ಅಡಿಕೆಯ ಬಳಿಕ ತೆಂಗಿಗೂ ರೋಗಬಾಧೆ ಭೀತಿ


Team Udayavani, Jan 4, 2023, 7:20 AM IST

ಅಡಿಕೆಯ ಬಳಿಕ ತೆಂಗಿಗೂ ರೋಗಬಾಧೆ ಭೀತಿ

ಉಡುಪಿ: ಅಡಿಕೆ ಬೆಳೆಗಾರರ ಕಂಗೆಡಿಸಿರುವ ಎಲೆಚುಕ್ಕಿ ರೋಗ ತೆಂಗು ಬೆಳೆಗಾರರಿಗೂ ಸಮಸ್ಯೆ ನೀಡುವ ಸಾಧ್ಯತೆ ಎದುರಾಗಿದೆ. ತೆಂಗಿನ ಮರಗಳಲ್ಲೂ ಎಲೆಚುಕ್ಕಿ ರೋಗಗಳ ಜತೆಗೆ ಕಾಂಡ ಸೋರುವ ರೋಗ ಕಾಣಿಸಿಕೊಳ್ಳುತ್ತಿದೆ.

ಆದರೆ ಅಡಿಕೆ ಬೆಳೆಗಾರರಿಗೆ ಆರ್ಥಿಕವಾಗಿ ನಷ್ಟ ಮಾಡುಷ್ಟರ ಮಟ್ಟಿಗೆ ತೆಂಗು ಬೆಳೆಗಾರರಿಗೆ ಎಲೆಚುಕ್ಕಿ ರೋಗದಿಂದ ಸಮಸ್ಯೆಯಾಗುತ್ತಿಲ್ಲ. ಆದರೆ ಭವಿಷ್ಯದಲ್ಲಿ ಇದರಿಂದ ದೊಡ್ಡಮಟ್ಟಿನ ಸವಾಲು ಆಗದಂತೆ ಈಗಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂಬುದು ವಿಜ್ಞಾನಿಗಳ ಅಭಿಪ್ರಾಯವಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45,129 ರೈತರು ಸುಮಾರು 35,623.68 ಹೆಕ್ಟೇರ್‌ ಪ್ರದೇಶದಲ್ಲಿ ತೆಂಗು ಬೆಳೆಯುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 39,834 ಬೆಳೆಗಾರರು 18,919 ಹೆಕ್ಟೇರ್‌ನಲ್ಲಿ ಬೆಳೆಯುತ್ತಿದ್ದಾರೆ. ಅನೇಕ ಕುಟುಂಬಗಳು ತೆಂಗಿನ ಬೆಳೆಯನ್ನೇ ಆಧರಿಸಿ ಜೀವನ ನಡೆಸುವುದೂ ಇದೆ.

ಬೆಂಬಲ ಬೆಲೆ ಬರಬೇಕು
ಸಿಪ್ಪೆ ತೆಗೆದ ತೆಂಗಿನ ಕಾಯಿ ಪ್ರತೀ ಕೆ.ಜಿ.ಗೆ 28ರಿಂದ 30 ರೂ.ಗಳ ವರೆಗೂ ದರ ಮಾರುಕಟ್ಟೆಯಲ್ಲಿದೆ. ಸಿಪ್ಪೆ ಸಹಿತವಾದ ತೆಂಗಿನಕಾಯಿ 9ರಿಂದ 10 ರೂ.ಗಳಿಗೆ ಮಾರಾಟವಾಗುತ್ತಿವೆ. ಸಿಪ್ಪೆ ಸಹಿತವಾಗಿ ಇರುವ ತೆಂಗಿನ ಕಾಯಿ ಬೆಲೆ ಈ ವರ್ಷ ತೀರ ಕುಸಿತ ಕಂಡಿದೆ. ಆದರೆ ಕೊಬ್ಬರಿಗೆ ಪ್ರತಿ ಕೆ.ಜಿ.ಗೆ 85ರಿಂದ 90 ರೂ.ಗಳ ವರೆಗೂ ಇದೆ. ಕೊಬ್ಬರಿಗೆ 11 ಸಾವಿರ ರೂ. ಪ್ರತೀ ಕ್ವಿಂಟಾಲ್‌ಗೆ ಕೇಂದ್ರ ಸರಕಾರ ಬೆಂಬಲ ಬೆಲೆ ನೀಡುತ್ತದೆ. ಇದೇ ಮಾದರಿಯಲ್ಲಿ ತೆಂಗಿನ ಕಾಯಿ ಮಾರಾಟದಲ್ಲೂ ಬೆಂಬಲ ಬೆಲೆ ಬರಬೇಕು ಎಂಬುದು ಕರಾವಳಿ ಭಾಗದ ಬೆಳೆಗಾರರ ಆಗ್ರಹವಾಗಿದೆ.

