ಮನ ಪರಿವರ್ತನೆಯಾದಾಗ ಸ್ವಚ್ಚತಾ ಅಭಿಯಾನ ಯಶಸ್ವಿ


Team Udayavani, Jul 29, 2018, 6:00 AM IST

280718astro04.jpg

ಉಡುಪಿ: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ನೀಡಿದ ಮೊದಲ ಸಂದೇಶ ಸ್ವಚ್ಚ ಭಾರತ. ಅವರ ಸಂದೇಶದ ಬಳಿಕ ಜನರಲ್ಲಿ ಸ್ವಚ್ಚತೆಯ ಬಗ್ಗೆ ವಿಶೇಷ ಜಾಗೃತಿ ಮೂಡಿದೆ. ಆದರೆ ಇದು ಪೂರ್ಣ ಯಶಸ್ಸಾಗಬೇಕಾದರೆ ಜನರ ಮನಃಪರಿವರ್ತನೆಯಾಗಬೇಕು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್‌ ಅವರು  ಅಭಿಪ್ರಾಯಪಟ್ಟರು.

ಜು. 28ರಂದು ಉಡುಪಿ ತಾಲೂಕು ಪಂಚಾಯತ್‌ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌, ಸತ್ಛ ಭಾರತ್‌ ಮಿಷನ್‌ನ “ಸ್ವಚ್ಚ ಸರ್ವೇಕ್ಷಣಾ  ಗ್ರಾಮೀಣ 2018’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ತಾಲೂಕು ಪಂಚಾಯತ್‌ ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸಿಇಒ ಶಿವಾನಂದ ಕಾಪಶಿ, ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಇಒ ಮೋಹನ್‌ರಾಜ್‌, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಭುಜಂಗ ಶೆಟ್ಟಿ ಉಪಸ್ಥಿತರಿದ್ದರು. ಹರಿಕೃಷ್ಣ ಶಿವತ್ತಾಯ ಕಾರ್ಯಕ್ರಮ ನಿರ್ವಹಿಸಿದರು. ಸಮೀಕ್ಷೆಯ ಕುರಿತಾದ ಭಿತ್ತಿಪತ್ರವನ್ನು ಇದೇ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು.

ಗ್ರಾಮಮಟ್ಟದ ಪ್ರಥಮ ಸಮೀಕ್ಷೆ 
ದೇಶಾದ್ಯಂತ ಪ್ರಥಮ ಬಾರಿಗೆ ಗ್ರಾಮಮಟ್ಟದಲ್ಲಿ ನಡೆಯುತ್ತಿರುವ ಸ್ವಚ್ಚತಾ ಸಮೀಕ್ಷೆಯೇ “ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ಅಭಿಯಾನ -2018′. ಕೇಂದ್ರ ಸರಕಾರದ ಏಜೆನ್ಸಿ ಗ್ರಾಮಗಳಿಗೆ ಬಂದು ಸಮೀಕ್ಷೆ ನಡೆಸಿ ರ್‍ಯಾಂಕಿಂಗ್‌ ನೀಡಲಿದೆ. ಉತ್ತಮ ಗ್ರಾ.ಪಂ.ಗಳಿಗೆ ಅ.2ರಂದು ಪ್ರಶಸ್ತಿ ನೀಡಲಿದೆ. ಇದು ಕೇವಲ ಅಂಕಿ ಅಂಶದ ಆಧಾರದಲ್ಲಿ ಮಾತ್ರವಲ್ಲದೆ ಸ್ಥಳಕ್ಕೆ ಖುದ್ದಾಗಿ ತೆರಳಿ ನಡೆಸುವ ಸಮೀಕ್ಷೆ. ಇದರಲ್ಲಿ ಜನರ ಅಭಿಪ್ರಾಯಗಳಿಗೆ ಹೆಚ್ಚಿನ ಮಾನ್ಯತೆ ಇದೆ. ಶೇ.35ರಷ್ಟು ಅಂಕಗಳು ಬಯಸಲು ಶೌಚಮುಕ್ತವಾಗಿರುವುದಕ್ಕೆ, ಶೇ. 30 ಅಂಕಗಳು ಗ್ರಾಮದ ಅಂಗನವಾಡಿ, ಪೇಟೆ, ಅಂಗಡಿ, ಧಾರ್ಮಿಕ ಸ್ಥಳ, ಆಸ್ಪತ್ರೆಗಳಲ್ಲಿನ ಸ್ವಚ್ಚತೆಗೆ, ಶೇ.35 ಅಂಕಗಳು ಸಾರ್ವಜನಿಕರ ಅಭಿಪ್ರಾಯಕ್ಕೆ ಇರುತ್ತವೆ ಎಂದು ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್‌ ರಾವ್‌  ತಿಳಿಸಿದರು. 

