ಕರಾವಳಿ: ಸಾವಯವ ಕೃಷಿ ಹೆಚ್ಚಳ: ಉಡುಪಿ-2,201, ದ.ಕ.-1,034 ರೈತರಿಂದ ಜೀವಸ್ನೇಹಿ ಕೃಷಿ


Team Udayavani, Jan 2, 2023, 7:25 AM IST

ಕರಾವಳಿ: ಸಾವಯವ ಕೃಷಿ ಹೆಚ್ಚಳ: ಉಡುಪಿ-2,201, ದ.ಕ.-1,034 ರೈತರಿಂದ ಜೀವಸ್ನೇಹಿ ಕೃಷಿ

ಉಡುಪಿ: ಹಿಂದಿನಿಂದಲೂ ರಾಸಾಯನಿಕ ಕೃಷಿಯತ್ತ ಹೆಚ್ಚು ಮುಖ ಮಾಡದೆ ಸಹಜ ಸಾವಯವ ಕೃಷಿಯನ್ನು ನೆಚ್ಚಿಕೊಂಡಿದ್ದ ಕರಾವಳಿಯ ಕೃಷಿಕರು ಸರಕಾರದ ಪ್ರೋತ್ಸಾಹದ ಪರಿಣಾಮವಾಗಿ ಈಗ ಸಂಪೂರ್ಣ ಸಾವಯವದತ್ತ ಒಲವು ತೋರುತ್ತಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬೆಳೆಗಳಿಗೆ ರಾಸಾಯನಿಕಗಳ ಬಳಕೆ ತೀರಾ ಕಡಿಮೆ. ಇದರ ನಡುವೆಯೇ ಪ್ರಸ್ತುತ ಸಂಪೂರ್ಣ ಸಾವಯವ- ನೈಸರ್ಗಿಕ ಕೃಷಿಗೆ ರೈತರು ಹೆಚ್ಚು ಒತ್ತು ನೀಡುತ್ತಿದ್ದಾರೆ.

ಉಡುಪಿಯ 2,201 ರೈತರು 4,601 ಎಕ್ರೆ ಪ್ರದೇಶ ದಲ್ಲಿ ಸಂಪೂರ್ಣ ಸಾವಯವ ಕೃಷಿ ಮಾಡು ತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ 1,034 ರೈತರು 1,439 ಎಕ್ರೆ ಪ್ರದೇಶದಲ್ಲಿ ಸಾವಯವ ಪದ್ಧತಿ ಅಳವಡಿಸಿದ್ದಾರೆ. ಉತ್ತರ ಕನ್ನಡದಲ್ಲಿ 1,785, ಕೊಡಗಿನಲ್ಲಿ 1,778 ರೈತರು ಇದೇ ಪದ್ಧತಿ ಅನುಸರಿಸುತ್ತಿದ್ದಾರೆ.

ರಾಜ್ಯದಲ್ಲಿ 83,058 ರೈತರು ಸುಮಾರು 2,12,198.82 ಎಕ್ರೆಯಲ್ಲಿ ಸಂಪೂರ್ಣ ಸಾವಯವ ಕೃಷಿ ಪದ್ಧತಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಭತ್ತ, ರಾಗಿ, ಅಡಿಕೆ, ತೆಂಗು, ಶುಂಠಿ ಜತೆಗೆ ವಿವಿಧ ಬಗೆಯ ತರಕಾರಿಗಳನ್ನು ಬೆಳೆಯುತ್ತಿದ್ದಾರೆ.
ಇತ್ತೀಚೆಗಿನ ವರ್ಷಗಳಲ್ಲಿ ಸಾವಯವ ಕೃಷಿಗೆ ಒಗ್ಗಿಕೊಂಡಿರುವ ಜಿಲ್ಲೆಗಳಲ್ಲಿ ವಿಜಯಪುರ ಮೊದಲ ಸ್ಥಾನದಲ್ಲಿದೆ. ಇಲ್ಲಿನ 8,722 ರೈತರು 24,964 ಎಕ್ರೆ ಪ್ರದೇಶದಲ್ಲಿ ಸಾವಯವ ಕೃಷಿ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ 20,692 ಎಕ್ರೆ ಪ್ರದೇಶದಲ್ಲಿ 7,661 ರೈತರು ಈ ಕೃಷಿ ಪದ್ಧತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕೇವಲ 197 ರೈತರು 955 ಎಕ್ರೆ ಪ್ರದೇಶದಲ್ಲಿ ಸಾವಯವ ಕೃಷಿ ಮಾಡುತ್ತಿದ್ದಾರೆ.

ಸಾವಯವ ಕೃಷಿ ದೃಢೀಕರಣ
ಸಾವಯವ ಅಥವಾ ನೈಸರ್ಗಿಕ ಕೃಷಿ ಅನುಸರಿಸುವ ರೈತ ಅಥವಾ ರೈತರ ಗುಂಪುಗಳ ಪ್ರದೇಶವನ್ನು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ (ಕೆಎಸ್‌ಎಸ್‌ಒಸಿಎ)ಯ ಮೂಲಕ ಸಾವಯವ ಪ್ರಮಾಣೀಕರಣಕ್ಕೆ ನೋಂದಾ ಯಿಸುವ ಮೂಲಕ ಸಾವಯವ ಕೃಷಿ ದೃಢೀಕರಣ ನೀಡಲಾಗುತ್ತದೆ. ನೈಸರ್ಗಿಕ ಕೃಷಿ ಪದ್ಧತಿಯ ವೈಜ್ಞಾ ನಿಕ ಮೌಲೀಕರಣವನ್ನು ಕೃಷಿ ವಿಶ್ವವಿದ್ಯಾಲಯಗಳ ಮೂಲಕ ರಾಜ್ಯದ 10 ಹವಾಮಾನ ವಲಯಗಳ ಸಂಶೋಧನ ಕೇಂದ್ರಗಳಲ್ಲಿ ಪ್ರಾಯೋಗಿಕ ಪ್ರಯೋ ಜನಗಳನ್ನು ನಡೆಸಲಾಗುತ್ತಿದೆ.