ಸಹಾಯಧನವೂ ಇದೆ
ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯಿಂದ ತೆಂಗು ಮರುನಾಟಿ ಮತ್ತು ಪುನಶ್ಚೇತನ ಹಾಗೂ ನಿರ್ವಹಣೆ ಕಾರ್ಯಕ್ರಮದಡಿ ತೆಂಗಿನ ತೋಟಗಳಲ್ಲಿ ಸಂಪೂರ್ಣವಾಗಿ ಒಣಗಿರುವ, ಕೀಟ ಅಥವಾ ರೋಗಬಾಧಿತ ತೆಂಗಿನ ಮರಗಳನ್ನು ಬುಡ ಸಮೇತ ತೆಗೆಯಲು ಶೇ. 100ರಂತೆ ಪ್ರತೀ ಗಿಡಕ್ಕೆ 1 ಸಾವಿರ ರೂ.ಗಳಂತೆ ಪ್ರತೀ ಹೆಕ್ಟೇರ್‌ಗೆ ಗರಿಷ್ಠ 32 ಮರಗಳನ್ನು ತೆಗೆಯಲು 32 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ. ಶೇ. 50ರಂತೆ 100 ಸಸಿಗಳ ಮರುನಾಟಿಗೆ ಪ್ರತೀ ಹೆಕ್ಟೇರ್‌ಗೆ ಗರಿಷ್ಠ 4 ಸಾವಿರ ರೂ. ನೀಡಲಾಗುತ್ತದೆ. ಹಾಗೆಯೇ ತೋಟಗಾರಿಕೆ ಬೆಳೆಗಳ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಸಸ್ಯ ಸಂರಕ್ಷಣೆ ಔಷಧಗಳಿಗೆ ಗರಿಷ್ಠ 1 ಹೆಕ್ಟೇರ್‌ಗೆ ಶೇ.75ರಂತೆ ಸಾಮಾನ್ಯ ರೈತರಿಗೆ 7500ರೂ., ಶೇ.90ರಂತೆ ಪರಿಶಿಷ್ಟ ಜಾತಿ, ಪಂಡಗಡದ ರೈತರಿಗೆ 9 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ.

ತೆಂಗಿಗೆ ಕರಾವಳಿ ಭಾಗದಲ್ಲಿ ಕಾಂಡ ಸೋರುವ ರೋಗ ಕಾಣಿಸಿಕೊಳ್ಳುತ್ತಿದೆ. ಆರಂಭದಲ್ಲೇ ಸೂಕ್ತ ರಾಸಾಯನಿಕ ಸಿಂಪಡಿಸುವ ಮೂಲಕ ಉಪಶಮನ ಸಾಧ್ಯ. ಅಡಿಕೆಯಷ್ಟು ಸಮಸ್ಯೆ ತೆಂಗಿಗೆ ಆಗಲಾರದಾದರೂ ಎಚ್ಚರ ವಹಿಸಬೇಕು.
– ಭುವನೇಶ್ವರಿ, ಉಪನಿರ್ದೇಶಕಿ, ಉಡುಪಿ ತೋಟಗಾರಿಕೆ ಇಲಾಖೆ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.