ಗೂಂಡಾ ರಾಜಕೀಯಕ್ಕೆ ಸಿಎಂ ಬೆಂಬಲ: ಕೋಟ
Team Udayavani, Sep 22, 2018, 6:00 AM IST
ಉಡುಪಿ: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರದ ದಬ್ಟಾಳಿಕೆ ರಾಜಕೀಯವನ್ನು ಕಾಣುತ್ತಿದ್ದೇವೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಉಡುಪಿಯ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ರಾಜಕೀಯ ನಡೆಸುತ್ತಿದ್ದಾರೆ. ಸರಕಾರ ಕೂಡ ಇಂತಹ ಕೃತ್ಯವನ್ನು ಬೆಂಬಲಿಸುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು. ಮುಖ್ಯಮಂತ್ರಿ ಕುಮಾರಸ್ವಾಮಿ ದಂಗೆ ಏಳಲು ಕರೆಕೊಡುತ್ತೇನೆ ಎಂದು ಭಯೋತ್ಪಾದಕರ ಮಾದರಿಯಲ್ಲಿ ಬೆದರಿಕೆ ಹಾಕಿರುವುದು ಆಶ್ಚರ್ಯಕರ. ಇಷ್ಟರ ವರೆಗೆ ಯಾವುದೇ ಮುಖ್ಯಮಂತ್ರಿ ಇಂತಹ ಹೇಳಿಕೆ ನೀಡಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ ಎಂದರು.
ಸಂಪುಟದಿಂದ ಡಿಕೆಶಿ ಕೈಬಿಡಿ
ಐಟಿ, ಇಡಿ ಸ್ವತಂತ್ರ ಸಂಸ್ಥೆ ಎಂದು ಗೃಹಮಂತ್ರಿ ರಾಜನಾಥ್ ಸಿಂಗ್ ಹೇಳಿದ್ದಾರೆ. ಡಿಕೆಶಿ ಅವರಿಗೆ ಬಂದಿರುವ ನೊಟೀಸ್ಗೆ ಕೇಂದ್ರ ಸರಕಾರ ಉತ್ತರದಾಯಿಯಲ್ಲ. ಎಐಸಿಸಿಗೆ ಡಿಕೆಶಿ ಎಟಿಎಂ ಎಂಬ ಆರೋಪ ಬಂದಾಗ, ಇಡಿಯಿಂದ ನೋಟಿಸ್ ಜಾರಿಯಾದಾಗಲೇ ಸಂಪುಟದಿಂದ ಕೈಬಿಡಬೇಕಿತ್ತು ಎಂದರು.
ರಾಜಕೀಯದಲ್ಲಿ ಸಾಂದರ್ಭಿಕ ಸಮಸ್ಯೆಗಳು ಎದುರಾದ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು ಬಿಜೆಪಿ ಸಿದ್ಧ ಎಂಬ ಸೂಚನೆ ನೀಡಿರುವುದು ನಿಜ. ಶಾಸಕರು ಬೆಂಬಲ ನೀಡಿದರೆ ಅಧಿಕಾರ ಹಿಡಿಯುತ್ತೇವೆ. ಆದರೆ ಗೂಂಡಾಗಿರಿ ರಾಜಕಾರಣ ಮೂಲಕ ಅಧಿಕಾರ ನಡೆಸಬಹುದು ಎನ್ನುವ ಭ್ರಮೆಯಿಂದ ಕಾಂಗ್ರೆಸ್ ಜೆಡಿಎಸ್ನವರು ಹೊರಬರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