ಸಂಪೂರ್ಣ ಹದಗೆಟ್ಟ ಹೆಬ್ರಿ ಕಾಲೇಜು ರಸ್ತೆ

ವರ್ಷ ಕಳೆದರೂ ದುರಸ್ತಿಯಾಗಿಲ್ಲ ; ಸಾರ್ವಜನಿಕರ ಆಕ್ರೋಶ

Team Udayavani, Nov 3, 2020, 4:48 AM IST

Hebri

ಹೊಂಡ ಗುಂಡಿಗಳಿಂದ ಕೂಡಿರುವ ಹೆಬ್ರಿ ಕಾಲೇಜು ರಸ್ತೆ.

ಹೆಬ್ರಿ: ಉಡುಪಿಗೆ ಸಂಪರ್ಕಿಸುವ ಹೆಬ್ರಿ ಕಾಲೇಜು ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳ ನಡುವೆ ರಸ್ತೆ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿ.ಪಂ. ರಸ್ತೆ ಇದಾಗಿದ್ದು ಕಳೆದ ಒಂದೂವರೆ ವರ್ಷಗಳಿಂದ ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಾರ್ಗದಲ್ಲಿ ದಿನನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಹೊಂಡಗಳ ನಡುವೆ ಚಲಿಸುವಾಗ ನಿಯಂತ್ರಣ ತಪ್ಪಿ ಹಲವಾರು ಬಾರಿ ಅನಾಹುತಗಳು ಸಂಭವಿಸಿವೆ. ಅಲ್ಲದೆ ಸಮೀಪದಲ್ಲಿ ಸರಕಾರಿ ಆಸ್ಪತ್ರೆ ಇದ್ದು ದಿನನಿತ್ಯ ರೋಗಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಈ ಹಿಂದೆ ಸಂಪೂರ್ಣ ಹದಗೆಟ್ಟ ರಸ್ತೆಗೆ ಸ್ವಲ್ಪ ಭಾಗದವರೆಗೆ ಮಾತ್ರ ಅಸಮರ್ಪಕ ಕಾಂಕ್ರೀಟ್‌ ಕಾಮಗಾರಿ ಮಾಡಿದ್ದು ಅದು ಕೂಡ ಸಂಪೂರ್ಣ ಹಾನಿಗೊಂಡಿದೆ ಎಂದು ಇಲ್ಲಿನ ಸ್ಥಳೀಯರು ಹೇಳುತ್ತಾರೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಕೂಡಲೇ ಸಮಸ್ಯೆ ಬಗೆಹರಿಸಿ. ಇಲ್ಲದಿದ್ದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಮೀಪದಲ್ಲಿಯೇ ಹೆಬ್ರಿ ತಾಲೂಕು ಕಚೇರಿ ನಿರ್ಮಾಣ
ಕಾಲೇಜು ರಸ್ತೆ ಸಮೀಪದಲ್ಲಿಯೇ ಹೆಬ್ರಿ ತಾಲೂಕು ಕಚೇರಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಬ್ರಹ್ಮಾವರ ಮಾರ್ಗ, ಕುಚ್ಚಾರು ಮಾರ್ಗದಿಂದ ಬಂದವರು ಮೂರು ರಸ್ತೆಯಲ್ಲಿ ಇಳಿದು ಇದೇ ಕಾಲೇಜು ಮಾರ್ಗದಲ್ಲಿ ಮುಂದೆ ತಾಲೂಕು ಕಚೇರಿಗೆ ಬರಬೇಕಾಗುತ್ತದೆ. ರಸ್ತೆ ತುಂಬ ಕಿರಿದಾಗಿರುವುದರಿಂದ ಇದನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಿದಲ್ಲಿ ಜನರಿಗೆ ಅನುಕೂಲವಾಗಲಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಸಮಸ್ಯೆ ಬಗ್ಗೆ ವರದಿ ಪ್ರಕಟ
ಕಳೆದ ಮಳೆಗಾಲದಲ್ಲಿ ಈ ರಸ್ತೆ ದುರಸ್ತಿಯ ಬಗ್ಗೆ ಉದಯವಾಣಿ ಸಮರ್ಪಕ ವರದಿ ಪ್ರಕಟಿಸಿತ್ತು. ಆ ಸಂದರ್ಭ ಸಂಬಂಧಪಟ್ಟ ಜನಪ್ರತಿನಿಧಿಗಳು, ಪ್ರಕೃತಿ ವಿಕೋಪ ನಿಧಿ ಅಡಿಯಲ್ಲಿ ಈ ಮಾರ್ಗಕ್ಕೆ 5 ಲಕ್ಷ ರೂ. ಅನುದಾನ ಮಂಜೂರಾಗಿದೆ. ಅಲ್ಲದೆ ಬೇರೆ ಅನುದಾನದ ಪ್ರಯತ್ನದೊಂದಿಗೆ ಮಳೆಗಾಲ ಮುಗಿದ ಅನಂತರ ಶೀಘ್ರ ರಸ್ತೆ ಕಾಮಗಾರಿ ಆರಂಭವಾಗುವುದು ಎಂದು ಕಳೆದ ಮಳೆಗಾಲದಲ್ಲಿ ಪ್ರತಿಕ್ರಿಯೆ ನೀಡಿದ್ದರು. ಆದರೆ ಯಾವುದೇ ಕಾಮಗಾರಿ ಆರಂಭವಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಅನುದಾನ ಬಿಡುಗಡೆಯಾಗಿದೆ
ಪಿಡಬ್ಲ್ಯುಡಿ ಬಜೆಟ್‌ ವರ್ಕ್‌ ಅಡಿಯಲ್ಲಿ 25 ಲಕ್ಷ ರೂ.ಅನುದಾನ ಬಿಡುಗಡೆಯಾಗಿದೆ. ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಸಮೀಪವಿರುವ ರಸ್ತೆಯಿಂದ ಪ್ರಥಮ ದರ್ಜೆ ಕಾಲೇಜಿನ ತನಕ 5.5 ಅಡಿ ಅಗಲದಲ್ಲಿ ಡಾಮರು ಕಾಮಗಾರಿ ನವೆಂಬರ್‌ ತಿಂಗಳ ಮೊದಲ ವಾರದಲ್ಲಿ ಆರಂಭಗೊಳ್ಳಲಿದ್ದು, ಡಿ. 25ರ ಒಳಗೆ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ.
-ಲಾಯ್ಡ ಸಂದೀಪ್‌ ಡಿ’ಸಿಲ್ವ,  ಕಿರಿಯ ಅಭಿಯಂತರರು, ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.