ಕಾಂಗ್ರೆಸ್ ಪ್ರಚಾರ ಸಭೆ
Team Udayavani, Apr 13, 2019, 6:25 AM IST
ಹೆಬ್ರಿ: ಸಮೀಪದ ಶಿವಪುರದಲ್ಲಿ ಕಾಂಗ್ರೆಸ್ ಸಮಿತಿಯ ವತಿಯಿಂದ ಪಕ್ಷದ ಸ್ಥಳೀಯ ಕಾರ್ಯಕರ್ತರ ಸಭೆ ನಡೆಯಿತು.
ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್. ಗೋಪಾಲ ಭಂಡಾರಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾಂಗ್ರೆಸ್ ನಾಯಕ ನೀರೆ ಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ ಕುಮಾರ ಶೆಟ್ಟಿ, ಶಿವಪುರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಗನ್ನಾಥ ಕುಲಾಲ್, ನಾಯಕರಾದ ಸುಂದರ ಹೆಗ್ಡೆ, ವಿಶ್ವನಾಥ ನಾಯಕ್, ಶಂಕರ ಶೆಟ್ಟಿ, ಮಂಜುನಾಥ ಭಟ್ ಉಪಸ್ಥಿತರಿದ್ದರು.