ಕಾಂಗ್ರೆಸ್‌ನದ್ದು ರಾಜಕೀಯದ ಭಕ್ತಿ, ಹಿಂದುತ್ವ


Team Udayavani, Jan 24, 2018, 12:52 PM IST

24-16.jpg

ಉಡುಪಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಚುನಾವಣೆ ಮತ್ತು ರಾಜಕೀಯ ಉದ್ದೇಶದಿಂದ ಮಾಡುತ್ತಿರುವ ಹಿಂದುತ್ವ ಮತ್ತು ದೇವರ ಮೇಲಿನ ಭಕ್ತಿಗೆ ಗುಜರಾತ್‌ನ ಜನ ಪಾಠ ಕಲಿಸಿದ್ದಾರೆ. ಕರ್ನಾಟಕ ದಲ್ಲಿಯೂ ಇದೇ ರೀತಿಯಾಗಲಿದೆ ಎಂದು ಕೇಂದ್ರ ಸಚಿವ, ಕರ್ನಾಟಕ ಬಿಜೆಪಿಯ ಚುನಾವಣಾ ಸಂಚಾಲಕ ಪ್ರಕಾಶ್‌ ಜಾಬ್ಡೇಕರ್‌ ಹೇಳಿದರು.

ಜ.23ರಂದು ಉಡುಪಿಯಲ್ಲಿ ಬಿಜೆಪಿ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಹುಲ್‌ಗಾಂಧಿ ಅವರಿಗೆ ಈಗ ಹಿಂದುತ್ವದ ಮೇಲೆ ಪ್ರೀತಿ, ಭಕ್ತಿ ಮೂಡಿದೆ. ಅವರ ಹೇಳಿಕೆಯ ಅನಂತರ ಸಿದ್ದರಾಮಯ್ಯ ಕೂಡ ತಾನೂ ಓರ್ವ ಹಿಂದೂ ಎನ್ನು
ತ್ತಿದ್ದಾರೆ. ಆದರೆ ಕಾಂಗ್ರೆಸಿಗರ ರಾಜ ಕೀಯ ಉದ್ದೇಶದ ಹಿಂದುತ್ವದ ಪ್ರೀತಿ ಯನ್ನು ಜನ ಅರಿತುಕೊಂಡಿದ್ದಾರೆ ಎಂದು ಅವರು ಹೇಳಿದರು.

ವೋಟ್‌ಬ್ಯಾಂಕ್‌ ರಾಜ ಕಾರಣ: ಕಾಂಗ್ರೆಸ್‌ ಪಕ್ಷ ಮತಕ್ಕಾಗಿ ಕೇವಲ ಒಂದು ಸಮುದಾಯವನ್ನು ಓಲೈಕೆ ಮಾಡುತ್ತಿದೆ. ಉಗ್ರ ಚಟು
ವಟಿಕೆಗಳನ್ನು ನಡೆಸುವ, ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವ ಸಂಘಟನೆಗಳ ಮೇಲಿನ ಪ್ರಕರಣ ಗಳನ್ನು ಹಿಂಪಡೆದು ಆ ಸಂಘಟನೆಗಳ ಜತೆಗೆ ಕೈಜೋಡಿಸಿದೆ. ರಾಜ್ಯದಲ್ಲಿ ನಡೆದಿರುವ ಕೊಲೆ ಪ್ರಕರಣಗಳ ತನಿಖೆಯೇ ನಡೆಯುತ್ತಿಲ್ಲ ಎಂದವರು ಆರೋಪಿಸಿದರು.

ಆಗ 15 ರೂ. ಈಗ 100 ರೂ.
ಹೊಸದಿಲ್ಲಿಯಿಂದ 100 ರೂ. ಕಳುಹಿಸಿದರೆ ಅದರಲ್ಲಿ ಜನರಿಗೆ ಸಿಗುವುದು ಕೇವಲ 15 ರೂ. ಮಾತ್ರ ಎಂದು ರಾಜೀವ್‌ ಗಾಂಧಿಯವರು ಹೇಳುತ್ತಿದ್ದರು. ಇದು ನಿಜ. 85 ರೂ. ಕಾಂಗ್ರೆಸ್‌ನವರ ಪಾಲಾಗುತ್ತಿತ್ತು. ನರೇಂದ್ರ ಮೋದಿಯವರು ಪ್ರಧಾನಿಯಾದ ಅನಂತರ 100 ರೂ. ಕೂಡ ಫ‌ಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ. ಈ ರೀತಿ ಸೋರಿಕೆಯಾಗುತ್ತಿದ್ದ 70,000 ಕೋ.ರೂ. ಹಣವನ್ನು ಮೋದಿಯವರು ದೇಶಕ್ಕಾಗಿ ಉಳಿಸಿಕೊಡುತ್ತಿದ್ದಾರೆ ಎಂದು ಜಾಬ್ಡೇಕರ್‌ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಸಂಸದರಾದ ನಳಿನ್‌ ಕುಮಾರ್‌ ಕಟೀಲು, ಶೋಭಾ ಕರಂದ್ಲಾಜೆ, ಶಾಸಕ ಸುನಿಲ್‌ ಕುಮಾರ್‌, ಪಕ್ಷದ ಮುಖಂಡರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಉದಯ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು. ಕುಯಿಲಾಡಿ ಸುರೇಶ್‌ ನಾಯಕ್‌ ಮತ್ತು ಕುತ್ಯಾರು ನವೀನ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಜಾಬ್ಡೇಕರ್‌ ಅವರು ಪಕ್ಷದ ಪದಾಧಿಕಾರಿಗಳ ಜತೆಗೆ ಸಂವಾದ ನಡೆಸಿದರು.

ಇಂಟೆಲಿಜೆನ್ಸಿ ವಿರುದ್ಧ  ಗರಂ
ಬಿಜೆಪಿ ಪದಾಧಿಕಾರಿಗಳ ಸಭೆಯ ಉದ್ಘಾಟನ ಸಮಾರಂಭದ ಅನಂತರ ಪತ್ರಕರ್ತರು ಸಭೆಯಿಂದ ಹೊರಟರು. ಆದರೆ ಗುಪ್ತಚರ ಪೊಲೀಸರು ಸಭೆಯಲ್ಲಿಯೇ ಉಳಿದಿದ್ದರು. ಇದನ್ನು ಗಮನಿಸಿದ ಪದಾಧಿಕಾರಿಯೋರ್ವರು ಜಾಬ್ಡೇಕರ್‌ ಅವರ ಗಮನಕ್ಕೆ ತಂದರು. ಆಗ ಜಾಬ್ಡೇಕರ್‌ ಅವರು ಗುಪ್ತಚರ ಇಲಾಖೆ ಸಿಬಂದಿ ಹಾಗೂ ಸರಕಾರವನ್ನು ತರಾಟೆಗೆ ತೆಗೆದುಕೊಂಡರು. ಅನಂತರ ಸಿಬಂದಿ ಹೊರನಡೆದರು.

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.