ಕಾಮಗಾರಿ ಪೂರ್ಣವಾದರೂ ಆರಂಭಗೊಳ್ಳದ ವಕ್ವಾಡಿ ಒಳಚರಂಡಿ ವ್ಯವಸ್ಥೆ!
Team Udayavani, May 15, 2018, 6:45 AM IST
ಕೋಟೇಶ್ವರ: ಗೋಪಾಡಿ ತಿರುವಿನಿಂದ ಚಾರುಕೊಟ್ಟಿಗೆ ತನಕ ರೂ. 7.56 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಆದರೆ ಒಳಚರಂಡಿ ವ್ಯವಸ್ಥೆಗೆ ಪೂರಕವಾದ ಮಣ್ಣು ತುಂಬಿಸುವ ಕಾಮಗಾರಿ ಆರಂಭಗೊಳ್ಳದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಈಗಾಗಲೇ ಮಳೆ ಆರಂಭಗೊಂಡಿರು ವುದರಿಂದ ನೀರಿನ ಹೊರ ಹರಿವಿಗೆ ಸೂಕ್ತ ಒಳಚರಂಡಿ ವ್ಯವಸ್ಥೆ ಒದಗಿಸುವಲ್ಲಿ ಇನ್ನಷ್ಟು ವಿಳಂಬವಾದರೆ ಮುಖ್ಯರಸ್ತೆ ಸಹಿತ ಆಸುಪಾಸಿನ ಮನೆಗಳು, ಜಲಾವೃತಗೊಂಡು ಕೃತಕ ನೆರೆ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಗುತ್ತಿಗೆದಾರರು ರಸ್ತೆ ಇಕ್ಕೆಲಗಳಲ್ಲಿ ತುಂಬಿರುವ ಮಣ್ಣನ್ನು ಸಮಾನವಾಗಿ ಸವರಿ ಒಳಚರಂಡಿ ವ್ಯವಸ್ಥೆ ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಾಯವಾದ ಒಳಚರಂಡಿ
ಬೀಜಾಡಿ, ಗೋಪಾಡಿ, ವಕ್ವಾಡಿ, ಕಾಳಾವರ ಸಹಿತ ವಿವಿಧ ಗ್ರಾ.ಪಂ. ವ್ಯಾಪ್ತಿ ಗಳಲ್ಲಿನ ಮುಖ್ಯರಸ್ತೆ, ಕೂಡುರಸ್ತೆ ಗಳಲ್ಲಿನ ಒಳಚರಂಡಿ ವ್ಯವಸ್ಥೆ ಮಾಯವಾಗಿರುವುದು ಕಂಡುಬಂದಿದ್ದು ಈ ಮಳೆಗಾಲದೊಳಗೆ ಚರಂಡಿ ವ್ಯವಸ್ಥೆ ಪೂರ್ಣಗೊಳಿಸುವುದರಲ್ಲಿ ಪಂಚಾಯತ್ ಮುತುವರ್ಜಿ ವಹಿಸದಿದ್ದಲ್ಲಿ ಮನೆಗಳು ಜಲಾವೃತಗೊಳ್ಳಲಿದೆ ಎಂದು ಇಲ್ಲಿನ ನಿವಾಸಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್