ಮೊದಲ ಸಾಹಸಿ ತಂಡದಲ್ಲಿ ಇಬ್ಬರು ಕನ್ನಡಿಗರು

ಸಿಯಾಚಿನ್‌ ಯುದ್ಧಭೂಮಿಗೆ ನಾಗರಿಕ ಚಾರಣ ಅವಕಾಶ

Team Udayavani, Oct 15, 2019, 5:40 AM IST

l-54

ಸಿಯಾಚಿನ್‌ನಲ್ಲಿ ಜಯಕುಮಾರ್‌ ಮತ್ತು ತಂಡದ ಸದಸ್ಯರು.

ಉಪ್ಪುಂದ: ಕೇಂದ್ರ ಸರಕಾರವು ಲಡಾಖನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದ ಬಳಿಕ ಭಾರತೀಯ ಸೇನೆ ಸಿಯಾಚಿನ್‌ ಪ್ರದೇಶವನ್ನು ನಾಗರಿಕರ ಚಾರಣಕ್ಕೆ ಮುಕ್ತಗೊಳಿಸಿದೆ. ಪ್ರಪಂಚದ ಅತ್ಯುನ್ನತ ಯುದ್ಧಭೂಮಿಯಾಗಿರುವ ಇಲ್ಲಿಗೆ ಯಶಸ್ವೀ ಚಾರಣ ನಡೆಸಿರುವ ತಂಡದ ಸದಸ್ಯರಲ್ಲಿ ಬೆಂಗಳೂರಿನ ಜಯ
ಕುಮಾರ್‌ ಭಕ್ತವತ್ಸಲಂ ಒಬ್ಬರಾಗಿದ್ದು, ಉಡುಪಿ ಜಿಲ್ಲೆಯ ಮರವಂತೆಯ ಜತೆಗೆ ನಿಕಟ ಸಂಬಂಧ ಹೊಂದಿದ್ದಾರೆ. ಈ ಚಾರಣ ಸಾಹಸಿಯ ಪತ್ನಿ ಯೋಗಿತಾ ಬಾಲಿ ಅವರು ಮರವಂತೆಯ ಚಂದ್ರಶೇಖರ- ಸಿಂಗಾರಿ ಟೀಚರ್‌ ದಂಪತಿಯ ಪುತ್ರಿ.

ನಿವೃತ್ತ ಕರ್ನಲ್‌ ಸುನಿಲ್‌ ಪೋಖ್ರಿಯಾಲ್‌ ಮತ್ತು ನಿವೃತ್ತ ಮೇಜರ್‌ ಕುಲವಂತ ಸಿಂಗ್‌ ಧಾಮಿ ನೇತೃತ್ವದ ಏಳು ಮಂದಿಯ ತಂಡದಲ್ಲಿದ್ದ ಇನ್ನೋರ್ವ ಕನ್ನಡಿತಿ, ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರ ವ್ಯವಸ್ಥಾಪಕಿ ಮೇಘನಾ ಮೋಹನ್‌. ಗೋವಾದ ತುಷಾರ್‌ ಜೋಗಳೇಕರ್‌, ಪುಣೆಯ ಹರ್ಷ ಮುತಾ ಮತ್ತು ಹೊಸದಿಲ್ಲಿಯ ಅಮೃತ್‌ಕೌರ್‌ ಗ್ರೋವರ್‌ ಉಳಿದ ಮೂವರು.

ಯೋಧರ ಮಾರ್ಗ ಸಾಹಸ ಪ್ರವಾಸಗಳನ್ನು ಸಂಘಟಿಸುವ ಹೊಸದಿಲ್ಲಿಯ ನ್ಯಾಶನಲ್‌ ಅಡ್ವೆಂಚರ್‌ ಫೌಂಡೇಶನ್‌ ಈ ಚಾರಣ ಹಮ್ಮಿಕೊಂಡಿತ್ತು. ಇಬ್ಬರು ನಿವೃತ್ತ ಸೇನಾ
ಧಿಕಾರಿಗಳ ಜತೆಗೆ ಐವರು ನಾಗರಿಕರು ಅವಕಾಶ ಪಡೆದಿದ್ದರು. ಈ ಮೊದಲ ಅವಕಾಶವನ್ನು ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುವ ಭಾರತೀಯ ಯೋಧರ ಬದುಕಿನ ಪ್ರತ್ಯಕ್ಷ ಅರಿವು, ಅನುಭವ ಪಡೆಯಲು ಚಾರಣಿಗರು ಬಳಸಿಕೊಂಡರು. ಯಾತ್ರೆಯನ್ನು “ಸಿಯಾಚಿನ್‌-ಯೋಧರ ಮಾರ್ಗ’ ಎಂದು ಕರೆಯಲಾಗಿತ್ತು.

