ಸಂಪೂರ್ಣ ಹದಗೆಟ್ಟ ಹೊದ್ರಾಳಿ-ಕೋಟೇಶ್ವರ ಸಂಪರ್ಕ ರಸ್ತೆ

ರಸ್ತೆ ದುರಸ್ತಿಗೆ ಸಂಪನ್ಮೂಲ ಕೊರತೆ; ನಿತ್ಯ ಪ್ರಯಾಣಿಕರ ಗೋಳು ಹೇಳತೀರದು

Team Udayavani, Jul 22, 2019, 5:40 AM IST

2107KLRE3

ರಸ್ತೆಯ ತುಂಬ ಹೊಂಡಗಳೇ ತುಂಬಿದ್ದು ಕೆಸರು ನೀರು ನಿಂತಿರುವುದು.

ಕೋಟೇಶ್ವರ: ಇಲ್ಲಿನ ಕೋಟಿಲಿಂಗೇಶ್ವರ ದೇಗುಲದ ಹಿಂಭಾಗದ ಹೊದ್ರಾಳಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಪಾದಚಾರಿಗಳಿಗೂ ನಡೆದಾಡುವುದಕ್ಕೆ ಸಾಧ್ಯವಾಗದಷ್ಟು ದುಸ್ಥಿತಿಯಲ್ಲಿದೆ.

ಕರಾವಳಿಯ ಅನೇಕ ಮೀನುಗಾರಿಕಾ ಸಂಪರ್ಕ ರಸ್ತೆಯು ಅಭಿವೃದ್ಧಿಗೊಂಡಿದ್ದರು ಹೊದ್ರಾಳಿ ಅಮವಾಸ್ಯೆ ಕಡು ಮುಖ್ಯರಸ್ತೆಯು ಹೊಂಡಮಯವಾಗಿದ್ದು ಆ ಬಗ್ಗೆ ಇಲಾಖೆಗಳು ಯಾವುದೇ ಕ್ರಮಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಸರಕಾರದ ಅನುದಾನವಿಲ್ಲ
ಗ್ರಾಮಾಂತರ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಪೂರಕವಾದ ವ್ಯವಸ್ಥೆ ಕಲ್ಪಿಸಬೇಕು, ಆ ಮೂಲಕ ಸಂಚಾರ ವ್ಯವಸ್ಥೆಯಲ್ಲಿನ ತೊಡಕನ್ನು ನಿಭಾಯಿಸಬೇಕು. ಜನಸಾಮಾನ್ಯರ ಭವಣೆಗೊಂದು ಶಾಶ್ವತ ಪರಿಹಾರ ಒದಗಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಬೀಜಾಡಿ ಗ್ರಾ.ಪಂ.ನಲ್ಲಿ ಚರ್ಚೆ ನಡೆದಿತ್ತು. ಆದರೆ ಸರಕಾರ ಹಾಗೂ ಇಲಾಖೆ ಈ ಭಾಗದ ರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದಿರುವುದು ರಸ್ತೆ ಹದಗೆಡಲು ಕಾರಣವಾಗಿದೆ.

ವ್ಯಾಪಾರ ವ್ಯವಹಾರ ಕೇಂದ್ರವಾಗಿ ಬೆಳೆಯುತ್ತಿರುವ ಕೋಟೇಶ್ವರದ ಸನಿಹದ ಸಂಪರ್ಕ ರಸ್ತೆಯಾಗಿರುವ ಹೊದ್ರಾಳಿ ಅಮವಾಸ್ಯೆ ಕಡು ನೇರ ಮಾರ್ಗದ ಸುಮಾರು 2.5 ಕಿ.ಮೀ. ದೂರ ವ್ಯಾಪ್ತಿಯ ಈ ರಸ್ತೆಯಲ್ಲಿ ಪಾದಚಾರಿ ಸಹಿತ ದ್ವಿಚಕ್ರ ವಾಹನಗಳು ಸಾಗದಷ್ಟು ಹೊಂಡಗಳು ನಿರ್ಮಾಣವಾಗಿವೆೆ. ನೀರಿನ ಹೊರ ಹರಿವಿಗೆ ವ್ಯವಸ್ಥೆಯಲ್ಲದೇ ನಿಂತ ನೀರಿನಿಂದ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ನಡೆದುಕೊಂಡು ಸಾಗುವ ಮಂದಿಗೆ ಕೆಸರು ನೀರಿನ ಪ್ರೋಕ್ಷಣೆಯಾಗುತ್ತಿರುವುದು ನಿತ್ಯ ದರ್ಶನವಾಗಿದೆ.

