ಹಾಲಾಡಿಯಿಂದ ಉಡುಪಿಗೆ ನೀರಿನ ತಡೆ ತೆರವು


Team Udayavani, Jun 19, 2019, 5:21 AM IST

varahi

ಕುಂದಾಪುರ: ಕುಡಿಯುವ ನೀರಿನ ಸಮಸ್ಯೆ ಯಿಂದ ಕಂಗೆಟ್ಟಿರುವ ಉಡುಪಿಗೆ ಹಾಲಾಡಿಯಿಂದ ನೀರು ಕೊಂಡೊಯ್ಯಲು ಮಾಡಿರುವ ಪ್ರಯತ್ನಗಳು ಇನ್ನೂ ಕೈಗೂಡಿಲ್ಲ. ಟೆಂಡರ್‌ ಪ್ರಕ್ರಿಯೆಯೇ 1 ವರ್ಷದಿಂದ ಬಾಕಿ ಯಾಗಿದೆ. ಪೈಪ್‌ಲೈನ್‌ ಹಾದುಹೋಗುವ ಗ್ರಾ.ಪಂ.ಗಳಿಗೆ ಶುದ್ಧ ನೀರು ಕೊಡಬೇಕೆನ್ನುವ ಬೇಡಿಕೆ ವಿಧಾನಪರಿಷತ್‌ ಅರ್ಜಿ ಸಮಿತಿಯಲ್ಲಿ ಇತ್ಯರ್ಥವಾಗಿದೆ. ಹೊಸದಾಗಿ ಡಿಪಿಆರ್‌ ಮಾಡಿ ಟೆಂಡರ್‌ ಕರೆಯುವ ಪ್ರಕ್ರಿಯೆ ನಡೆಯಬೇಕಿದೆ.

ಯೋಜನೆ ವಿವರ

ಉಡುಪಿ ನಗರಕ್ಕೆ ನೀರುಣಿಸುವ ಸ್ವರ್ಣಾ ನದಿಯ ನೀರು ವರ್ಷದ 8 ತಿಂಗಳು ಮಾತ್ರ ಸಾಲುತ್ತಿದ್ದು, ಉಳಿದ 4 ತಿಂಗಳಿಗೆ ವಾರಾಹಿ ನದಿಯಿಂದ ನೀರು ಒದಗಿಸುವುದು ಯೋಜನೆ. ಇದಕ್ಕಾಗಿ ಅಮೃತ್‌ (ಅಟಲ್ ಮಿಶನ್‌ ರೆಜು ವನೇಶನ್‌ ಆ್ಯಂಡ್‌ ಅರ್ಬನ್‌ ಟ್ರಾನ್ಸ್‌ಫಾರ್ಮೇಶನ್‌) ಯೋಜನೆಯಲ್ಲಿ 122.5 ಕೋ.ರೂ. ವೆಚ್ಚದಲ್ಲಿ ಡಿಪಿಆರ್‌ ಮಾಡಲಾಗಿದೆ. ಹಾಲಾಡಿಯ ಭರತ್ಕಲ್ನಿಂದ 864 ಎಂಎಂ ಗಾತ್ರದ ಪೈಪಿನಲ್ಲಿ 38.5 ಕಿ.ಮೀ. ದೂರದ ಬಜೆ ಅಣೆಕಟ್ಟಿಗೆ ನೀರು ತಂದು ಅಲ್ಲಿ ಶುದ್ಧೀಕರಿಸಿ ಉಡುಪಿಗೆ ಒದಗಿಸುವುದು ಯೋಜನೆ.

ಟೆಂಡರ್‌ಗೆ ತಡೆ

2018 ಮಾ. 27ರಂದು ಟೆಂಡರ್‌ ಕರೆಯಲು ಸಿದ್ಧತೆ ನಡೆದಿತ್ತು. ಪೈಪ್‌ಲೈನ್‌ ಹಾದುಹೋಗುವ ವ್ಯಾಪ್ತಿಯ 10 ಪಂಚಾಯತ್‌ಗಳು 2018 ಮಾ. 6ರಂದು ವಿಶೇಷ ಸಾಮಾನ್ಯ ಸಭೆಯಲ್ಲಿ ತಮಗೂ ಶುದ್ಧ ಕುಡಿಯುವ ನೀರು ಒದಗಿಸ ಬೇಕು, ಈಗಿನ ಟೆಂಡರ್‌ ರದ್ದುಪಡಿಸಬೇಕು, ಹೊಸದಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸಬೇಕು. ಇಲ್ಲದಿದ್ದರೆ ಕೋರ್ಟ್‌ ಮೊರೆ ಹೋಗಲಾಗುವುದೆಂದು ನಿರ್ಣಯಿಸಿ ಸರಕಾರಕ್ಕೆ ನಿರ್ಣಯವನ್ನು ಕಳುಹಿಸಿದ್ದವು. ಪ್ರಯೋಜನ ಕಾಣದಿದ್ದಾಗ ವಿಧಾನಪರಿಷತ್‌ ಸದಸ್ಯರಾಗಿದ್ದ ಪ್ರತಾಪ್‌ಚಂದ್ರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಹಾಲಾಡಿ ಗ್ರಾ.ಪಂ. ಹಾಗೂ ಉಡುಪಿ ಜಿಲ್ಲಾ ರೈತ ಸಂಘ ವಿಧಾನಪರಿಷತ್‌ ಅರ್ಜಿ ಸಮಿತಿ ಮೊರೆ ಹೋಗಿತ್ತು. ಆದ್ದರಿಂದ ಟೆಂಡರ್‌ ಪ್ರಕ್ರಿಯೆ ನಡೆಯಲಿಲ್ಲ.

