ನೋಂದಾವಣೆ-ವಿತರಣೆಗೆ ಆಯೋಗ ತಡೆ

ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಆಯುಷ್ಮಾನ್‌ ಭಾರತ್‌ - ಆರೋಗ್ಯ ಕರ್ನಾಟಕ ಕಾರ್ಡ್‌

Team Udayavani, Apr 14, 2019, 6:00 AM IST

1104Kapu1b

ಕಾಪು: ಉಡುಪಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣೆ ಕೇಂದ್ರಗಳು ಚುನಾವಣ ಆಯೋಗದ ಕೆಂಗಣ್ಣಿಗೆ ಗುರಿಯಾಗಿವೆ. ಅದರ ಸೂಚನೆಯ ಮೇರೆಗೆ ಕಾರ್ಡ್‌ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಈ ಯೋಜನೆಗೆ ಫಲಾನುಭವಿಗಳ ನೋಂದಾವಣೆ ಮತ್ತು ಕಾರ್ಡ್‌ ವಿತರಣೆಯನ್ನು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವ ವರೆಗೆ ಸ್ಥಗಿತಗೊಳಿಸುವಂತೆ ಸಂಬಂಧಪಟ್ಟ ಏಜೆನ್ಸಿಗಳಿಗೆ ಚುನಾವಣ ಆಯೋಗ ಮೌಖೀಕವಾಗಿ ಸೂಚನೆ ನೀಡಿದೆ. ಅದರಂತೆ ಸೇವಾ ಕೇಂದ್ರಗಳು ಸೇವೆಯನ್ನು ನಿಲ್ಲಿಸಿವೆ. ಉಡುಪಿ ಜಿಲ್ಲೆಯಲ್ಲಿ 15ಕ್ಕಿಂತಲೂ ಹೆಚ್ಚಿನ ಸೇವಾ ಸಿಂಧು ಕೇಂದ್ರಗಳು ಈ ಸೇವೆ ಒದಗಿಸುತ್ತಿದ್ದು, ಈಗ ಸಾವಿರಾರು ಮಂದಿ ಸಮಸ್ಯೆ ಅನುಭವಿಸುವಂತಾಗಿದೆ. ಕೇಂದ್ರಗಳು ವ್ಯವಹಾರ ನಷ್ಟ ಎದುರಿಸುವಂತಾಗಿದೆ.

ಸ್ಥಾಗಿತ್ಯ ಯಾಕಾಗಿ?
ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ ಯೋಜನೆಗೆ ನೋಂದಾವಣೆ ಮಾಡಿಸಿ, ಕಾರ್ಡ್‌ ಪಡೆಯಲು ಅವಕಾಶ ಮಾಡಿಕೊಡಲಾಗಿತ‌ು¤. ಆದರೆ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಇದರ ದುರ್ಲಾಭ ಪಡೆಯುವ ಸಾಧ್ಯತೆ ಇರುವುದನ್ನು ಮನಗಂಡು ಉಡುಪಿ ಜಿಲ್ಲೆಯಲ್ಲಿ ಸೇವೆ ಸ್ಥಗಿತಗೊಳಿಸಲು ಆಯೋಗ ಸೂಚಿಸಿದೆ.

ಸೇವಾ ಸಿಂಧು ಕೇಂದ್ರಗಳು
ಜಿಲ್ಲೆಯಲ್ಲಿ 145ಕ್ಕೂ ಅಧಿಕ ಸೇವಾ ಸಿಂಧು ಕೇಂದ್ರಗಳು ನೋಂದಾವಣೆಯಾಗಿದ್ದರೂ 10ರಿಂದ 15 ಕೇಂದ್ರಗಳು ಮಾತ್ರ ಗುಣಮಟ್ಟದ ಸೇವೆ ನೀಡುತ್ತಿವೆ. ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ ಯೋಜನೆಯು ಸೇವಾ ಸಿಂಧು ವ್ಯಾಪ್ತಿಯೊಳಗೆ ಸೇರ್ಪಡೆಯಾದ ಬಳಿಕ ಎಲ್ಲ ಕೇಂದ್ರಗಳೂ ತಮ್ಮಲ್ಲಿ ಯೋಜನೆಯ ಐಡಿ ತೆರೆಯಲು ಪ್ರಯತ್ನ ಪಟ್ಟಿದ್ದವು. ಆದರೆ ಸಂಬಂಧಪಟ್ಟ ಅಧಿಕಾರಿಗಳು ಇತರ ಸಾಮಾನ್ಯ ಸೇವೆಗಳನ್ನು ಚೆನ್ನಾಗಿ ನೀಡುತ್ತಿರುವ ಕೇಂದ್ರಗಳಿಗೆ ಪ್ರಥಮ ಪ್ರಾಶಸ್ತ್ಯದಡಿ ಈ ಯೋಜನೆಯ ನೋಂದಣಿ- ಕಾರ್ಡ್‌ ವಿತರಣೆಗೆ ಅವಕಾಶ ನೀಡಿದ್ದರು.

