ಒಂದು ವಾರದೊಳಗೆ ಸಂಸದರ ಕಚೇರಿ ಆರಂಭ: ಬಿ.ವೈ.ರಾಘವೇಂದ್ರ


Team Udayavani, Jun 27, 2019, 5:15 AM IST

by-raghavendra

ಬೈಂದೂರು: ಕೇಂದ್ರ ಸರಕಾರ ರೈತರಿಗೆ ಹಾಗೂ ಜನಸಾಮಾನ್ಯರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕೆಲವು ಯೋಜನೆಗಳಿಗೆ ಅಧಿಕಾರಿಗಳ ಸಮರ್ಪಕ ಸ್ಪಂದನೆಯಿಲ್ಲದೆ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸರಕಾರ ಪ್ರತಿಯೊಂದು ಕ್ರಿಯಾ ಯೋಜನೆಗಳು ಸಮರ್ಪಕವಾಗಿ ಜನರಿಗೆ ದೊರೆಯಬೇಕು. ಸಬೂಬುಗಳನ್ನು ಹೇಳಿಕೊಂಡು ಕೆಲಸದ ಗತಿಯನ್ನು ಕುಂಠಿತಗೊಳಿಸದಿರಿ ಎಂದು ಅಧಿಕಾರಿ ಗಳಿಗೆ ಕಿವಿಮಾತು ಹೇಳಿದರು.

ಕುಡಿಯುವ ನೀರಿನ ಅಭಾವ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಕಾಡುತ್ತಿದೆ. ಶಾಶ್ವತ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಶೀಘ್ರ ಕಾಮಗಾರಿ ನಡೆಸಲು ಅಧಿಕಾರಿಗಳು ಪ್ರಯತ್ನಿಸಿದಾಗ ಮುಂದಿನ ದಿನಗಳಲ್ಲಿ ಅನುಕೂಲವಾಗುತ್ತದೆ ಎಂದರು.

ಇದಕ್ಕೆ ಉತ್ತರಿಸಿದ ಎಂಜಿನಿಯರ್‌ ರಾಜ್‌ಕುಮಾರ್‌ ಈಗಾಗಲೇ 9 ಕಡೆ ಬಹುಗ್ರಾಮ ಯೋಜನೆಯ ಪ್ರಸ್ತಾವ‌ ನೀಡಲಾಗಿದೆ. ಪ್ರಸ್ತುತ ಈ ಯೋಜನೆ ಜಲಧಾರೆ ಯೋಜನೆ ಎಂದು ಹೆಸರು ಬದಲಾಗಿದೆ. ಬೈಂದೂರು ಕ್ಷೇತ್ರದಲ್ಲಿ ನಾಡ ಗ್ರಾಮದಲ್ಲಿ ಮಾತ್ರ ಮಂಜೂರಾಗಿದೆ ಎಂದರು.

ತಹಶೀಲ್ದಾರ್‌ ಬಿ.ಪಿ ಪೂಜಾರ್‌ ಕಂದಾಯ ಮಾಹಿತಿ ನೀಡಿ 94/ಸಿ ಒಟ್ಟು 4,000 ಅರ್ಜಿಗಳು ಬಂದಿದ್ದು 1,200 ಅರ್ಜಿ ಬಾಕಿ ಇವೆ.

ತಾಲೂಕಿನಲ್ಲಿ ಒಟ್ಟು 18 ಗ್ರಾಮಗಳಲ್ಲಿ ನಂದನವನ ಮತ್ತು ಬಡಾಕೆರೆಯಲ್ಲಿ ಸ್ಮಶಾನಗಳಿಗೆ ಜಾಗ ನಿಗದಿಯಾಗಿಲ್ಲ. ಉಳಿದ ಕಡೆ ಸ್ಥಳ ಮೀಸಲಿರಿಸಲಾಗಿದೆ. ಕಿಸಾನ್‌ ಸಮ್ಮಾನ್‌ ಯೋಜನೆಯಡಿಯಲ್ಲಿ ಒಟ್ಟು 25,000 ರೈತರಿದ್ದಾರೆ. ಅದರಲ್ಲಿ 5,000 ಡಾಟಾ ಎಂಟ್ರಿ ಮುಗಿದಿದೆ ಎಂದರು.

ಸರ್ವರ್‌ ಸಮಸ್ಯೆಯಿಂದ ವಿಳಂಬವಾಗಿದೆ ಎಂದಾಗ ಸಂಸದರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ನಿಗದಿತ ದಿನದೊಳಗೆ ರೈತರಿಗೆ ಸಿಗುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

ಕೊಲ್ಲೂರು ಪ್ರವಾಸಿ ಮಂದಿರವನ್ನು ಆಧುನಿಕ ಅನುಕೂಲಕ್ಕೆ ತಕ್ಕಂತೆ ವಿನ್ಯಾಸ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.

ಹೆದ್ದಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಂಸದರು:

ಬೈಂದೂರು ಕ್ಷೇತ್ರದಲ್ಲಿ ಬಹುತೇಕ ಬಹುತೇಕ ಕಡೆಗಳಲ್ಲಿ ಹೆದ್ದಾರಿ ಸಮಸ್ಯೆ ಸಾರ್ವಜನಿಕರಿಗೆ ಕಿರಿಕಿರಿಯಾಗಿ ಪರಿಣಮಿಸಿದೆ. ಹೆದ್ದಾರಿ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸದಿರುವುದನ್ನು ನಾನು ಸಹಿಸುವುದಿಲ್ಲ. ಕಳೆದ ಬಾರಿ ಸಂಸದರ ಸಭೆಯಲ್ಲಿ ನಡೆದ ಯಾವುದೇ ಬದಲಾವಣೆಗೆ ಈ ವರೆಗೆ ಚಾಲನೆ ನೀಡಿಲ್ಲ.ಶಿರೂರಿನಲ್ಲಿ ಟೋಲ್ಗೇಟ್ ಆರಂಭ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಸರ್ವಿಸ್‌ ರೋಡ್‌ಗಳನ್ನು ನಿರ್ಮಿಸಿಲ್ಲ. ಹೀಗಾಗಿ ಸರ್ವಿಸ್‌ ರೋಡ್‌ಗಳನ್ನು ಪೂರ್ಣಗೊಳಿಸದೆ ಟೋಲ್ ಪ್ರಕ್ರಿಯೇ ಆರಂಭಿಸಿದರೆ ಜನರ ಬೆಂಬಲಕ್ಕೆ ನಿಂತು ಹೋರಾಡಬೇಕಾಗುತ್ತದೆ. ಟೋಲ್ ಸುತ್ತ ಸ್ಥಳೀಯರಿಗೆ ರಿಯಾಯಿತಿ ಕೊಡುವ ಕುರಿತು ಬೇಡಿಕೆ ಬಂದಿದ್ದು ಮುಂಚಿತವಾಗಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ,ರಾಜ್ಯದ ವಿಪಕ್ಷ ನಾಯಕರ ಆಪ್ತ ಕಾರ್ಯದರ್ಶಿ ರಾಜಪ್ಪ, ಕುಂದಾಪುರ ಡಿ.ವೈ.ಎಸ್‌.ಪಿ. ಬಿ.ಪಿ. ದಿನೇಶ್‌ ಕುಮಾರ್‌, ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬಿಜೆಪಿ ಮುಖಂಡ ದೀಪಕ್‌ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.