ನೀರು ಕೊಡಲು ಆದೇಶ

ವಿಧಾನಪರಿಷತ್‌ ಅರ್ಜಿ ಸಮಿತಿಯಲ್ಲಿ ಪಂಚಾಯತ್‌ಗಳಿಗೆ 40 ಎಂಎಲ್ಡಿ ನೀರು ಹಾಲಾಡಿಯಿಂದ ತೆಗೆದು ಶುದ್ಧೀಕರಿಸಿ ಕೊಡಲು ಆದೇಶಿಸಲಾಗಿದೆ. ಹಾಲಾಡಿ ಕಾಲುವೆ ದುರಸ್ತಿ ಇದ್ದಾಗ ಮಾತ್ರ ನೇರ ನೀರು ಕೊಡಬಹುದು ಎಂದು ಸೂಚಿಸಲಾಗಿದೆ. ಅರ್ಜಿ ಸಮಿತಿಯಲ್ಲಿ ಪ್ರಕರಣ ಇತ್ಯರ್ಥವಾಗದೇ ಟೆಂಡರ್‌ ಕರೆಯುವಂತಿರಲಿಲ್ಲ. ಅರ್ಜಿ ಸಮಿತಿ ತೀರ್ಮಾನದಿಂದಾಗಿ ಹೊಸ ಡಿಪಿಆರ್‌ ಮಾಡದೇ ಹಳೆ ಟೆಂಡರ್‌ ಕರೆವಂತಿಲ್ಲ.

ಜಾಗ ಗುರುತಿಸಿಲ್ಲ

ಹಾಲಾಡಿಯಲ್ಲಿ ಜಲ ಶುದ್ಧೀಕರಣ ಘಟಕ ರಚಿಸಲು ಪಂಚಾಯತ್‌ 5 ಕಡೆ ಗುರುತಿಸಿದೆ. ಕಡತ ಮಂದುವರಿ ಯಲಿಲ್ಲ. ಯೋಜನೆ ವತಿಯಿಂದ ನಿರ್ದಿಷ್ಟ ಜಾಗ ಗುರುತಿಸಿಲ್ಲ. ಮಂದಾರ್ತಿ, ಕೊಕ್ಕರ್ಣೆ ಭಾಗದಲ್ಲಿ 5 ಎಕರೆ ಜಾಗಕ್ಕಾಗಿ ಪ್ರಕಟನೆ ಹೊರಡಿಸಿದ್ದು ಅಲ್ಲಿ ಘಟಕ ಮಾಡಿದರೆ ಹಾಲಾಡಿಗೆ ಮತ್ತೆ ನೀರು ತರಬೇಕಾಗುತ್ತದೆ. ನದಿ ನೀರು ಹೋಗಲು, ಶುದ್ಧ ನೀರು ಬರಲು ಎಂದು ಎರಡು ಪ್ರತ್ಯೇಕ ಪೈಪ್‌ಲೈನ್‌ ಮಾಡಬೇಕಾಗುತ್ತದೆ.

ಉಡುಪಿ ಶಾಸಕರ ಭೇಟಿ

ಉಡುಪಿ ಶಾಸಕ ರಘುಪತಿ ಭಟ್ ಅವರು ಸೋಮವಾರ ಭರತ್ಕಲ್ಗೆ ಭೇಟಿ ನೀಡಿದ್ದು ಸ್ಥಳೀಯರಿಗೆ, ಪಂಚಾಯತ್‌ಗೆ ಮಾಹಿತಿ ನೀಡಿಲ್ಲ ಎನ್ನುವ ಆಕ್ಷೇಪ ಕೇಳಿ ಬಂದಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.