200ಕ್ಕೂ ಅಧಿಕ ಸರಕಾರಿ ಸೌಲಭ್ಯ
ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ 200ಕ್ಕೂ ಅಧಿಕ ಸೇವೆಗಳು ಲಭ್ಯವಿವೆ. ಒಂದೇ ಸೂರಿನಡಿ ಇಷ್ಟು ಸೌಲಭ್ಯ ದೊರಕುವುದರಿಂದ ನಿತ್ಯ ನೂರಾರು ಮಂದಿ ನೋಂದಾವಣೆ, ಗುರುತು ಪತ್ರ ಮತ್ತು ಸೌಲಭ್ಯ ಪಡೆಯಲು ಬರುತ್ತಿದ್ದರು. ರಾಜಕೀಯ ಪಕ್ಷಗಳ ಕಾರ್ಯಕರ್ತರು ಜನರನ್ನು ಗುಂಪಾಗಿ ಕರೆತಂದು ದುರುಪಯೋಗ ಪಡಿಸಿಕೊಳ್ಳುತ್ತಾರೆ ಎಂಬ ಆಪಾದನೆಯ ಹಿನ್ನೆಲೆಯಲ್ಲಿ ಚುನಾವಣ ಆಯೋಗ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ಚುನಾವಣೆ ಬಳಿಕ ಮುಂದುವರಿಕೆ
ಉಡುಪಿ ಜಿಲ್ಲೆಯಲ್ಲಿ 145 ಸಾಮಾನ್ಯ ಸೇವಾ ಕೇಂದ್ರಗಳು – ಡಿಜಿಟಲ್‌ ಸೇವಾ ಸಿಂಧು ಕೇಂದ್ರಗಳಿವೆ. 15 ಕಡೆ ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ ಯೋಜನೆಯ ಗುರುತುಪತ್ರ ನೀಡಲಾಗುತ್ತಿತ್ತು. ಈಗಿನ ತಡೆ ತಾತ್ಕಾಲಿಕವಾಗಿದ್ದು, ಚುನಾವಣೆಯ ಬಳಿಕ ಎಂದಿನಂತೆ ಕಾರ್ಯನಿರ್ವಹಿಸಲಿವೆ. ತೀರಾ ಅಗತ್ಯವುಳ್ಳವರು ಜಿಲ್ಲಾಸ್ಪತ್ರೆಯಲ್ಲಿ ಸ್ವತಃ ಬಂದು ಆರೋಗ್ಯ ಕಾರ್ಡ್‌ ಪಡೆಯಲು ಅವಕಾಶವಿದೆ ಎಂದು ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ ಯೋಜನೆಯ ಅಧಿಕಾರಿಗಳ ಮೂಲ ತಿಳಿಸಿದೆ.

ದಕ್ಷಿಣ ಕನ್ನಡದಲ್ಲೇನು?
ದಕ್ಷಿಣ ಕನ್ನಡದಲ್ಲಿ ಇಂತಹ ಸಮಸ್ಯೆ ಆಗಿಲ್ಲ. ಸಾಮಾನ್ಯ ಸೇವಾ ಕೇಂದ್ರಗಳು ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ ಸೇವೆ ಒದಗಿಸುತ್ತವೆ ಎಂಬುದಾಗಿ ಮೂಲಗಳು ತಿಳಿಸಿವೆ.

ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾವಣೆಗಾಗಿ ಬರುವ ರೋಗಿಗಳಿಗೆ ತೊಂದರೆಯಾಗದಂತೆ ಸೇವೆ ಒದಗಿಸುಲು ಜಿಲ್ಲಾಸ್ಪತ್ರೆಗೆ ಸೂಚನೆ ನೀಡಿದ್ದೇವೆ. ಚುನಾವಣ ನೀತಿ ಸಂಹಿತೆಯ ಕಾರಣದಿಂದ ಹೊಸದಾಗಿ ಹೆಸರು ಸೇರ್ಪಡೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಚುನಾವಣ ಆಯೋಗದ ಸೂಚನೆಯಂತೆ ಮುಂದಿನ ಆದೇಶದವರೆಗೆ ಈ ತಡೆ ಜಾರಿಯಲ್ಲಿರುತ್ತದೆ.
-ಡಾ| ಹೆಪ್ಸಿಬಾ ರಾಣಿ ಕೊರ್ಲಪಾಟಿ
ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.