ತೆಂಗಿನ ಬೆಲೆ ಕುಸಿತ- ಬೆಳೆಗಾರ ಕಂಗಾಲು

ಕಳಪೆ ದರ್ಜೆ, ಅಗ್ಗ ದರದ ತೆಂಗು ಉತ್ಪನ್ನಗಳ ಹಾವಳಿ ಕಾರಣ

Team Udayavani, Jun 7, 2019, 9:37 AM IST

cocunut

ಉಡುಪಿ: ಎರಡು ವರ್ಷಗಳ ಹಿಂದೆ ತೆಂಗಿನಕಾಯಿ ಬೆಲೆ ಕುಸಿತವಾದಾಗ ಸರಕಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಮೂಲಕ ಕೆಜಿಗೆ 16 ರೂ. ಬೆಂಬಲ ಬೆಲೆಯಲ್ಲಿ ಖರೀದಿಸಿತ್ತು. ಈಗಲೂ ಧಾರಣೆ ಕುಸಿತವಾಗಿದೆ. ಉಡುಪಿ ಜಿಲ್ಲೆಯಲ್ಲಿ 22,120 ಹೆ. ಪ್ರದೇಶದಲ್ಲಿ, ದ.ಕ. ಜಿಲ್ಲೆಯಲ್ಲಿ ಇಷ್ಟೇ ಪ್ರಮಾಣದಲ್ಲಿ ತೆಂಗು ಬೆಳೆಯುವ ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.

2018ರ ಜೂನ್‌ ಆರಂಭದಲ್ಲಿ ಒಣ ಕೊಬ್ಬರಿ ದರ ಕೆಜಿಗೆ 137 ರೂ. ಇತ್ತು. ಈಗ 100 ರೂ.ಗಿಂತ ಕಡಿಮೆ ಇದೆ. ತೆಂಗಿನಕಾಯಿ ದರ ಕೆಜಿಗೆ 41- 42 ರೂ. ಇತ್ತು, ಈಗ 24-25 ರೂ. ಇದೆ. ಇದು ರೈತರು ಮಾರಾಟ ಮಾಡುವ ದರ. ಒಂದೂವರೆ ತಿಂಗಳ ಹಿಂದೆ ತೆಂಗಿನಕಾಯಿ ಬೆಲೆ ಕೆಜಿಗೆ 32-34 ರೂ. ಇತ್ತು.

ತೆಂಗಿನ ಒಣಪುಡಿ ಮಾಡುವ ಘಟಕಗಳ ಉತ್ಪನ್ನಗಳಿಗೆ ಬೇಡಿಕೆ ಕುಸಿದದ್ದೇ ದರ ಕುಸಿತಕ್ಕೆ ಕಾರಣ ಎನ್ನಲಾಗಿದೆ. ಇದು ಉತ್ತರ ಭಾರತ ಮತ್ತು ಕೊಲ್ಲಿ ರಾಷ್ಟ್ರಗಳಿಗೆ ರಫ್ತು ಆಗುತ್ತಿತ್ತು. ಅಲ್ಲಿ ಬೇಡಿಕೆ ಕುಸಿದುದರ ಪರಿಣಾಮ ಇಲ್ಲೂ ಆಗಿದೆ. ಪರಿಣಾಮ ಘಟಕದವರು ರೈತರಿಂದ ಖರೀದಿಸುತ್ತಿಲ್ಲ. ಥಾçಲಂಡ್‌, ಇಂಡೋನೇಶ್ಯಾ, ವಿಯೆಟ್ನಾಂನಿಂದ ಅಗ್ಗದ ದರದಲ್ಲಿ ತೆಂಗಿನಕಾಯಿ ಪೂರೈಕೆಯಾಗುತ್ತಿರುವುದರಿಂದ ವಿದೇಶಿ ಮಾರು ಕಟ್ಟೆಯಲ್ಲಿ ಭಾರತದ ಉತ್ಪನ್ನಗಳಿಗೆ ಬೇಡಿಕೆ ಕುಸಿದಿದೆ. ವಿದೇಶಿ ಉತ್ಪಾದಕರು ಕಡಿಮೆ ದರದಲ್ಲಿ ಕಡಿಮೆ ಗುಣ ಮಟ್ಟದ ಪೌಡರ್‌ನ್ನು ಭಾರತಕ್ಕೂ ಪೂರೈಸುತ್ತಿ ರುವುದರಿಂದ ಉತ್ತರ ಭಾರತದಲ್ಲಿ ಇಲ್ಲಿನ ಉತ್ಪನ್ನಗಳಿಗೆ ಬೇಡಿಕೆ ಕಡಿಮೆಯಾಗಿದೆ.
ಒಟ್ಟಾರೆ ಪರಿಣಾಮ ಬೆಳೆಗಾರರ ಮೇಲಾಗಿದೆ.

