ಕರಾವಳಿ: ಪೆಟ್ರೋಲ್‌ಗೆ 5 ದಿನಗಳಲ್ಲಿ 80 ಪೈಸೆ ಏರಿಕೆ


Team Udayavani, Dec 6, 2020, 5:30 AM IST

ಕರಾವಳಿ: ಪೆಟ್ರೋಲ್‌ಗೆ 5 ದಿನಗಳಲ್ಲಿ 80 ಪೈಸೆ ಏರಿಕೆ

ಮಂಗಳೂರು/ಉಡುಪಿ: ಕೆಲವು ದಿನಗಳಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ನಿರಂತರ ಹೆಚ್ಚುತ್ತಲೇ ಇದೆ. 2018ರ ಬಳಿಕ ಶುಕ್ರವಾರ (ಡಿ. 5) ಗರಿಷ್ಠ ಬೆಲೆ ದಾಖಲಾಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರುತ್ತಿರುವ ಪರಿಣಾಮ ಪೆಟ್ರೋಲ್‌, ಡೀಸೆಲ್‌ ಬೆಲೆ ಗಗನಕ್ಕೇರುತ್ತಿದ್ದು, ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ. ದೈನಂದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯ ಜತೆಗೆ ತೈಲ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಡಿಸೆಂಬರ್‌ ಆರಂಭದಿಂದ ಇಂದಿನ ವರೆಗೆ ನೋಡಿದರೆ ಐದೇ ದಿನಗಳಲ್ಲಿ ಒಂದು ಲೀಟರ್‌ ಪೆಟ್ರೋಲ್‌ಗೆ ದ.ಕ.ದಲ್ಲಿ 82 ಪೈಸೆ, ಉಡುಪಿಯಲ್ಲಿ 80 ಪೈಸೆ, ಡೀಸೆಲ್‌ ಬೆಲೆ ದ.ಕ.ದಲ್ಲಿ 96 ಪೈಸೆ, ಉಡುಪಿಯಲ್ಲಿ 94 ಪೈಸೆ ಏರಿಕೆ ಕಂಡಿದೆ.

ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಡೀಸೆಲ್‌ಗಿಂತ ಪೆಟ್ರೋಲ್‌ ಅಧಿಕ ಮಾರಾಟವಾಗುತ್ತದೆ. ಮಾರಾಟಗಾರರು ಹೇಳುವ ಪ್ರಕಾರ, ಒಂದು ತಿಂಗಳಿನಲ್ಲಿ 15 ಲಕ್ಷ ಲೀಟರ್‌ ಪೆಟ್ರೋಲ್‌ ಮತ್ತು 25 ಲಕ್ಷ ಲೀಟರ್‌ ಡೀಸೆಲ್‌ ಮಾರಾಟವಾಗುತ್ತದೆ. ಆದರೆ ಕೊರೊನಾ ಲಾಕ್‌ಡೌನ್‌ ಸಡಿಲವಾದರೂ ನಗರದ ಎಲ್ಲ ಚಟುವಟಿಕೆಗಳು ಸಹಜಸ್ಥಿತಿಗೆ ಬಂದಿಲ್ಲ. ಇದೇ ಕಾರಣಕ್ಕೆ ಪೆಟ್ರೋಲ್‌ಗೆ ಹೋಲಿಕೆ ಮಾಡಿದರೆ ಡೀಸೆಲ್‌ ಮಾರಾಟ ಈಗಲೂ ಕಡಿಮೆ ಇದೆ.

ಪೆಟ್ರೋಲ್‌ಗೆ 90 ರೂ.?
ಪೆಟ್ರೋಲ್‌ ಮತ್ತು ಡೀಸೆಲ್‌ ದರ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯೇ ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಪೆಟ್ರೋಲ್‌ ಬೆಲೆ 90 ರೂ. ತಲುಪುವ ಸಾಧ್ಯತೆ ಇದೆ. ವಾಹನಗಳಿಗೆ ಸಿಎನ್‌ಜಿ ವ್ಯವಸ್ಥೆ ಬಂದ ಬಳಿಕ ತೈಲ ಬೆಲೆ ಇಳಿಕೆ ಕಾಣಬಹುದು. ಲಾಕ್‌ಡೌನ್‌ನಿಂದ ಪೆಟ್ರೋಲ್‌ ಮಾರಾಟ ಯಥಾಸ್ಥಿತಿಯತ್ತ ಬಂದಿದ್ದು, ಡೀಸೆಲ್‌ ಮಾರಾಟ ಇನ್ನೂ ಸಹಜತೆಗೆ ಬಂದಿಲ್ಲ. – ವಾಮನ ಪೈ, ದ.ಕ. ಜಿಲ್ಲಾ ಪೆಟ್ರೋಲ್‌ ವ್ಯಾಪಾರಿಗಳ ಸಂಘದ ಮಾಜಿ ಅಧ್ಯಕ್ಷ

ಅಬಕಾರಿ ಶುಲ್ಕ ಇಳಿಸಿದರೆ ಸೂಕ್ತ
ಕೋವಿಡ್‌ ಸಂದರ್ಭ ಕೇಂದ್ರ ಸರಕಾರ ಇಂಧನದ ಮೇಲಿನ ಅಬಕಾರಿ ಶುಲ್ಕವನ್ನು 13 ರೂ. ಹೆಚ್ಚಿಸಿದೆ. ಇದರ ಪ್ರಮಾಣವನ್ನು ಇಳಿಸಿದರೆ ಇಂಧನದ ದರವೂ ಕಡಿಮೆಯಾಗಲಿದೆ.
– ಆನಂದ ಕಾರ್ನಾಡ್‌, ಕಾರ್ಯದರ್ಶಿ, ಸ್ಟೇಟ್‌ ಪೆಟ್ರೋಲಿಯಂ ಡೀಲರ್ಸ್‌ ಫೆಡರೇಶನ್‌

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.