ಈ ಬಾರಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ
Team Udayavani, Apr 3, 2018, 6:20 AM IST
ಮೂಲತಃ ಉಡುಪಿಯ ಪಡುತೋನ್ಸೆಯವರಾದ ಸುಧೀರ ಕಾಂಚನ್ ಭಾರತೀಯ ಭೂ ಸೇನೆಯಲ್ಲಿ ಸೇವೆ ಸಲ್ಲಿಸಿದವರು. ನಿವೃತ್ತಿಯ ಅನಂತರ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಕ್ಕೆ ಸೇರಿದರು. ರಾಜಕೀಯ ಸೇರುವ ಉದ್ದೇಶಕ್ಕೆ 1983ರಲ್ಲಿ ಉದ್ಯೋಗಕ್ಕೆ ರಾಜೀನಾಮೆ ನೀಡಿ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಲ್ಲಿ ಕ್ರಾಂತಿರಂಗ ಜನತಾಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಸೋತರು. ಅನಂತರ 1989 ಹಾಗೂ 2014ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದರು. ಇವರು 1978ರಿಂದ-2000ರ ವರೆಗೆ ಪಡುತೋನ್ಸೆ ಗ್ರಾ.ಪಂ. ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸಲು ಕಾರಣ ?
ರಾಜಕೀಯದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ದೊಡ್ಡ ಮಟ್ಟದಲ್ಲಿತ್ತು. ಹೀಗಾಗಿ ವ್ಯವಸ್ಥೆಯ ವಿರುದ್ಧ ಹೋರಾಟಕ್ಕಾಗಿ ಸರಕಾರಿ ಬ್ಯಾಂಕ್ ಉದ್ಯೋಗಕ್ಕೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿದೆ.
ಚುನಾವಣೆಯ ಸೋಲಿಗೆ ಕಾರಣ ?
ಹಣ, ಮೋಸದ ರಾಜಕಾರಣದಿಂದ ಸೋಲಾಯಿತು. ಆದರೂ ನನ್ನ ಎದುರಾಳಿ ಬಸವರಾಜ್ ಅವರು ಒಂದು ಸಾವಿರಕ್ಕೂ ಕಡಿಮೆ ಮತದಿಂದ ಡಾ| ಬಿ.ಬಿ. ಶೆಟ್ಟಿಯವರ ವಿರುದ್ಧ ಸೋತಿದ್ದರು. ನಾನು ಐದು ಸಾವಿರ ಮತ ಪಡೆದಿದ್ದೆ. ಹೀಗಾಗಿ ನನ್ನಿಂದ ಬಸವರಾಜ್ ಸೋತರು. ಅಂದಿನ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ ತೃಪ್ತಿ ಇದೆ.
ಸತತ ಸೋಲಿನ ಅನಂತರವೂ ರಾಜಕೀಯದಲ್ಲಿ ಆಸಕ್ತಿ ಉಳಿದಿದೆಯೇ?
ಖಂಡಿತವಾಗಿ ಆಸಕ್ತಿ ಇದೆ. ಪ್ರಜಾಪ್ರಭುತ್ವದಲ್ಲಿ ವ್ಯವಸ್ಥೆಯ ವಿರುದ್ಧ ನಿರಂತರ ಹೋರಾಟ ನಡೆಸಲು ಅವಕಾಶವಿದೆ. ಹೀಗಾಗಿ ಹೋರಾಟ ನಿರಂತರ.
ಈ ಬಾರಿ ಸ್ಪರ್ಧೆ ಮಾಡುವಿರಾ?
ಹೌದು, ಈ ಬಾರಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದೇನೆ. ಗ್ರಾಮ ಪಂಚಾಯತ್ ಸದಸ್ಯನಾಗಿದ್ದ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಜನರ ಮನದಲ್ಲಿವೆ. ಹಾಗೂ ಕ್ಷೇತ್ರದಾದ್ಯಂತ ಹಲವು ಹೋರಾಟಗಳನ್ನು ಮಾಡಿದ್ದೇನೆ. ಹಾಗಾಗಿ ಉಡುಪಿ ಕ್ಷೇತ್ರದ ಜನತೆ ನನ್ನ ಕೈಹಿಡಿಯಲಿದ್ದಾರೆ ಎನ್ನುವ ನಂಬಿಕೆಯಿದೆ. ಈಗಾಗಲೇ ಅನೇಕ ರಾಷ್ಟ್ರೀಯ ಪಕ್ಷಗಳ ಪ್ರಮುಖರು ಸಂಪರ್ಕದಲ್ಲಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸಬೇಕೋ ಅಥವಾ ಯಾವುದಾದರೂ ಪಕ್ಷದ ಮೂಲಕವೇ ಸ್ಪರ್ಧಿಸಬೇಕೋ ಎನ್ನುವ ನಿರ್ಧಾರಕ್ಕೆ ಬಂದಿಲ್ಲ.
– ರಾಜೇಶ ಗಾಣಿಗ ಅಚ್ಲಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು