ಕ್ಲೀನ್ ಉಡುಪಿ ಪ್ರಾಜೆಕ್ಟ್ : ಸ್ವತ್ಛತಾ ಅಭಿಯಾನ
Team Udayavani, May 6, 2019, 6:00 AM IST
ಉಡುಪಿ: ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ ಮೇ 4 ರಂದು ಅಜ್ಜರಕಾಡು ಉದ್ಯಾನವನದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವತ್ಛತಾ ಅಭಿಯಾನ ನಡೆಯಿತು.
ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆೆಯನ್ನು ಕಾಪಾಡುವ ಬಗ್ಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿದರೆ ದೇಶದ ಚಿತ್ರಣವೇ ಬದಲಾಗುವುದು. ಸ್ವತ್ಛತೆಯ ಪರಿಕಲ್ಪನೆಯನ್ನು ಜಾಗೃತಗೊಳಿಸಿದರೆ ವ್ಯಕ್ತಿಯ ಆರೋಗ್ಯವು ವೃದ್ಧಿಸುವುದರ ಜತೆಗೆ ಸಮಾಜದ ಆರೋಗ್ಯವು ಕೂಡ ಪರಿಣಾಮಕಾರಿಯಾಗುವುದು ಎಂದರು.
ಜಿಲ್ಲಾ ನಾಗರಿಕ ಸಮಿತಿಯ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಜಾಗೃತಿಯ ಸ್ಟಿಕ್ಕರ್ಗಳನ್ನು ಬಿಡುಗಡೆಗೊಳಿಸಿ ಮಾತನಾಡಿ, ಉಡುಪಿ ಜಿಲ್ಲೆಯು ಬುದ್ಧಿವಂತರ ಜಿಲ್ಲೆಯಾಗಿ ನಿಜವಾದ ಅರ್ಥದಲ್ಲಿ ಮೂಡಿಬರಬೇಕಾದರೆ ಇಲ್ಲಿಯ ಸ್ವತ್ಛತೆಯ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಸ್ವತ್ಛತೆಯನ್ನು ಕಾಪಾಡುವ ತುಡಿತ ಉಂಟಾಗಿ ಇತರರಲ್ಲಿಯೂ ಜಾಗೃತಿ ಮೂಡಿಸುವ ಮನೋಭಾವನೆ ಉಂಟಾಗಬೇಕು ಎಂದರು.
ಗಣೇಶ್ ಪ್ರಸಾದ್ ಸ್ವಾಗತಿಸಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.
ಜೆಸಿಐ ಉಡುಪಿ ಸಿಟಿ ಅಧ್ಯಕ್ಷ ಜಗದೀಶ್ ಶೆಟ್ಟಿ , ತಾರಾನಾಥ್ ಮೇಸ್ತ, ಚೇತನಾ ಶೆಣೈ, ಹರೀಶ್ ನಾಯ್ಕ, ತಿಲಕ್ ಮಲ್ಪೆ$, ಜೇಮ್ಸ್, ಅರ್ಪಿತಾ ಆಚಾರ್ಯ, ರಫೀಕ್ ಖಾನ್, ಉದಯ ನಾಯ್ಕ , ಚೇತನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