ಕ್ರಿಸ್ಮಸ್‌ ಆಚರಣೆ ಶಾಂತಿಯ ಸಂಕೇತ

ಕ್ರಿಸ್ಮಸ್‌: ಬಿಷಪ್‌ ಸಂದೇಶ

Team Udayavani, Dec 23, 2019, 3:36 AM IST

wd-41

ಉಡುಪಿ: ಮನುಷ್ಯನ ಮೇಲಿನ ಪ್ರೀತಿಯಿಂದ ಸರ್ವಶಕ್ತ ದೇವರು ಒಂದು ಪುಟ್ಟ ಶಿಶುವಾಗಿ, ದನದ ಕೊಟ್ಟಿಗೆಯಲ್ಲಿ ಜನ್ಮತಳೆದ ಮಹಾ ರಹಸ್ಯದ ಆಚರಣೆಯೇ ಕ್ರಿಸ್ಮಸ್‌. ದೇವರು ಈ ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕಮಾತ್ರ ಪುತ್ರರನ್ನೇ ಈ ಲೋಕಕ್ಕೆ ಕೊಟ್ಟರು ಎನ್ನುವುದನ್ನು ಪವಿತ್ರ ಬೈಬಲ್‌ ಗ್ರಂಥ ಹೇಳುತ್ತದೆ.

ಮನುಷ್ಯತ್ವವನ್ನು ಮರೆತು ದಾನವ ರಾಗಲು ಹೊರಟವರಿಗೆ ಮಾನವರಾಗಿ ಜೀವಿಸಲು ಕಲಿಸಲು ದೇವರು ಭೂಮಿ ಯಲ್ಲಿ ಜನ್ಮ ತಾಳಿದರು. ಅವರು ಜಗತ್ತಿಗೆ ಶಾಂತಿ-ಸಮಾಧಾನವನ್ನು ಕಾಣಿಕೆಯಾಗಿ ನೀಡಿದ್ದಾರೆ. ಆದರೆ ಇಂದು ಸಮಾಜದಲ್ಲಿ ಅಶಾಂತಿ, ಅಸಮಾನತೆ, ಅನ್ಯಾಯ, ಬಡತನ, ನಿರುದ್ಯೋಗ, ಹಿಂಸೆ, ಶೋಷಣೆ, ರೋಗರುಜಿನ, ದ್ವೇಷ, ಯುದ್ಧ, ಅತ್ಯಾಚಾರ, ಮತಾಂಧತೆ, ಪರಮತ ಅಸಹಿಷ್ಣುತೆಗಳನ್ನು ಕಾಣುತ್ತಿದ್ದೇವೆ. ಇದಕ್ಕೆ ಉತ್ತರ ಪ್ರತೀಕಾರ ಖಂಡಿತ ಅಲ್ಲ. ಬದಲಾಗಿ ಪ್ರೀತಿ ಮಾತ್ರ. ಇದನ್ನು ಜನರಿಗೆ ಅರ್ಥ ಮಾಡಿಸಲು ಯೇಸು ಕ್ರಿಸ್ತರು ಈ ಧರೆಯಲ್ಲಿ ಜನ್ಮ ತಾಳಿದ್ದು.

ಯೇಸು ಜನಿಸಿದ ದಿವಸ ದೇವರ ಶಾಂತಿ ಈ ಲೋಕದಲ್ಲಿ ಜನ್ಮತಾಳಿತು. ನಾನು ಶಾಂತಿ ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ, ನನ್ನ ಶಾಂತಿ ಸಮಾಧಾನವನ್ನು ನಿಮಗೆ ಕೊಡುತ್ತೇನೆ ಎಂದು ಯೇಸು ಶಾಂತಿಯ ವಾಗ್ಧಾನ ಮಾಡಿ ದರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರೇ ನಿಜವಾದ ದೇವರ ಮಕ್ಕಳು. ಹಾಗಾದರೆ ನಾವೂ ನೀವೂ ಶಾಂತಿಯ ಸಾಧನ,

