Kollur mookambika ದೇವಳದಲ್ಲಿ ರಿಷಬ್ – ಬೊಮ್ಮಾಯಿ ಮಾತುಕತೆ: ಮತ್ತೋರ್ವ ಸ್ಟಾರ್ ಪ್ರಚಾರಕ?


Team Udayavani, Apr 13, 2023, 1:08 PM IST

ಕೊಲ್ಲೂರು ದೇವಾಲಯದಲ್ಲಿ ರಿಷಬ್ – ಬೊಮ್ಮಾಯಿ ಮಾತುಕತೆ: ಮತ್ತೋರ್ವ ಸ್ಟಾರ್ ಪ್ರಚಾರಕ?

ಕುಂದಾಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ಭೇಟಿ ನೀಡಿ, ದೇವಿ ದರ್ಶನ ಪಡೆದರು. ಈ ವೇಳೆ ಖ್ಯಾತ ನಟ- ನಿರ್ದೇಶಕ ರಿಷಬ್ ಶೆಟ್ಟಿ ಕೂಡಾ ಜತೆಗೆ ಕಾಣಿಸಿಕೊಂಡಿದ್ದು, ಹಲವರ ಹುಬ್ಬೇರಿಸುವಂತೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರು ಜತೆ ಹಲವು ಬಿಜೆಪಿ ನಾಯಕರೂ ಇದ್ದರು. ಆದರೆ ಇದೇ ವೇಳೆ ಕಾಂತಾರ ಖ್ಯಾತಿಯ ನಟ ರಿಷಬ್ ಶೆಟ್ಟಿ ಕೂಡಾ ದೇವಸ್ಥಾನದಲ್ಲಿದ್ದರು. ಸಿಎಂ ಬೊಮ್ಮಾಯಿ ಮತ್ತು ರಿಷಬ್ ಭೇಟಿಯಾಗಿ ಮಾತುಕತೆ ನಡೆಸಿದರು.

ಬೊಮ್ಮಾಯಿ- ರಿಷಬ್ ಭೇಟಿ ಹಲವು ಗುಸುಗುಸುಗಳಿಗೆ ಕಾರಣವಾಗಿದೆ. ಕೆಲ ದಿನಗಳ ಹಿಂದಷ್ಟೇ ನಟ ಕಿಚ್ಚ ಸುದೀಪ ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ನೇಮಿಸಿದ್ದ ಬಿಜೆಪಿ ಇದೀಗ ಕರಾವಳಿ ಭಾಗದ ಮತ ಸೆಳೆಯಲು ರಿಷಬ್ ಮೊರೆಹೋಗಿದೆಯೇ ಎಂಬ ಮಾತುಗಳು ಕೇಳಿಬಂದಿದೆ. ಇತ್ತೀಚೆಗಷ್ಟೇ ಬ್ಲಾಕ್ ಬಸ್ಟರ್ ಸಿನಿಮಾ ಕೊಟ್ಟ ಅವರು ಕಮಲ ಪಾಳಯದ ಬೆಂಬಲಕ್ಕೆ ನಿಂತರೆ ಕರಾವಳಿ ಸೇರಿ ಹಲವು ಕಡೆ ಪಕ್ಷಕ್ಕೆ ಬೆಂಬಲವಾಗಬಹುದು ಎನ್ನಲಾಗಿದೆ.

ಇದನ್ನೂ ಓದಿ:ಅರಂತೋಡು: ಕೆರೆಗೆ ಬಿದ್ದ ನಾಲ್ಕು ಕಾಡನೆಗಳು ಕಾಡಿನತ್ತ; ಕಾರ್ಯಯೋಜನೆ ಯಶಸ್ವಿ !

ಆದರೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅವರು ನಮ್ಮ ಸಿದ್ದಾಂತ ಹತ್ತಿರವಿದ್ದವರು. ನಮ್ಮ ಸಿದ್ದಾಂತ ಪ್ರತಿಪ್ರಾದನೆ ಮಾಡಿದವರು ರಿಷಬ್. ಆದರೆ ಅವರಲ್ಲಿ ಯಾವುದೇ ಕ್ಯಾಂಪೇನ್ ವಿಚಾರ ಮಾತನಾಡಿಲ್ಲ. ಅವರು ಮೊದಲಿಂದಲೂ ಒಳ್ಳೆಯ ಸ್ನೇಹಿತರು. ಅವರು ದೇವಸ್ಥಾನಕ್ಕೆ ಬರುವುದು ನನಗೆ ಗೊತ್ತೇ ಇರಲಿಲ್ಲ. ಪ್ರಚಾರಕ್ಕೆ ಬಳಸಿಕೊಳ್ಳುವ ಯಾವುದೇ ಯೋಚನೆಯಿಲ್ಲ ಎಂದರು.

ಕೊಲ್ಲೂರು ದೇವಿಯಲ್ಲಿ ಕನ್ನಡ ಜನರ ಸುಭೀಕ್ಷೆಗೆ ಬೇಡಿಕೊಂಡೆ. ನವ ನಾಡು ಜನರಿಗೆ ಒಳ್ಳೆಯದಾಗಲಿಯೆಂದು ಬೇಡಿಕೊಂಡೆ ಎಂದರು.

ಉಡುಪಿಯಲ್ಲಿ ಹೊಸ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಯೋಗ ಆಲ್ಲ, ರಿಸ್ಕ್ ಅಲ್ಲ. ಈಗ ಇರುವವರು ಪ್ರಬಲ ಸಂಘಟನೆಯಿಂದ ಬಂದವರು. ಸಂಘಟನೆಯಲ್ಲಿ ಪ್ರಬಲ ಅತ್ಯಂತ ಗಟ್ಟಿ ಇರುವವರನ್ನು ಆಯ್ಕೆ ಮಾಡಿದ್ದೇವೆ ಎಂದರು.

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.