ಗ್ರಾಮ ಸ್ವಚ್ಚತೆ ಸಾಕಾರಗೊಳ್ಳಬೇಕಿದೆ
ಕಸ ವಿಲೇವಾರಿ ಸವಾಲು. ನಗರದಲ್ಲಿ ಈ ಸಮಸ್ಯೆ ಗಂಭೀರವಾಗಿದೆ. ಸ್ವಚ್ಚತಾ ಅಭಿಯಾನಗಳು ಯಶಸ್ವಿಯಾಗಬೇಕಾದರೆ ಜನರು, ಜನಪ್ರತಿನಿಧಿಗಳ ಪೂರ್ಣ ಸಹಕಾರದ ಅಗತ್ಯವಿದೆ. ಬಯಲು ಶೌಚ ಮುಕ್ತ ಭಾರತ ಪರಿಕಲ್ಪನೆ ಶೇ.100ರಷ್ಟು ಸಾಕಾರಗೊಳ್ಳುತ್ತಿದೆ. ಇದೇ ರೀತಿ ಗ್ರಾಮ ಸ್ವಚ್ಚತೆ ಪರಿಕಲ್ಪನೆ ಕೂಡ ಸಾಕಾರಗೊಳ್ಳಬೇಕಿದೆ.
– ರಘುಪತಿ ಭಟ್‌, 
ಉಡುಪಿ ಶಾಸಕರು

ಸ್ವಯಂಸ್ಫೂರ್ತಿ ಯಿಂದ ಆಗಲಿ
ಸ್ವಚ್ಚತಾ ಕಾರ್ಯಕ್ರಮಗಳು ಸ್ವಯಂಸ್ಪೂರ್ತಿಯಿಂದ ನಡೆಯಬೇಕು. ಮನೆಗಳ ಪಕ್ಕದಲ್ಲಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಿದ್ದರೆ ಅದನ್ನು ಮಾಡಬೇಕು. ಅಂತೆಯೇ ತ್ಯಾಜ್ಯ ಘಟಕಗಳ ನಿರ್ವಹಣೆಗೂ ಹೆಚ್ಚಿನ ಆದ್ಯತೆ ನೀಡಬೇಕಿದೆ. ಮಂಗಳೂರಿನಲ್ಲಿ ರಾಮಕೃಷ್ಣ ಮಿಷನ್‌ ನೇತೃತ್ವದಲ್ಲಿ ಸ್ವತ್ಛತಾ ಕೆಲಸ ನಿರಂತರವಾಗಿ ನಡೆಯುತ್ತಿದೆ. ಸುಶಿಕ್ಷಿತರ ಜಿಲ್ಲೆಯೆಂದು ಗುರುತಿಸಲ್ಪಟ್ಟ ಉಡುಪಿ ಜಿಲ್ಲೆಯಲ್ಲಿ ಮತ್ತಷ್ಟು ಜಾಗೃತಿ ಮೂಡಬೇಕು.
– ಲಾಲಾಜಿ ಆರ್‌.ಮೆಂಡನ್‌, 
ಕಾಪು ಶಾಸಕರು

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.