ಶಾಂತಿಯ ದೂತರಾಗೋಣವೇ? ಶಾಂತಿ, ಪ್ರೀತಿಯ ಭಾರತವನ್ನು ಕಟ್ಟೋಣವೇ?
ಸರ್ವೇಜನಾಃ ಸುಖೀನೋಭವಂತು! ವಾಲೈಕುಮ್‌ಸಲಾಮ್‌! ಒಬ್ಬರ ನ್ನೊಬ್ಬರು ಪ್ರೀತಿಸಿರಿ – ಇವೆಲ್ಲದರ ತಾತ್ಪರ್ಯ ಒಂದೇ – ಎಲ್ಲರೂ ಸುಖ, ಶಾಂತಿ, ಪ್ರೀತಿಯಿಂದ ಬಾಳಲಿ ಎಂಬುದು. ಇದೇ ಕ್ರಿಸ್ತ ಜಯಂತಿಯ ಸಂದೇಶ. ತಮಗೆಲ್ಲರಿಗೂ ಕ್ರಿಸ್ತ ಜಯಂತಿಯ ಶುಭಾಶಯಗಳು.
ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ, ಬಿಷಪ್‌, ಉಡುಪಿ

ಧರ್ಮಪ್ರಾಂತ ದ್ವೇಶ ಕಲಹ ತ್ಯಜಿಸಿ; ಶಾಂತಿ ಬದುಕು ರೂಪಿಸಿ
ಬೆಳ್ತಂಗಡಿ: ಪಾಪಾಂಧಕಾರದಲ್ಲಿ ಮುಳುಗಿದ್ದ ಮಾನವ ಕುಲಕ್ಕೆ ರಕ್ಷಣೆಯ ನ್ನೀಯಲು ದೇವ ಪುತ್ರ ಶ್ರೀ ಯೇಸು ಸ್ವಾಮಿ ಕ್ರಿಸ್ತರು ಜನಿಸಿದರು ಇದು ಸರ್ವ ಮನುಷ್ಯರಿಗೂ ಸಂತೋಷವನ್ನು ಕೊಡುವ ಸುದ್ದಿಯಾಗಿದೆ. ಈ ಸುದ್ದಿಯು ನಮಗೆ ಸಿಹಿಯಾಗಬೇಕಿದ್ದರೆ ಯೇಸುಕ್ರಿಸ್ತರನ್ನು ಸ್ವೀಕರಿಸಿ ಅವರು ತೋರಿಸಿಕೊಟ್ಟ ಪರಿಶುದ್ಧತೆಯ ಮತ್ತು ಪರಪ್ರೀತಿಯ ಮಾರ್ಗದಲ್ಲಿ ಸಂಚರಿಸಬೇಕು.

ನಾವೆಲ್ಲ ದ್ವೇಷವನ್ನೂ ಕಲಹವನ್ನೂ ತ್ಯಜಿಸಿ ಪ್ರೀತಿಯ ಮತ್ತು ಶಾಂತಿಯ ದಾರಿಯಲ್ಲಿ ಸಾಗಬೇಕು. ಕ್ರಿಸ್ಮಸ್‌ ಆಚರಣೆಯ ಸಂದರ್ಭ ನಾಡಿನ ಸಮಸ್ತರಿಗೂ ಪ್ರಭು ಕ್ರಿಸ್ತರ ಆರ್ಶೀವಾದ ವನ್ನೂ ಪ್ರಾರ್ಥಿಸುತ್ತೇನೆ. ನಮ್ಮ ನಾಡು ಶಾಂತಿಯ ಮತ್ತು ಸಮೃದ್ಧಿಯ ನೆಲೆಬೀಡಾಗಲಿ ಎಂದು ಹಾರೈಸುತ್ತೇನೆ. 2020ರ ಹೊಸ ವರ್ಷದ ಶುಭವನ್ನು ಸರ್ವರಿಗೂ ಕೋರುತ್ತೇನೆ.
– ವಂ| ಲಾರೆನ್ಸ್‌ ಮುಕ್ಕುಯಿ, ಧರ್ಮಾಧ್ಯಕ್ಷರು, ಬೆಳ್ತಂಗಡಿ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.