ಮೇಘ ದೂತ ಹವಾಮಾನ ಮುನ್ಸೂಚಿ ಆ್ಯಪ್‌

ಬ್ರಹ್ಮಾವರದ ಹವಾಮಾನ ಮನ್ಸೂಚಿ ಘಟಕದಿಂದ ಉಡುಪಿ, ದ.ಕ ಜಿಲ್ಲೆಗಳಿಗೆ ಮಾಹಿತಿ

Team Udayavani, Mar 6, 2020, 4:48 AM IST

ಮೇಘ ದೂತ ಹವಾಮಾನ ಮುನ್ಸೂಚಿ ಆ್ಯಪ್‌

ಉಡುಪಿ: ಭಾರತೀಯ ಹವಾಮಾನ ಇಲಾಖೆ ಅಭಿವೃದ್ಧಿಪಡಿಸಿರುವ “ಮೇಘದೂತ’ ಹವಾಮಾನ ಸೂಚಿ ಆ್ಯಪ್‌ ಮೂಲಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಭಾಗಕ್ಕೆ ಹವಾಮಾನ ಮಾಹಿತಿ ನೀಡುವ ಕೆಲಸ ಆರಂಭಿಸಿದೆ. ಬ್ರಹ್ಮಾವರ ಗ್ರಾಮೀಣ ಕೃಷಿ ಹವಾಮಾನ ಮನ್ಸೂಚನ ಘಟಕದ ಮೂಲಕ ಮಾಹಿತಿ ನೀಡಲಾಗುತ್ತಿದೆ.

ಸ್ಮಾರ್ಟ್‌ಫೋನ್‌ಲ್ಲೇ ಹವಾಮಾನ ಆಧಾರಿತ ಕೃಷಿ, ಮೀನುಗಾರಿಕೆ ಹವಾಮಾನ ಬದಲಾವಣೆಯ ಮಾಹಿತಿಗಳನ್ನು ಈ ಆ್ಯಪ್‌ ಮೂಲಕ ಪಡೆಯಬಹುದು. ವಾರದ ಹವಾಮಾನವನ್ನು ನಿಖರವಾಗಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಅಪ್‌ಡೇಟ್‌ ಮಾಡಿಕೊಡುತ್ತದೆ. ಒಟ್ಟು 10 ಭಾಷೆಗಳಲ್ಲಿ ಮಾಹಿತಿಯನ್ನು ಪಡೆಯಬಹುದು.

ಬಳಕೆ ಹೇಗೆ?
ಮೊದಲ ಬಾರಿಗೆ ಬಳಸುವವರು ಗೂಗಲ್‌ ಪ್ಲೇಸ್ಟೋರ್‌, ಗೂಗಲ್‌ ಕ್ರೋಮ್‌ ಅಥವಾ ಇತರ ಬ್ರೌಸರ್‌ನಲ್ಲಿ https/[email protected] ಟೈಪ್‌ ಮಾಡಿದಾಗ ಮೇಘದೂತ್‌ ಆ್ಯಪ್‌ನ ಹೋಂ ಪೇಜ್‌ ಬರುತ್ತದೆ ಇಲ್ಲಿ ಇನ್‌ಸ್ಟಾಲ್‌ಗೆ ಕ್ಲಿಕ್‌ ಮಾಡಬೇಕು. ಆ್ಯಪ್‌ ಡೌನ್ಲೋಡ್ ಆದರ ಬಳಿಕ ನೊಂದಣಿ ಮಾಡಲು ಭಾಷೆಯ ಆಯ್ಕೆ, ಹೆಸರು, ದೂರವಾಣಿ ಸಂಖ್ಯೆ, ರಾಜ್ಯ ಮತ್ತು ಜಿಲ್ಲೆಯನ್ನು ಆಯ್ಕೆ ಮಾಡಿ ನೋಂದಣಿ ಆಯ್ಕೆ ಮೇಲೆ ಕ್ಲಿಕ್‌ ಮಾಡಿದಾಗ ನೋಂದಣಿಯಾಗಿರುವುದಾಗಿ ಮೊಬೈಲ್‌ ಪರದೆಯ ಮೇಲೆ ಹೆಸರು ಮೂಡುತ್ತದೆ. ಇದಾದ ನಂತರ ಲಾಗಿನ್‌ ಆಗಬಹುದು.

