ಕಾಂಗ್ರೆಸ್ ಪಕ್ಷ ನಿರಂತರವಾಗಿ ದೇಶದ್ರೋಹಕ್ಕೆ ಪ್ರೋತ್ಸಾಹ ನೀಡುತ್ತಿದೆ; ಶೋಭಾ ಕರಂದ್ಲಾಜೆ
Team Udayavani, Jun 13, 2021, 8:29 AM IST
ಉಡುಪಿ: ಕಾಂಗ್ರೆಸ್ ಯಾವಾಗಲೂ ರಾಷ್ಟ್ರ ವಿರೋಧಿ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ ಆರ್ಟಿಕಲ್ 370 ಅನ್ನು ಮರುಸ್ಥಾಪಿಸುತ್ತೇವೆ ಎಂದು ದಿಗ್ವಿಜಯ ಸಿಂಗ್ ಹೇಳಿರುವುದು ನಿಜಕ್ಕೂ ಆಘಾತಕಾರಿ. ಕಾಶ್ಮೀರದಲ್ಲಿ ಎಲ್ಲರೂ ಸಮಾನವಾಗಿ ಬದುಕುವ ಹಕ್ಕನ್ನು ಸ್ಥಾಪಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ರದ್ದು ಮಾಡ್ತೇವೆ ಎನ್ನುವ ಹೇಳಿಕೆ ನಿಜಕ್ಕೂ ಬಾಲಿಶ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಢಿಕ್ಕಿ ಹೊಡೆದ ಫಾಫ್ ಡು ಪ್ಲೆಸಿಸ್; ಆಸ್ಪತ್ರೆಗೆ ದೌಡು
ಕಾಂಗ್ರೆಸ್ ನಿರಂತರವಾಗಿ ದೇಶದ್ರೋಹಕ್ಕೆ ಪ್ರೋತ್ಸಾಹ ನೀಡುತ್ತಿದೆ. ದಿಗ್ವಿಜಯ ಸಿಂಗ್ ಅವರ ಮೇಲೆ ಕೇಂದ್ರ ಸರಕಾರ ದೇಶದ್ರೋಹದ ಅಡಿಯಲ್ಲಿ ಕೇಸು ದಾಖಲಿಸಬೇಕು, ಮಾತ್ರವಲ್ಲದೆ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ಕಾಂಗ್ರೆಸ್ ಪಕ್ಷ ಅವರ ನಿಲುವನ್ನು ಈ ವಿಚಾರದಲ್ಲಿ ಸ್ಪಷ್ಟಪಡಿಸಲಿ ಎಂದರು.
ದೇಶದಲ್ಲಿ ಮತ್ತು ರಾಜ್ಯದಲ್ಲಿ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಮಾನಸಿಕ ಸ್ಥಿಮಿತವನ್ನು ಕಳೆದುಕೊಳ್ಳುತ್ತಿದೆ ಇದೆ ವೇಳೆ ಕಿಡಿಕಾರಿದರು.
ಇದನ್ನೂ ಓದಿ: ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