ಉದ್ಘಾಟನೆಗೊಂಡ 2 ತಿಂಗಳಲ್ಲೇ ಕಿತ್ತುಹೋದ ಕಾಂಕ್ರೀಟ್
Team Udayavani, Aug 4, 2018, 6:10 AM IST
ಮಲ್ಪೆ: ತೆಂಕನಿಡಿಯೂರು ಗ್ರಾಮದ ಲಕ್ಷ್ಮೀನಗರ ಮತ್ತು ಕೆಳಾರ್ಕಳಬೆಟ್ಟು ರಸ್ತೆಯನ್ನು ಸಂಪರ್ಕಿಸುವ ಶ್ರೀನಗರದ ಬಳಿಯ ಕಾಂಕ್ರೀಟ್ ರಸ್ತೆ ಉದ್ಘಾಟನೆಗೊಂಡ ಎರಡು ತಿಂಗಳಲ್ಲೇ ಜಲ್ಲಿ ಎದ್ದು ಹೋಗಿದ್ದು ಇಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.
ಅಲ್ಲಲ್ಲಿ ಜಲ್ಲಿಕಲ್ಲು ಮತ್ತು ಸಿಮೆಂಟ್ ಮೇಲೆದ್ದು ರಸ್ತೆ ಸಂಪೂರ್ಣ ಹಾಳಾಗಿದೆ. ಜಲ್ಲಿಕಲ್ಲುಗಳು ರಸ್ತೆಯಿಂದ ಎದ್ದು ಬೈಕು ಸವಾರರಿಗೆ ಅಡಚಣೆ ಉಂಟಾಗಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ಕಾಮಗಾರಿ ನಡೆಸಲಾಗಿದ್ದು ಉದ್ಘಾಟನೆಗೊಂಡು ಎರಡು ಮೂರು ತಿಂಗಳೊಳಗೆ ಜಲ್ಲಿ ಎದ್ದು ಹೋಗಿದೆ. ಕಳೆದ ಹಲವಾರು ವರ್ಷಗಳಿಂದ ನಾದುರಸ್ತಿಯಲ್ಲಿದ್ದ ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಸಂಬಂಧಪಟ್ಟ ಆಡಳಿತಕ್ಕೆ ಮನವಿ ಮಾಡಲಾಗಿತ್ತು. ಕೊನೆಗೂ ಇಲ್ಲಿನ ರಸ್ತೆಗೆ ಕಾಂಕ್ರೀಟ್ ಭಾಗ್ಯ ದೊರಕಿದ್ದರೂ ಇದೀಗ ಕಳಪೆ ಕಾಮಗಾರಿಯಿಂದ ಈ ಹಿಂದಿನ ಸ್ಥಿತಿ ಬಂದೊದಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿನ ರಸ್ತೆಯ ಕಾಮಗಾರಿಯಲ್ಲಾದ ಲೋಪದೋಷಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.
ವ್ಯವಸ್ಥಿತವಾಗಿ ಕಾಮಗಾರಿ ನಡೆಸಲು ಸೂಚನೆ
ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ನಾಗರಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಪಂಚಾಯತ್ ಮೂಲಕ ಸಂಬಂಧಪಟ್ಟ ಇಲಾಖೆಗೆ ಈ ಬಗ್ಗೆ ದೂರು ನೀಡಲಾಗಿದ್ದು ತತ್ಕ್ಷಣ ಪರಿಶೀಲನೆ ನಡೆಸಿ, ವ್ಯವಸ್ಥಿತವಾಗಿ ಕಾಮಗಾರಿ ನಡೆಸುವಂತೆ ಆಗ್ರಹಿಸಲಾಗಿದೆ.
– ಜಯಕುಮಾರ್ ಬೆಳ್ಕಳೆ, ಅಧ್ಯಕ್ಷರು ತೆಂಕನಿಡಿಯೂರು ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