ನಾಲ್ಕು ಹಂತದ ಮಾಹಿತಿ
ಹಿಂದಿನ 10 ದಿನಗಳ ಹವಾಮಾನ ವರದಿಯ ಮಾಹಿತಿಯನ್ನು ಪಡೆಯಬಹುದು. ಪ್ರತಿ ದಿನದ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಹಾಗೂ ಮಳೆಯ ಪ್ರಮಾಣ ಕುರಿತಾದ ಮಾಹಿತಿಯು ಲಭ್ಯವಿರುತ್ತದೆ. ಮುಂದಿನ 5 ದಿವಸಗಳ ಗರಿಷ್ಠ ಮತ್ತು ಕನಿಷ್ಠ ತಾಪಮಾನ , ಆದ್ರತೆ, ಮಳೆ ಪ್ರಮಾಣ, ಮೋಡಗಳ ಮಾಹಿತಿ, ಗಾಳಿಯ ದಿಕ್ಕು ಮತ್ತು ವೇಗಗಳ ಕುರಿತು ಮುನ್ಸೂಚನೆಯ ಮಾಹಿತಿಯನ್ನು ಪಡೆಯಬಹುದು.

ರಾಜ್ಯ ಹಾಗೂ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಾಗ ಆಯಾ ಜಿಲ್ಲೆಗೆ ಅನುಗುಣವಾದ ಪ್ರಸ್ತುತ ಮುನ್ಸೂಚನಾ ಹವಾಮಾನ (ಗರಿಷ್ಠ ಮತ್ತು ಕನಿಷ್ಠ ತಾಪಮಾನ, ಮಳೆಯ ಪ್ರಮಾಣ) ಆಧಾರಿತ ಕೃಷಿ ಹಾಗೂ ಜಾನುವಾರು ಸಲಹೆಗಳನ್ನು ಪಡೆಯಬಹುದು.

ಅನುಕೂಲ
ಬದಲಾಗುತ್ತಿರುವ ಹವಾಮಾನ ವೈಪರೀತ್ಯದಿಂದ ರೈತರು ಸಾಕಷ್ಟು ನಷ್ಟವನ್ನು ಅನುಭವಿಸುತ್ತಿದ್ದಾರೆ. ಇದಕ್ಕಾಗಿ ಹವಾಮಾನ ಮುನ್ಸೂಚನೆ ಆಧರಿಸಿ ನೀಡುವ ಸಲಹೆ ಅನುಸರಿಸುವುದು ಅವಶ್ಯ. ಇದರಿಂದ ಬೆಳೆ ನಷ್ಟವನ್ನು ಕಡಿಮೆ ಮಾಡಿಕೊಂಡು ಆದಾಯ ಹೆಚ್ಚಿಸಿಕೊಳ್ಳಬಹುದಾಗಿದೆ. ಈ ಆ್ಯಪ್‌ ಕೃಷಿಕರು, ಮೀನುಗಾರರು, ಜನಸಾಮಾನ್ಯರಿಗೆ ಅನುಕೂಲವಾಗಲಿದೆ.
-ರಂಜಿತ್‌. ಟಿ. ಎಚ್‌., ತಾಂತ್ರಿಕ ಅಧಿಕಾರಿ

ಲಾಭ ಹೇಗೆ
ದೇಶೀಯವಾಗಿ ಅಭಿವೃದ್ಧಿಗೊ ಳಿಸಿರುವುದರಿಂದಾಗಿ ನಿಖರ ಮಾಹಿತಿ ದೊರೆಯಲಿದೆ. ಮುಖ್ಯವಾಗಿ ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ಅಗತ್ಯವಾದ ವಾತಾವರಣವನ್ನು ತಿಳಿಯಲು ಹಾಗೇ ಕೃಷಿ ಚಟುವಟಿಕೆಗೆ ಅಗತ್ಯವಾದ ಮಾಹಿತಿಯನ್ನು ಪಡೆಯಬಹುದಾಗಿದೆ. ಆಯಾ ಪ್ರದೇಶಕ್ಕೆ ಅನುಗುಣವಾಗಿ ಜಾನುವಾರು, ಕೋಳಿ, ಕುರಿ ಸಾಕಾಣಿಕೆ, ರೇಷ್ಮೆ ಕೃಷಿಯ ಮಾಹಿತಿಯನ್ನೂ ಒಳಗೊಂಡಿದೆ. ಋತುವಿಗೆ ಅನುಗುಣವಾಗಿ ಜಾನುವಾರುಗಳಲ್ಲಿ ಬರಬಹುದಾದ ಕಾಯಿಲೆ, ಲಸಿಕೆ ಜತೆಗೆ ಯಾವ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂಬ ಮಾಹಿತಿಯೂ ಇರಲಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.