ಸರಕಾರದ ಸಾಧನೆ ಮೆಚ್ಚಿ ಕಾಂಗ್ರೆಸ್ಗೆ ಜನ ಬೆಂಬಲ : ಸೊರಕೆ
Team Udayavani, Jul 18, 2017, 2:00 AM IST
ಕಾಪು: ರಾಜ್ಯ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜನರು ಇಂದು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಅದರ ಫಲವಾಗಿ ಕೋಟೆ ಗ್ರಾ.ಪಂ. ಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ ಎಂದು ಕಾಪು ಶಾಸಕ ವಿನಯಕುಮಾರ್ ಸೊರಕೆ ಹೇಳಿದರು. ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೋಟೆ ಗ್ರಾಮ ಪಂಚಾಯತ್ಗೆ ನಡೆದ ಚುನಾವಣೆಯಲ್ಲಿ ಜಯ ಸಾಧಿಸಿದ ದಯಾನಂದ ಬಂಗೇರ ಮತ್ತು ಕಾಂಗ್ರೆಸ್ ಇಂಟೆಕ್ ವಿಭಾಗದ ಉಡುಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಗಣೇಶ್ ಕೋಟ್ಯಾನ್ ಅವರನ್ನು ಸಮ್ಮಾನಿಸಿ, ಅವರು ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಾಪು ದಿವಾಕರ್ ಶೆಟ್ಟಿ, ಕಾಪು ಪುರಸಭಾ ಅಧ್ಯಕ್ಷೆ ಕು| ಸೌಮ್ಯಾ, ಕರ್ನಾಟಕ ಮೀನುಗಾರಿಕಾ ನಿಗಮದ ನಿರ್ದೇಶಕ ದೀಪಕ್ ಕುಮಾರ್ ಎರ್ಮಾಳ್, ಯುವ ಕಾಂಗ್ರೆಸ್ ಅಧ್ಯಕ್ಷ ಮೆಲ್ವಿನ್ ಡಿ. ಸೋಜ, ಉಡುಪಿ ಜಿ. ಪಂ. ಮಾಜಿ ಅಧ್ಯಕ್ಷೆ ಸರಸು ಡಿ. ಬಂಗೇರ, ಕಾಪು ಬ್ಲಾಕ್ ವೀಕ್ಷಕ ಅಶೋಕ್ ಕುಮಾರ್ ಕೊಡವೂರು, ಪಕ್ಷದ ಮುಖಂಡರಾದ ವಿನಯ ಬಲ್ಲಾಳ್, ಶ್ರೀಕರ ಸುವರ್ಣ, ದೇವಪುತ್ರ ಕೋಟ್ಯಾನ್, ವೈ. ಸುಧೀರ್ ಕುಮಾರ್, ಎಚ್. ಅಬ್ದುಲ್ಲಾ, ಇಬ್ರಾಹಿಂ ಮನಹರ್, ಪಕ್ಷದ ಮುಖಂಡರು, ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನವೀನ್ಚಂದ್ರ ಜೆ. ಶೆಟ್ಟಿ ಸ್ವಾಗತಿಸಿದರು. ಯುವ ಕಾಂಗ್ರೆಸ್ ರಾಜ್ಯ ಪ್ರ. ಕಾರ್ಯದರ್ಶಿ ಅಬ್ದುಲ್ ಅಜೀಜ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್