷ್ಟು ಬೆಳವಣಿಗೆ ಸಾಧಿಸಿತ್ತು. ಎಂ. ವೆಂಕಟೇಶ್‌ ಪ್ರಭು ಅವರು ಪ್ರೌಢಶಾಲೆ ಮೊದಲ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದಾರೆ. ಈ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಬದುಕು ರೂಪಿಸಲು ಅಗತ್ಯವಿರುವ ವೃತ್ತಿಪರ ತರಬೇತಿ ಸಹ ನೀಡಲಾಗುತ್ತಿತ್ತು. ಉಡುಪಿ ಸುತ್ತಮುತ್ತಲಿನ ಶೇ. 85ರಷ್ಟು ಮಕ್ಕಳು ಪ್ರೌಢಶಾಲೆಯ ಶಿಕ್ಷಣವನ್ನು ಈ ಶಾಲೆಯಲ್ಲಿ ಪಡೆದುಕೊಂಡಿದ್ದಾರೆ.

1913ರಲ್ಲಿ ಹೊಸ ಕಟ್ಟಡ ನಿರ್ಮಾಣ
ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದ‌ಂತೆ ಸ್ಥಳದ ಕೊರತೆ ಎದುರಾಯಿತು. 1913ರಲ್ಲಿ ಹೊಸ ಕಟ್ಟಡ ನಿರ್ಮಿಸಲು ನಿರ್ಧರಿಸಿದ್ದು, ಅಂದಿನ ಜಿಲ್ಲಾ ಮುನ್ಸಿಫ್ರಾದ ಬಿ. ವೆಂಕಟರಾಯ ಕಟ್ಟಡ ಶಂಕು ಸ್ಥಾಪನೆ ನೆರವೇರಿಸಿದ್ದರು. 1915ರಲ್ಲಿ ಮುನ್ಸಿಫ್ ಕುಪ್ಪಸ್ವಾಮಿ ಅಯ್ಯರ್‌ ಅವರು ಪ್ರೌಢಶಾಲೆಯ ಹೊಸ ಕಟ್ಟಡವನ್ನು ಉದ್ಘಾಟಿಸಿದರು. ಅನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 1,500 ದಾಟಿದ್ದು, 25 ಶಿಕ್ಷಕರು ಸೇವೆಯನ್ನು ಸಲ್ಲಿಸುತ್ತಿದ್ದರು.

1940ರಲ್ಲಿ ಅಧಿಕೃತ ಮನ್ನಣೆ
ಮೊದಲ ಮಹಾಯುದ್ಧದ ಪರಿಣಾಮ ಕ್ರಿಶ್ಚಿಯನ್‌ ಪ್ರೌಢಶಾಲೆಯ ಮೇಲೆ ಬೀರಿತ್ತು. ಜರ್ಮನ್‌ ಮಿಷನರಿಗಳಿಂದ ಶಾಲೆಯ ಜವಾಬ್ದಾರಿ 1919ರಲ್ಲಿ ಕೆನರೀಸ್‌ ಇವಾಂಜೆಲಿಕಲ್‌ ಮಿಷನ್‌ ಸಂಸ್ಥೆ ವಹಿಸಿಕೊಂಡಿದೆ. 1940ರಲ್ಲಿ ಶಿಕ್ಷಣ ಇಲಾಖೆ ಅಧಿಕೃತ ಮನ್ನಣೆ ಗಳಿಸಿ “ದಿ ಮಲಬಾರ್‌ ಆ್ಯಂಡ್‌ ಸೌತ್‌ ಕೆನರಾ ಎಜುಕೇಶನ್‌ ಸೊಸೈಟಿ’ಗೆ ಜವಾಬ್ದಾರಿ ಹಸ್ತಾಂತರಿಸಲಾಯಿತು.

ಗುಣಮಟ್ಟದ ಶಿಕ್ಷಣಕ್ಕೆ ಹೆಸರು
ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಕ್ರಿಶ್ಚಿಯನ್‌ ಪ್ರೌಢಶಾಲೆಯಲ್ಲಿ ಪ್ರಸ್ತುತ ಸುಮಾರು 800 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಸರಕಾರದ 7 ಮಂದಿ ಶಿಕ್ಷಕರು ಹಾಗೂ ಆಡಳಿತ ಮಂಡಳಿಯಿಂದ ನೇಮಕಗೊಂಡ 2 ಮಂದಿ ಶಿಕ್ಷಕರು ಇದ್ದಾರೆ. ಬಾಹ್ಯಾಕಾಶ ವಿಜ್ಞಾನಿ ಯು.ಆರ್‌. ರಾವ್‌, ಮಣಿಪಾಲ ಸಂಸ್ಥೆಗಳ ಸ್ಥಾಪಕ ಟಿಎಂಎ ಪೈ, ನಾಗಾಲ್ಯಾಂಡ್‌ ಗವರ್ನರ್‌ ಪಿ.ಬಿ. ಆಚಾರ್ಯ ಶಾಲೆಯ ಹಳೆ ವಿದ್ಯಾರ್ಥಿಗಳಾಗಿದ್ದಾರೆ.

ಶಾಲೆಯಲ್ಲಿ 121 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಹಳೆವಿದ್ಯಾರ್ಥಿಗಳ ಸಹಕಾರದಿಂದ ಶಾಲೆ ಸಾಕಷ್ಟು ಅಭಿವೃದ್ದಿಗೊಂಡಿದೆ. ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.
-ಹೆಲೆನ್‌ ವಿಕ್ಟೋರಿಯಾ ಸಾಲಿನ್ಸ್‌,
ಮುಖ್ಯೋಪಾಧ್ಯಾಯಿನಿ.

ಕವಿ ಮುದ್ದಣರು ಅಧ್ಯಾಪಕರಾಗಿದ್ದ ಶತಮಾನ ಕಂಡಿರುವ ಶಾಲೆ ಗುಣಮಟ್ಟ ಕಾಯ್ದುಕೊಂಡು ಬಂದಿದೆ. ಇಲ್ಲಿನ ಶಿಕ್ಷಣ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದೆ. ಶಾಲೆಯ ಶಿಕ್ಷಕ ವರ್ಗದ ಅನುಕರಣೆಯ ಸೇವೆ ಸುತ್ಯರ್ಹ.
-ರಾಘವೇಂದ್ರ ಪ್ರಭು ಕರ್ವಾಲು , ಹಳೆ ವಿದ್ಯಾರ್ಥಿ.

-  ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.