ಕಠಿನ ದೈಹಿಕ ಮತ್ತು ಮಾನಸಿಕ ಪರೀಕ್ಷೆ ಮತ್ತು ತರಬೇತಿ ಪಡೆದ ತಂಡ ಮಾರ್ಗದರ್ಶಿಯ ಜತೆಗೆ ಸೆ.16ರಂದು ಆರಂಭಿಕ ನೆಲೆ ತಲುಪಿ ಅಲ್ಲಿ ಸೈನಿಕರಿಂದ ಮಾರ್ಗದರ್ಶನ ಪಡೆದು ಸೆ.25ರಂದು ಆರೋಹಣ ಆರಂಭಿಸಿತ್ತು.
ದಿನಕ್ಕೆ 12 ಕಿ.ಮೀ. ಯಾತ್ರೆ ಸಿಯಾಚಿನ್‌ ಪ್ರದೇಶಕ್ಕೆ 60 ಕಿ.ಮೀ. ದೂರ ಚಾರಣ ನಡೆಯಿತು. ದಿನಕ್ಕೆ ಸರಾಸರಿ 12 ಕಿ.ಮೀ. ಕ್ರಮಿಸುತ್ತ ನಾಲ್ಕು ದಿನಗಳ ಬಳಿಕ ತಂಡ ಅಂತಿಮ ಗುರಿಯಾದ ಕುಮಾರ ನೆಲೆ ಎಂಬ ಬ್ರಿಗೇಡ್‌ ಹೆಡ್‌ಕಾÌರ್ಟರ್ ತಲುಪಿತು.

ಅಲ್ಲಿ ಒಂದು ದಿನ, ಒಂದು ರಾತ್ರಿ ಕಳೆಯುವ ಮೂಲಕ ನಮ್ಮ ಸೈನಿಕರು ಹವಾಮಾನ, ಆಹಾರ, ವಸತಿ, ಸಂಚಾರ ಎಲ್ಲವೂ ಸವಾಲಾಗಿರುವ ಭೂಪ್ರದೇಶದ‌ಲ್ಲಿ ನಿರಂತರ ಕಟ್ಟೆಚ್ಚರದಲ್ಲಿ ನಡೆಸುವ ಗಡಿ ರಕ್ಷಣೆಯ ಕಾಯಕವನ್ನು ಹತ್ತಿರದಿಂದ ಕಂಡಿತು. ಮರುದಿನ ಮರು ಪಯಣ ಆರಂಭಿಸಿ, ಅ.4ರಂದು ಮೂಲ ನೆಲೆ ಸೇರಿತು.

ಜಯಕುಮಾರ್‌ ಭಕ್ತವತ್ಸಲಂ ಮೆಕ್ಯಾನಿಕಲ್‌ ಎಂಜಿನಿಯರ್‌. ಬ್ಯಾಂಕ್‌ನಲ್ಲಿ ಉನ್ನತ ಹುದ್ದೆ ನಿರ್ವಹಿಸಿದ್ದ ಅವರು ಈಗ ತನ್ನದೇ ಫಿನ್‌ಟೆಕ್‌ ಕಂಪೆನಿ ನಡೆಸುತ್ತಿದ್ದಾರೆ. 2018ರ ಜೂನ್‌ನಲ್ಲಿ ಎವರೆಸ್ಟ್‌ ಬೇಸ್‌ ಕ್ಯಾಂಪ್‌ಗೆ ಚಾರಣ ನಡೆಸಿದ್ದರು. 2019ರ ಜೂನ್‌ನಲ್ಲಿ ರಷ್ಯಾದಲ್ಲಿ ಆ್ಯಕ್ಸಿಲರೇಟೆಡ್‌ ಫ್ರೀ ಫಾಲ್‌ ಸ್ಕೈಡೆ„ವಿಂಗ್‌ ತರಬೇತಿ ಪಡೆದು ಎ ದರ್ಜೆಯ ಅರ್ಹತಾ ಪತ್ರ ಸಂಪಾದಿಸಿದ್ದಾರೆ.

ತಂಡದ ಎಲ್ಲ ಸದಸ್ಯರು ಸದೃಢರೂ ಉತ್ಸಾಹಿಗಳೂ ಆಗಿದ್ದುದರಿಂದ ಚಾರಣದಲ್ಲಿ ತೊಂದರೆ ಎದುರಾಗಲಿಲ್ಲ. ಇಡೀ ಪಯಣ ಅತ್ಯಂತ ರೋಚಕ ಅನುಭವ ನೀಡಿತು. ಎಲ್ಲಕ್ಕಿಂತ ಮಿಗಿಲಾಗಿ ಭಾರತೀಯ ಸೈನಿಕರ ಬಗೆಗಿನ ಗೌರವ ನೂರ್ಮಡಿಯಾಯಿತು.
– ಜಯಕುಮಾರ್‌ ಭಕ್ತವತ್ಸಲಂ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.