ವಿಶೇಷ ಚೇತನ ಮಕ್ಕಳೊಂದಿಗೆ ಕಾಪು ಕಾಲೇಜಿನ ವಿದ್ಯಾರ್ಥಿಗಳು
Team Udayavani, Mar 18, 2017, 3:55 PM IST
ಶಿರ್ವ: ಮಾನವೀಯ ಮೌಲ್ಯಗಳು ಮರೆಯಾಗುತ್ತಿರುವ ಕಾರಣ ಸಮಾಜದ ಸ್ವಾಸ್ಥÂ ಹದಗೆಡುತ್ತಿದೆ. ಮಾನವೀಯ ಮೌಲ್ಯಗಳ ವೃದ್ಧಿಯಾದಲ್ಲಿ ಭವಿಷ್ಯದಲ್ಲಿ ಸುಂದರ ಸದೃಢ ದೇಶವನ್ನು ಕಾಣಲು ಸಾಧ್ಯ.ಈ ನಿಟ್ಟಿನಲ್ಲಿ ಕಾಪು ಕಾಲೇಜಿನ ಆಡಳಿತಾಧಿಕಾರಿ ಪ್ರೊ| ವಿ.ಕೆ. ಉದ್ಯಾವರ ಅವರ ಆಶಯದಂತೆ ಕಾಪು ವಿದ್ಯಾ ನಿಕೇತನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಶಿರ್ವ ಪಾಂಬೂರು ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರದ ವಿಶೇಷ ಚೇತನ ಮಕ್ಕಳ ಶಾಲೆಯ ವಿದ್ಯಾರ್ಥಿಗಳೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾಪು ವಿದ್ಯಾನಿಕೇತನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಮೇಘನಾ ಹೇಳಿದರು.
ಅವರು ಪಾಂಬೂರು ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರದ ವಿಶೇಷ ಚೇತನ ಮಕ್ಕಳ ಶಾಲೆಗೆ ಕಾಪು ವಿದ್ಯಾನಿಕೇತನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಭೇಟಿ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡುತ್ತಿದ್ದರು.ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ ಶಾಲೆಯ ಆಡಳಿತಾಧಿಕಾರಿ ಜೋಸೆಫ್ ನೊರೊನ್ಹಾ ಮಾತನಾಡಿ 135 ವಿಶೇಷ ಚೇತನ ವಿದ್ಯಾರ್ಥಿಗಳು ಶಾಲೆಯಲ್ಲಿ ವಿದ್ಯಾಭ್ಯಾಸದ ತರಬೇತಿ ಪಡೆಯುತ್ತಿದ್ದಾರೆ. ಅದರಲ್ಲಿ 56 ವಿದ್ಯಾರ್ಥಿಗಳು ವಸತಿ ಶಾಲೆಯ ವಿದ್ಯಾರ್ಥಿಗಳು. ರಜಾಕಾಲದಲ್ಲಿ ಕಡ್ಡಾಯವಾಗಿ ಮನೆ ಮಂದಿಯೊಂದಿಗೆ ಕಾಲಕಳೆಯಬೇಕಿರುವ ಈ ವಿಶೇಷ ಮಕ್ಕಳಿಗೆ ಪಾಂಬೂರು ಶಾಲೆಯ ಶಿಕ್ಷಕ ವೃಂದವೇ ಆಸರೆಯಾಗಿದೆ ಎಂದು ಹೇಳಿದರು.
ಮಾನಸ ಕೇಂದ್ರದ ಅಧ್ಯಕ್ಷ ಹೆನ್ರಿ ಮೆನೇಜಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಚೇತನ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದವು ಸಂಗೀತ ಕುರ್ಚಿ, ಬಾಲ್ಪಾಸ್, ನೃತ್ಯ ಸಹಿತ ಇತರ ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟು ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಕಾಲೇಜಿನ ವಿದ್ಯಾರ್ಥಿಗಳು ನೃತ್ಯದ ಮೂಲಕ ವಿಶೇಷ ಚೇತನ ಮಕ್ಕಳನ್ನು ರಂಜಿಸಿದರು. ಹಣ್ಣು ಹಂಪಲು,ಬಿಸ್ಕತ್ತು ಮತ್ತು ಬಿಸಿ ನೀರಿನ ದೊಡ್ಡ ಸ್ಟೀಲ್ ಜಾಕ್ ಕೊಡುಗೆಯಾಗಿ ನೀಡಲಾಯಿತು.
ಮಾನಸ ಶಾಲೆಯ ಪ್ರಾಂಶುಪಾಲೆ ಸಿ| ಅನ್ಸಿಲಾ ಸ್ವಾಗತಿಸಿದರು.ಮಾನಸ ಶಾಲೆಯ ಶಿಕ್ಷಕಿ ಪ್ರೇಮಾ ಕಾರ್ಯಕ್ರಮ ನಿರ್ವಹಿಸಿ, ವಿದ್ಯಾನಿಕೇತನದ ಉಪನ್ಯಾಸಕಿ ದೀಕ್ಷಿತಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್