ಪಂ. ಸಂಪನ್ಮೂಲದ ಕೊರತೆ,
ಇಲಾಖೆಗೆ ಮಾಹಿತಿ ಇಲ್ಲ
ಗ್ರಾಮೀಣ ಪ್ರದೇಶದ ಹೊಸ ಗ್ರಾ.ಪಂ. ಆಗಿ ರೂಪುಗೊಂಡಿರುವ ಬೀಜಾಡಿ ಗ್ರಾಮ ಪಂಚಾಯತ್‌ನಲ್ಲಿ ಸಂಪನ್ಮೂಲದ ಕೊರತೆ ಎದುರಾಗಿದ್ದು ಹೊದ್ರಾಳಿ ರಸ್ತೆ ಡಾಮರೀಕರಣಕ್ಕೆ ಹಣವಿಲ್ಲದೇ ಕೈಚಲ್ಲಿ ಕುಳಿತುಕೊಳ್ಳಬೇಕಾಗಿದೆ.

ಈ ಬಗ್ಗೆ ಲೋಕೋಪಯೋಗಿ ಇಲಾಖೆಯನ್ನು ಸಂಪರ್ಕಿಸಿದರೆ ರಸ್ತೆ ಡಾಮರೀಕರಣಕ್ಕೆ ಅನುದಾನ ಬಿಡುಗಡೆಯಾಗಿಲ್ಲವೆಂಬ ಸಬೂಬು ಕೇಳಿ ಬರುತ್ತಿರುವುದು ಸಾರ್ವಜನಿಕರನ್ನು ಪೇಚಿಗೆ ಸಿಲುಕಿಸಿದೆ.

ಜನಪ್ರತಿನಿಧಿಗಳಿಗೆ ಮನವಿ
ಬೀಜಾಡಿ ಗ್ರಾ.ಪಂ.ನಲ್ಲಿ ಆರ್ಥಿಕ ಸಂಪನ್ಮೂಲದ ಕೊರತೆಯಿದೆ. ಹೊದ್ರಾಳಿ ರಸ್ತೆ ಡಾಮರೀಕರಣಕ್ಕೆ ಇಲಾಖೆ ಹಾಗೂ ಜನಪ್ರತಿನಿಧಿಗಳ ಮೊರೆ ಹೋಗಲಾಗಿದೆ.
-ಗಣೇಶ,
ಪಿಡಿಒ, ಬೀಜಾಡಿ ಗ್ರಾ.ಪಂ.

ಅನುದಾನ ಸಿಕ್ಕಲ್ಲಿ ಅಭಿವೃದ್ಧಿ
ಹೊದ್ರಾಳಿ ರಸ್ತೆಯ ಡಾಮರೀಕರಣಕ್ಕೆ ಸರಕಾರದಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಕರಾವಳಿಯ ಮೀನುಗಾರಿಕಾ ರಸ್ತೆಗೆ ಬಿಡುಗಡೆಯಾದ ಅನುದಾನದಿಂದ ಈಗಾಗಲೇ ಕಾಂಕ್ರೀಟ್‌ ರಸ್ತೆಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಸರಕಾರ ಅನುದಾನ ಬಿಡುಗಡೆಗೊಳಿಸಿದಲ್ಲಿ ಈ ಭಾಗದ ರಸ್ತೆಯ ಅಭಿವೃದ್ಧಿಗೊಳಿಸಲಾಗುವುದು.
-ದುರ್ಗಾದಾಸ್‌,
ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ

– ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.