ವಿತರಣೆಯಾಗದೆ ತಾ.ಪಂ. ಕಚೇರಿಯಲ್ಲಿ ರಾಶಿ ಬಿದ್ದ ಬಟ್ಟೆ  ಬ್ಯಾಗ್‌ಗಳು!


Team Udayavani, Feb 24, 2019, 1:00 AM IST

vitarane.jpg

ಕಾರ್ಕಳ: ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಾಣದ ಕುರಿತಂತೆ ಜಾಗೃತಿ, ಯೋಜನೆಗಳು ಆಗುತ್ತಲೇ ಇರುತ್ತವೆ. ಆದರೆ ಅವುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಮುಂದಾಗುವವರು ಬಹಳ ವಿರಳ. ಇದಕ್ಕೊಂದು ತಾಜಾ ಉದಾಹರಣೆ ಕಾರ್ಕಳ ತಾಲೂಕು ಪಂಚಾಯತ್‌ನಲ್ಲಿ ವಿತರಣೆಯಾಗದೇ ಉಳಿಸಿಕೊಂಡಿರುವ ಬಟ್ಟೆ ಬ್ಯಾಗ್‌ಗಳು.

ಮನವಿಗೆ ಸ್ಪಂದನೆ
ಗ್ರಾ.ಪಂ. ವ್ಯಾಪ್ತಿಯ ಜನರು ಬಟ್ಟೆ ಚೀಲ ಗಳನ್ನೇ ಬಳಸಬೇಕೆಂಬ ನಿಟ್ಟಿನಲ್ಲಿ ಗಾಂಧಿ ಜಯಂತಿ ಸಂದರ್ಭ ತಾ.ಪಂ. ಬಟ್ಟೆ ಚೀಲ ಒದಗಿಸಿ ಕೊಡುವಂತೆ ಕೆಲವೊಂದು ಸಂಘ-ಸಂಸ್ಥೆ, ಬ್ಯಾಂಕ್‌ಗಳಿಗೆ ಮನವಿ ಮಾಡಿತ್ತು.  ಈ ಮನವಿಗೆ ಸ್ಪಂದಿಸಿ ಸಿಂಡಿಕೇಟ್‌ ಬ್ಯಾಂಕ್‌ ಸುಮಾರು 40 ಸಾವಿರ ರೂ. ಮೊತ್ತದ ಬಟ್ಟೆ ಚೀಲಗಳನ್ನು ಒದಗಿಸಿದ್ದವು.   

ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಾಣ ಮತ್ತು ಬಟ್ಟೆ ಚೀಲ ಬಳಕೆ ಕುರಿತಂತೆ ಕಾರ್ಕಳ ತಾಲೂಕಿನಾದ್ಯಂತ ಡಿಸೆಂಬರ್‌ನಲ್ಲಿ ಪ್ರಚಾರ ಕಾರ್ಯ ನಡೆದಿತ್ತು. ಪ್ರಚಾರ ಕಾರ್ಯವನ್ನು ಅತ್ಯಂತ ಮುತುವರ್ಜಿಯಿಂದ ಮಾಡಿದ ತಾಲೂಕು ಪಂಚಾಯತ್‌ ಬಟ್ಟೆ ಚೀಲಗಳನ್ನು ವಿತರಿಸುವಲ್ಲಿ ವಿಳಂಬ ನೀತಿ ಅನುಸರಿಸಲಾಗಿದೆ.  

ಬಟ್ಟೆಚೀಲಗಳನ್ನು ಸಂಘ-ಸಂಸ್ಥೆಗಳು ತಾ.ಪಂ. ಹಸ್ತಾಂತರಿಸಿದ್ದು, ತಾ.ಪಂ. 60 ಶೇ. ಬಟ್ಟೆಗಳನ್ನು ಮಾತ್ರ ವಿತರಣೆ ಮಾಡಿ ಸುಮ್ಮನಾಗಿದೆ. ಬಳಿಕದ ದಿನಗಳಲ್ಲಿ ಬಟ್ಟೆ ಚೀಲವನ್ನು ವಿರತಣೆ ಮಾಡುವ ಗೊಡವೆಗೆ ಹೋಗದೇ ನಿರ್ಲಕ್ಷ ವಹಿಸಿತ್ತು. ಹೀಗಾಗಿ ಯೋಜನೆಯ ಆರಂಭದಲ್ಲಿ ಕಂಡು ಬಂದ ಉತ್ಸಾಹ ಈಗ ತೋರುತ್ತಿಲ್ಲ ಎಂದು ನಾಗರಿಕರೊಬ್ಬರು ಬೊಟ್ಟು ಮಾಡಿದ್ದಾರೆ.  

ಫ್ಲೆಕ್ಸ್‌ ವಿಚಾರದಲ್ಲಿ ದ್ವಂದ್ವ ನಿಲುವು
ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ನಿಷೇಧಿಸಿ ಹೊರಡಿಸಲಾದ ಆದೇಶದ ಮೇರೆಗೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯವರು ಗ್ರಾ.ಪಂ. ಪಿಡಿಒಗಳಿಗೆ ನೋಟಿಸ್‌ ಜಾರಿ ಮಾಡಿದ್ದರು. ಗ್ರಾ.ಪಂ. ವ್ಯಾಪ್ತಿಯಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳನ್ನು ತೆರವುಗೊಳಿಸುವುದು ಮತ್ತು ಹೊಸದಾಗಿ ಅಳವಡಿಸಲು ಅನುಮತಿ ನೀಡುವಂತಿಲ್ಲ ಎಂದು ನೋಟಿಸ್‌ನಲ್ಲಿ ಹೇಳಿದ್ದರು. ಆದರೆ ಕೆಲವು ಗ್ರಾ.ಪಂ. ಪಿಡಿಓ ಗಳು ತಮ್ಮ ವ್ಯಾಪ್ತಿಯಲ್ಲಿ  ಫ್ಲೆಕ್ಸ್‌ ಸಂಪೂರ್ಣವಾಗಿ ನಿಷೇಧಿಸಿದ್ದರೆ, ಇನ್ನು ಕೆಲವೆಡೆ ಬ್ಯಾನರ್‌ಗಳಿಗೆ ಅವಕಾಶ ಮಾಡಿದ್ದಾರೆ. ಹೀಗಾಗಿ ಏಕರೂಪದ ಕಾನೂನು ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.  

 ಶೀಘ್ರ ವಿತರಣೆ
ಕೆಲವೊಂದು ಗ್ರಾ.ಪಂ.ಗಳು ದಾನಿಗಳಿಂದ ಅಥವಾ ಪಂಚಾಯತ್‌ ಅನುದಾನದಿಂದಬಟ್ಟೆ ಚೀಲಗಳನ್ನು ಈಗಾಗಲೇ ವಿತರಿಸಿವೆ. ಅನುದಾನ ಕಡಿಮೆ ಇರುವ ಪಂಚಾಯತ್‌ಗಳಿಗೆ ತಾ.ಪಂ.ನಲ್ಲಿರುವ ಬಟ್ಟೆ ಚೀಲಗಳನ್ನು ಶೀಘ್ರವಾಗಿ ವಿತರಿಸಲಾಗುವುದು.
– ಮಾಲಿನಿ ಜೆ. ಮಲ್ಯ ಅಧ್ಯಕ್ಷರು ತಾ.ಪಂ. , ಕಾರ್ಕಳ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.