ಇನ್ನೂ ಆರಂಭಗೊಳ್ಳದ ಹೊರಬಂದರು ನಿರ್ಮಾಣ ಕಾಮಗಾರಿ

ಮರವಂತೆ : ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ವರ್ಷ

Team Udayavani, Sep 23, 2019, 5:31 AM IST

2209KDPP1

ಕುಂದಾಪುರ: ರಾಜ್ಯದ ಮೊದಲ “ಯಾ’ ಶೇಪ್‌ ಮಾದರಿಯ ಮರವಂತೆಯ ಹೊರ ಬಂದರು ನಿರ್ಮಾಣ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು, ವರ್ಷ ಕಳೆದರೂ, ಇನ್ನೂ ಆರಂಭಗೊಂಡಿಲ್ಲ. ಅರೆಬರೆ ಕಾಮಗಾರಿಯಿಂದಾಗಿ ಸಾಂಪ್ರ ದಾಯಿಕ ಮೀನುಗಾರಿಕೆ ಬಂದರು ಎಂದೇ ಹೆಸರಾದ ಮರವಂತೆಯಲ್ಲಿ ಮೀನುಗಾರಿಕೆಗೆ ಸಮಸ್ಯೆಯಾಗುತ್ತಿದೆ.
ಬಂದರು ಮತ್ತು ಒಳ ನಾಡು ಜಲಸಾರಿಗೆ ಇಲಾಖೆಯ ವತಿ ಯಿಂದ 54 ಕೋ.ರೂ. ವೆಚ್ಚದಲ್ಲಿ ಮರವಂತೆಯಲ್ಲಿ ಕೇರಳ ಮಾದರಿಯ ಹೊರ ಬಂದರು ನಿರ್ಮಾಣ ಕಾಮಗಾರಿ 6 ವರ್ಷಗಳ ಹಿಂದೆ ಕೈಗೆತ್ತಿಕೊಳ್ಳಲಾಗಿತ್ತು. ಇಲ್ಲಿನ 850 ಮೀ. ಉದ್ದದ ತೀರ ಪ್ರದೇಶದ ಪೈಕಿ ಉತ್ತರ ಭಾಗದಲ್ಲಿ 260 ಮೀ. ಉದ್ದ ಹಾಗೂ ದಕ್ಷಿಣ ಭಾಗದಲ್ಲಿ 355 ಮೀ. ಉದ್ದದ ಬ್ರೇಕ್‌ವಾಟರ್‌ (ಟ್ರೆಟ್ರಾಫೈಡ್‌)ನ ತಡೆಗೋಡೆ ನಿರ್ಮಿಸಿ, ಪ್ರವೇಶದ್ವಾರ ಮಾಡಿ, ಮೀನುಗಾರಿಕೆ ಮುಗಿಸಿ ಬರುವ ದೋಣಿ ಸುಲಭವಾಗಿ ಒಳ ಪ್ರವೇಶಿಸು ವಂತೆ ಮಾಡುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ.

ಮರವಂತೆಯ ಹೊರ ಬಂದರಿನ ತಡೆಗೋಡೆ ನಿರ್ಮಾಣ ಕಾಮಗಾರಿ 2013ರಲ್ಲಿ ಆರಂಭಗೊಂಡಿದ್ದು, 2016 ರಲ್ಲಿ ಮುಗಿಯಬೇಕಿತ್ತು. ಆದರೆ 2019 ಆದರೂ, ಮುಗಿದೇ ಇಲ್ಲ. ತಮಿಳುನಾಡು ಮೂಲದ ಎನ್‌ಎಸ್‌ಕೆ ಬಿಲ್ಡರ್ಸ್‌ ಸಂಸ್ಥೆಗೆ ಈ ಕಾಮಗಾರಿ ವಹಿಸಲಾಗಿದೆ. 54 ಕೋ.ರೂ. ಪೈಕಿ 45 ಕೋ.ರೂ. ಅನುದಾನ ಮಂಜೂರಾಗಿದೆ. 9 ಕೋ.ರೂ. ವೆಚ್ಚದ ಕಾಮಗಾರಿ ಬಾಕಿಯಿದೆ. ಆದರೆ ವಿಳಂಬ ಕಾಮಗಾರಿಯಿಂದಾಗಿ ಈ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿದ್ದರಿಂದ ಸ್ಥಗಿತಗೊಂಡಿದೆ ಎನ್ನಲಾಗಿದೆ.

ಮೀನುಗಾರಿಕೆಗೆ ಸಮಸ್ಯೆ
ಮರವಂತೆಯ ಹೊರ ಬಂದರಿನ ಎರಡೂ ಭಾಗಗಳಲ್ಲಿಯೂ ಬ್ರೇಕ್‌ ವಾಟರ್‌ ಕಾಮಗಾರಿ ಅಪೂರ್ಣವಾಗಿದೆ. ಈ ಅರೆಬರೆ ಕಾಮಗಾರಿಯಿಂದಾಗಿ ಮೀನುಗಾರಿಕೆಗೆ ಬಹಳಷ್ಟು ಸಮಸ್ಯೆಯಾಗುತ್ತಿದೆ. ಮೀನು ಗಾರಿಕೆ ಮುಗಿಸಿ ಬರುವ ಮೀನುಗಾರರು ಮರಳಿನ ಮೇಲೆಯೇ ಮೀನುಗಳನ್ನು ಇಳಿಸಬೇಕಾದ ಸ್ಥಿತಿಯಿದೆ. ಇನ್ನು ಮೀನು ಸಾಗಾಟ ವಾಹನಗಳು, ಮೀನುಗಾರರ ವಾಹನಗಳಿಗೆ ಪಾರ್ಕಿಂಗ್‌ಗೆ ಸರಿಯಾದ ವ್ಯವಸ್ಥೆಯಿಲ್ಲ. ಇಲ್ಲಿಗೆ ಸಂಪರ್ಕಿಸುವ ಮೀನುಗಾರಿಕಾ ರಸ್ತೆಯೂ ಸಂಪೂರ್ಣ ಹದಗೆಟ್ಟು ಹೋಗಿದೆ.

