ಕುಸಿಯುವ ಭೀತಿಯಲ್ಲಿ ನೀರೆ ಓವರ್ ಹೆಡ್ ಟ್ಯಾಂಕ್
Team Udayavani, Feb 18, 2019, 1:00 AM IST
ಅಜೆಕಾರು: ನೀರೆ ಗ್ರಾ.ಪಂ. ವ್ಯಾಪ್ತಿಗೆ ಕುಡಿಯುವ ನೀರು ಒದಗಿಸುವ ಪ್ರಮುಖ ಓವರ್ ಹೆಡ್ ಟ್ಯಾಂಕ್ ಬಿರುಕು ಬಿಟ್ಟಿದ್ದು, ನೀರು ಸೊರಿಕೆಯಾಗುತಿದೆ.
1988ರಲ್ಲಿ ನಿರ್ಮಾಣಗೊಂಡಿರುವ ಈ ಬೃಹತ್ ಓವರ್ ಹೆಡ್ ಟ್ಯಾಂಕ್ ಸುಮಾರು 50 ಸಾವಿರ ಲೀ. ನೀರು ಶೇಖರಣಾ ಸಾಮಾರ್ಥ್ಯಹೊಂದಿದ್ದು, ಗ್ರಾ.ಪಂ.ವ್ಯಾಪ್ತಿಯ ಸುಮಾರು 100 ಮನೆಗಳಿಗೆ ಕುಡಿಯುವ ನೀರು ಒದಗಿಸುತ್ತಿದೆ.
ಪಿಲ್ಲರ್ ಬಿರುಕು
ಸುಮಾರು 30 ವರ್ಷ ಹಿಂದೆ ನಿರ್ಮಾಣಗೊಂಡಿರುವ ಈ ಓವರ್ ಹೆಡ್ ಟ್ಯಾಂಕ್ನ ಸ್ಲಾಬ್ಗಳು ಹಾಗೂ ಪಿಲ್ಲರ್ ಬಿರುಕು ಬಿಟ್ಟು ಸಿಮೆಂಟ್ ತುಂಡು ತುಂಡಾಗಿ ಬೀಳುತ್ತಿದೆ.
ಪಂಚಾಯತ್ ಕಟ್ಟಡದ ಸಮೀಪವೇ ಇರುವ ಓವರ್ ಹೆಡ್ ಟ್ಯಾಂಕ್ ಕುಸಿತಗೊಂಡಲ್ಲಿ ಅಪಾರ ಪ್ರಮಾಣದ ಹಾನಿಯಾಗುವ ಜತೆಗೆ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಸಂಕಷ್ಟಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಳ್ಳಲಿದೆ.
ಬಿರುಕು ಬಿಟ್ಟಿರುವ ಓವರ್ ಹೆಡ್ ಟ್ಯಾಂಕ್ನ್ನು ಕೂಡಲೇ ದುರಸ್ತಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಅಧಿಕಾರಿಗಳಿಗೆ ಮನವಿ
ಪಂಚಾಯತ್ ಬಳಿ ಇರುವ ಓವರ್ ಹೆಡ್ ಟ್ಯಾಂಕ್ ದುರಸ್ತಿ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ತ್ವರಿತವಾಗಿ ದುರಸ್ತಿ ಪಡಿಸುವ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು.
– ಸದಾನಂದ ಪ್ರಭು, ಅಧ್ಯಕ್ಷರು, ನೀರೆ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