ವಾಣಿಜ್ಯ ಸಚಿವರಲ್ಲಿ ಮಾತನಾಡುತ್ತೇನೆ
ವಿದೇಶಗಳಿಂದ ತೆಂಗಿನ ಕಳಪೆ ಗುಣಮಟ್ಟದ ಉತ್ಪನ್ನಗಳು ಆಮದಾಗುವ ವಿಷಯವನ್ನು ಕೇಂದ್ರ ವಾಣಿಜ್ಯ ಸಚಿವರಿಗೆ ತಿಳಿಸುತ್ತೇನೆ. ಕೇಂದ್ರದಿಂದ ಬೆಂಬಲ ಬೆಲೆ ಘೋಷಿಸುವುದಾದರೆ ದೇಶದ ವಿವಿಧ ರಾಜ್ಯಗಳಲ್ಲಿ ತೆಂಗು ಬೆಳೆಗಾರರು ಇರುವುದರಿಂದ ಬೆಂಬಲ ಬೆಲೆಯನ್ನು ಎಲ್ಲ ಕಡೆಗೂ ಕೊಡಬೇಕಾಗುತ್ತದೆ. ಈ ಕುರಿತೂ ಪ್ರಸ್ತಾವಿಸುತ್ತೇನೆ..
– ಶೋಭಾ ಕರಂದ್ಲಾಜೆ, ಸಂಸದರು, ಉಡುಪಿ -ಚಿಕ್ಕಮಗಳೂರು ಕ್ಷೇತ್ರ.

ರೈತರ ಹಿತಾಸಕ್ತಿ ಕಡಿಮೆಯಾಗಿದೆ
ಗ್ರಾಹಕರಿಗೆ ಮಾರುಕಟ್ಟೆಯಲ್ಲಿ ದರ ಕಡಿಮೆಯಾದರೆ ಮುಖದಲ್ಲಿ ಮಂದಹಾಸ ಉಂಟಾಗುತ್ತದೆ. ಆದರೆ ರೈತರ ಹಿತಾಸಕ್ತಿಯನ್ನು ಕಾಪಾಡಲು ಯಾರೂ ಇಲ್ಲ. ಒಂದು ತೆಂಗಿನ ಕಾಯಿ ದರದಲ್ಲಿ ಶೇ.25 ಕಾಯಿ ಕೀಳಲು ಖರ್ಚಾಗುತ್ತದೆ. ನೀರು ಪೂರೈಕೆ, ಬಾವಿ,  ಪಂಪ್‌ಸೆಟ್‌ ಇತ್ಯಾದಿಗಳಿಗೆ ಮಾಡುವ ಬಂಡವಾಳ ಹೂಡಿಕೆಯನ್ನು ಗಣಿಸಿದರೆ ರೈತನಿಗೆ  ಲಾಭ ಸಿಗುವುದಿಲ್ಲ..
ರಾಮಕೃಷ್ಣ ಶರ್ಮ ಬಂಟಕಲ್ಲು, ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷರು

ಕ್ಯಾಂಪ್ಕೋ ಮಾದರಿ ಅಗತ್ಯ
ಕಾಡುಪ್ರಾಣಿಗಳ ಉಪಟಳ ನಿಯಂತ್ರಿಸಲು ಬೇಕಾದ ಕೋವಿಗಳಿಗೆ ಸರಕಾರ ಪರವಾನಿಗೆ ಶುಲ್ಕವನ್ನು ಮನ್ನಾ ಮಾಡಬೇಕು. ರಾಜ್ಯದ ಕೆಲವು ಜಿಲ್ಲೆಗಳಲ್ಲಿರುವ ಕೊಬ್ಬರಿ ಖರೀದಿ ಕೇಂದ್ರಗಳನ್ನು ಉಡುಪಿಗೂ ವಿಸ್ತರಿಸಬೇಕು. ತೆಂಗಿನ ಉತ್ಪನ್ನ, ತೆಂಗಿನೆಣ್ಣೆ ಘಟಕ, ಕೊಬ್ಬರಿ ಪುಡಿ ಕಾರ್ಖಾನೆಗಳನ್ನು ಕ್ಯಾಂಪ್ಕೋ ಮಾದರಿಯಲ್ಲಿ ಸ್ಥಾಪಿಸಿ ತೆಂಗು ಬೆಳೆಗಾರರ ರಕ್ಷಣೆ ಮಾಡಬೇಕು.
ಸತೀಶ್‌ಕುಮಾರ್‌ ಶೆಟ್ಟಿ ಯಡ್ತಾಡಿ, ಕೃಷಿಕರು

ಎಷ್ಟು ದಿನ ನಷ್ಟ ಅನುಭವಿಸಬಹುದು?
ಉತ್ತರ ಭಾರತಕ್ಕೆ ವಿದೇಶಗಳಿಂದ ಬರುತ್ತಿರುವ ಕಳಪೆ ಗುಣಮಟ್ಟದ ತೆಂಗಿನ ಪೌಡರ್‌ ಬಗ್ಗೆ ಸರಕಾರಕ್ಕೆ ಬರೆದಿದ್ದೇವೆ. ದರ ಕಡಿಮೆ ಎಂಬ ಕಾರಣಕ್ಕೆ ಇಲ್ಲಿ ಮಾರುಕಟ್ಟೆ ಸೃಷ್ಟಿಯಾಗಿದೆ. ನಾವು ಎಷ್ಟು ದಿನ ನಷ್ಟ ಅನುಭವಿಸಬಹುದು? ಒಂದು ತಿಂಗಳಿಂದ ನನ್ನ ಘಟಕವನ್ನು ಮುಚ್ಚಿದ್ದೇನೆ.
ಜಾನ್‌ ಡಿ’ಸಿಲ್ವ ಸಾಣೂರು ಕುಂಟಲ್ಪಾಡಿ,  ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಮಾಜಿ ಅಧ್ಯಕ್ಷರು.

ಟಾಪ್ ನ್ಯೂಸ್

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.