ಏನಿದು ಹೊರ ಬಂದರು?
ಇತರ ಮೀನುಗಾರಿಕಾ ಬಂದರು ಹಾಗೂ ಇಲ್ಲಿಗೂ ಇರುವ ಪ್ರಮುಖ ವ್ಯತ್ಯಾಸವೆಂದರೆ, ಬೇರೆಲ್ಲ ಬಂದರುಗಳು ಸಹಜ ಬಂದರು ಆಗಿದ್ದರೆ, ಇದು ಕೃತಕವಾಗಿ ನಿರ್ಮಿಸಿದ ಬಂದರಾಗಿದೆ. ಅಂದರೆ ಇಲ್ಲಿನ ಮೀನುಗಾರರು ಬೇರೆ ಬಂದರನ್ನು ಅವಲಂಬಿಸುವ ಬದಲು ತಮ್ಮ ಅನುಕೂಲಕ್ಕಾಗಿ ಸ್ವತಃ ಕೃತಕವಾಗಿ ನಿರ್ಮಿಸಿಕೊಂಡ ಬಂದರಾಗಿದೆ. ನಾಡದೋಣಿ ಮೀನುಗಾರಿಕೆ ಇಲ್ಲಿನ ವೈಶಿಷ್ಟ್ಯ. 300ಕ್ಕೂ ಹೆಚ್ಚು ನಾಡದೋಣಿಗಳಿದ್ದು, ಸುಮಾರು 2 ಸಾವಿರಕ್ಕೂ ಹೆಚ್ಚಿನ ಮೀನುಗಾರರು ಇಲ್ಲಿದ್ದಾರೆ. ಇದಲ್ಲದೆ ಬೇರೆ ಕಡೆಗಳ ಮೀನುಗಾರಿಕೆ ದೋಣಿಗಳು ಇಲ್ಲಿಗೆ ಬರುತ್ತವೆ.

ಎರಡನೇ ಹಂತಕ್ಕೆ ಸರ್ವೆ
ಮರವಂತೆಯ ಹೊರ ಬಂದರು ಕಾಮಗಾರಿ ವರ್ಷದ ಹಿಂದೆ ಸ್ಥಗಿತ ಗೊಂಡಿದೆ. ಮೊದಲ ಹಂತದಲ್ಲಿ ಮಂಜೂರಾದ 54 ಕೋ.ರೂ. ಅನುದಾನದಲ್ಲಿ ಈಗಾಗಲೇ ಸುಮಾರು 45 ಕೋ.ರೂ. ವೆಚ್ಚದ ಕಾಮಗಾರಿ ಮುಗಿದಿದ್ದು, ಇನ್ನೂ ಸುಮಾರು 9 ಕೋ.ರೂ. ವೆಚ್ಚದ ಕಾಮಗಾರಿ ಬಾಕಿಯಿದೆ. ಅದನ್ನು ಈಗ ಹಿಂದೆ ವಹಿಸಿಕೊಂಡ ಸಂಸ್ಥೆಯಿಂದಲೇ ಮಾಡಿಸಬೇಕೇ ಅಥವಾ ಹೊಸ ಸಂಸ್ಥೆಯಿಂದ ಮಾಡಿಸಬೇಕೇ ಎನ್ನುವ ಕುರಿತು ಶೀಘ್ರವೇ ನಿರ್ಧಾರ ಕೈಗೊಂಡು, ಕಾಮಗಾರಿ ಪೂರ್ಣ ಗೊಳಿಸಲಾಗುವುದು. ಅದಲ್ಲದೆ ಅಂದಾಜು 350 ಮೀ. ಬ್ರೇಕ್‌ ವಾಟರ್‌ ನಿರ್ಮಾಣ ಸಂಬಂಧ ಎರಡನೇ ಹಂತದ ಯೋಜನೆಗೆ ಸರ್ವೆ ನಡೆಸಲಾಗಿದೆ. ಯೋಜನೆ ಸಿದ್ಧಪಡಿಸಿ, ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
– ಕ್ಸೇವಿಯರ್‌ ಡಯಾಸ್‌,
ಸಹಾಯಕ ಇಂಜಿನಿಯರ್‌, ಬಂದರು ಮತ್ತು ಮೀನುಗಾರಿಕಾ ಇಲಾಖೆ

ಸಚಿವರ ಭರವಸೆ 
ಮರವಂತೆಯ ಹೊರ ಬಂದರು ನಿರ್ಮಾಣ ಕಾಮಗಾರಿ ಸ್ಥಗಿತಗೊಂಡ ಕುರಿತಂತೆ ಮೀನುಗಾರಿಕೆ ಹಾಗೂ ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ತಂದು, ಶೀಘ್ರ ಸ್ಪಂದಿಸುವಂತೆ ಇಲ್ಲಿನ ಮೀನುಗಾರರ ನಿಯೋಗ ಭೇಟಿ ಮಾಡಿ ಮನವಿ ಮಾಡಿದ್ದೇವೆ. ಇಲ್ಲಿಗೆ ಶೀಘ್ರ ಭೇಟಿ ನೀಡಿ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎನ್ನುವ ಭರವಸೆ ನೀಡಿದ್ದಾರೆ.
– ಸಂಜೀವ ಖಾರ್ವಿ ಮರವಂತೆ, ಮೀನುಗಾರರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.