ಪ್ರೋತ್ಸಾಹ
ಸಾವಯವ ಅಥವಾ ನೈಸರ್ಗಿಕ ಕೃಷಿ ಅಳವಡಿಸಲು ರೈತರಿಗೆ ಅನು ಕೂಲ ಆಗುವಂತೆ ರಾಜ್ಯದ ಎಲ್ಲ ಕೃಷಿ, ತೋಟಗಾರಿಕೆ ಇಲಾಖೆ ಮೂಲಕ ತಲಾ 1,000 ಎಕ್ರೆ ಪ್ರದೇಶದ ರೈತರ ಹೊಲಗಳಲ್ಲಿ ನೈಸರ್ಗಿಕ ಕೃಷಿ ಅಧ್ಯಯನಗಳನ್ನು ನಡೆಸಲು ಸರಕಾರ ಯೋಜನೆ ರೂಪಿಸಿದೆ. ಅದರಂತೆ ಯೋಜನ ಪ್ರದೇಶಗಳು, ರೈತರು ಮತ್ತು ಕ್ಲಸ್ಟರ್‌ಗಳನ್ನು ಗುರುತಿಸ ಲಾಗುತ್ತಿದೆ. ಎಲ್ಲ ಕ್ಲಸ್ಟರ್‌ಗಳಲ್ಲೂ ಸಂಬಂಧಪಟ್ಟವರಿಗೆ ತರಬೇತಿ ನೀಡಲಾಗುತ್ತಿದೆ. ಅಲ್ಲದೆ ಯೋಜನ ಪ್ರದೇಶದಲ್ಲಿ ಆಯ್ಕೆಯಾಗಿ, ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತರಿಗೆ ಪ್ರತಿ ಎಕ್ರೆಗೆ 7 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ.

ರಾಸಾಯನಿಕ ಬಳಕೆಯೇ ಕಡಿಮೆ
ಕರಾವಳಿ ಜಿಲ್ಲೆಯಲ್ಲಿ ರಾಸಾಯನಿಕಗಳ ಬಳಕೆ ಅನ್ಯ ಜಿಲ್ಲೆಗಳಿಗೆ ಹೋಲಿಸಿದರೆ ತೀರಾ ಕಡಿಮೆ. ಕೆಲವು ಜಿಲ್ಲೆ ಗಳ  ಹೋಬಳಿ ಯೊಂದರಲ್ಲಿ ಬಳಕೆ ಮಾಡುವಷ್ಟು ರಾಸಾ  ಯನಿಕ ವನ್ನು ಇಲ್ಲಿನ ಇಡೀ ಜಿಲ್ಲೆಯ ರೈತರು ಬಳ ಸುವುದಿಲ್ಲ. ಅಲ್ಲದೆ ಇಲ್ಲಿ ಮಳೆಯ ಪ್ರಮಾಣ ಹೆಚ್ಚಿರು ವುದ  ರಿಂದ ರಾಸಾಯನಿಕಗಳು ಭೂಮಿ ಯನ್ನು ಸೇರುವು ದಿಲ್ಲ, ನೀರಿನಲ್ಲಿ ಕೊಚ್ಚಿ ಹೋಗುತ್ತವೆ. ಬೆಳೆಗಳಿಗೆ ಔಷಧ ಸಿಂಪಡನೆ ಕೂಡ ಇಲ್ಲಿ ಕಡಿಮೆ. ಹೀಗಾಗಿ ಕರಾವಳಿ ಜಿಲ್ಲೆ ಗಳು ಹಿಂದಿನಿಂದಲೂ ಸಾವಯವ ಪದ್ಧತಿ ಮಾದರಿ ಯಲ್ಲೇ ಕೃಷಿ ಮಾಡಿ ಕೊಂಡು ಬರು ತ್ತಿವೆ ಎಂದು ಉಡುಪಿ ಜಿಲ್ಲಾ ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ| ಕೆಂಪೇಗೌಡ ಅವರು ಮಾಹಿತಿ ನೀಡಿದ್ದಾರೆ.

ಸಾವಯವ ಪದ್ಧತಿಯಲ್ಲಿ ಕೃಷಿ ಮಾಡಿ ಇಳುವರಿ ಪಡೆದ ವಿವಿಧ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ಉತ್ತಮ ಧಾರಣೆ ದೊರಕಿಸಿಕೊಡಲು ಹಲವು ಕಾರ್ಯಕ್ರಮ ಗಳನ್ನು ನಡೆಸಲಾಗುತ್ತಿದೆ. ಸಾವಯವ ಕೃಷಿಕರ ಸಂಘ ಗಳ ಒಕ್ಕೂಟದ ಮೂಲಕ ಬೆಳೆ ಸಂಸ್ಕರಣೆ, ವರ್ಗೀಕರಣ, ಮೌಲ್ಯವರ್ಧನೆ, ಪ್ಯಾಕಿಂಗ್‌, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
-ಬಿ.ಸಿ. ಪಾಟೀಲ್‌, ಕೃಷಿ ಸಚಿವ

 

ಟಾಪ್ ನ್ಯೂಸ್

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.