ನರ್ಮ್ ಗೆ ತಡೆ: ಕಾಂಗ್ರೆಸ್ ಪ್ರತಿಭಟನೆ
Team Udayavani, Jul 7, 2017, 3:20 AM IST
ಉಡುಪಿ: ಉಡುಪಿಗೆ ತರಿಸಲಾದ 55 ನರ್ಮ್ ಬಸ್ಗಳ ಪರವಾನಿಗೆಯನ್ನು ನ್ಯಾಯಾಲಯದ ಮೂಲಕ ರದ್ದುಗೊಳಿಸಿದ ಖಾಸಗಿ ಬಸ್ ಮಾಲಕರ ನಡೆಯನ್ನು ವಿರೋಧಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ಉಡುಪಿಯ ಕ್ಲಾಕ್ ಟವರ್ ಮುಂಭಾಗ ಗುರುವಾರ ಪ್ರತಿಭಟನೆ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕರ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಉಡುಪಿಗೆ ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಎರಡರ ಅಗತ್ಯವೂ ಇದೆ. ನರ್ಮ್ ಬಸ್ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ದರದಲ್ಲಿ ಬಸ್ ಪಾಸ್, ಹಿರಿಯರಿಗೆ ರಿಯಾಯಿತಿ ದರ ಇದೆ. ಜತೆಗೆ ಕೆಲವೊಂದು ಗ್ರಾಮೀಣ ಪ್ರದೇಶಗಳಿಗೂ ಬಸ್ ವ್ಯವಸ್ಥೆ ಕಲ್ಪಿಸಲಾಗಿರುವುದರಿಂದ ಹೆಚ್ಚಿನ ಪ್ರಯೋಜನಗಳಾಗುತ್ತಿವೆ. ಜನೋಪಯೋಗಿ ಯೋಜನೆಯನ್ನು ಉಳಿಸಿಕೊಳ್ಳಲು ಜಿಲ್ಲಾಡಳಿತ ಕೋರ್ಟ್ ಆದೇಶದ ಕುರಿತು ಸೂಕ್ತ ಕಾನೂನು ವ್ಯವಸ್ಥೆ ಮಾಡಿಕೊಳ್ಳಬೇಕಿದೆ ಎಂದರು.
ಆರೋಗ್ಯಕರ ಸ್ಪರ್ಧೆ ಇರಲಿ
ಉಡುಪಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಮೃತ್ ಶೆಣೈ ಮಾತನಾಡಿ, ಕಾಂಗ್ರೆಸ್ ಸರಕಾರ ಜನರ ಜೀವನಾಡಿಯಾಗಿರುವ ನರ್ಮ್ ಬಸ್ಗಳನ್ನು ಜಿಲ್ಲೆಗೆ ತಂದಿದೆ. ಈ ಹೋರಾಟ ನ್ಯಾಯಾಲಯದ ವಿರುದ್ಧವಲ್ಲ. ಖಾಸಗಿ ಲಾಬಿಗೆ ಮಣಿಯದೆ ಉಡುಪಿಗೆ ನರ್ಮ್ ಬಸ್ಗಳನ್ನು ತಂದ ಸಚಿವ ಪ್ರಮೋದ್ ಅವರ ಬೆಂಬಲಕ್ಕೆ ನಾವೆಲ್ಲ ಇದ್ದೇವೆ ಎನ್ನುವುದನ್ನು ಸಾಬೀತುಪಡಿಸಲು ಈ ಪ್ರತಿಭಟನೆ ನಡೆಯುತ್ತಿದೆ. ನರ್ಮ್ ಬಸ್ಗಳಿಂದ ಜನರಿಗೆ ಬಹಳಷ್ಟು ಪ್ರಯೋಜನಗಳಾಗುತ್ತಿವೆ. ಇಂತಹ ಅಭಿವೃದ್ಧಿಯನ್ನು ಖಾಸಗಿಯವರು, ಬಿಜೆಪಿಗರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಯಾವ ನಾಯಕರು ನರ್ಮ್ ಬಸ್ ಪರ ಧ್ವನಿ ಎತ್ತುತ್ತಿಲ್ಲ. ಸರಕಾರಿ ಹಾಗೂ ಖಾಸಗಿ ಎರಡೂ ಪೈಪೋಟಿಯಿದ್ದರೆ ಮಾತ್ರ ವ್ಯವಸ್ಥಿತ ರೀತಿಯ ಸೇವೆ ಸಿಗಲು ಸಾಧ್ಯ. ಆರೋಗ್ಯಕರ ಸ್ಪರ್ಧೆ ಇರಲಿ ಎಂದರು.
ಪ್ರತಿಭಟನೆಯಲ್ಲಿ ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಕಾಂಗ್ರೆಸ್ ನಾಯಕರಾದ ನರಸಿಂಹಮೂರ್ತಿ, ವಿಶ್ವಾಸ್ ಅಮಿನ್, ವಿಘ್ನೇಶ್ ಕಿಣಿ, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾ, ರಾಜೇಶ್ ಶೆಟ್ಟಿ, ನಿತ್ಯಾನಂದ ಶೆಟ್ಟಿ, ವೇರೋನಿಕಾ ಕರ್ನೇಲಿಯೋ, ಜ್ಯೋತಿ ಹೆಬ್ಟಾರ್, ಮಲ್ಲಿಕಾ ಬಾಲಕೃಷ್ಣ ಪೂಜಾರಿ, ಚಂದ್ರಿಕಾ ಶೆಟ್ಟಿ, ರಮೇಶ್ ಕಾಂಚನ್, ಪಿ. ಯುವರಾಜ್, ಲತಾ ಆನಂದ ಶೇರಿಗಾರ್, ಶಶಿರಾಜ್ ಕುಂದರ್, ಆರ್. ಕೆ. ರಮೇಶ್, ಹೇಮಲತಾ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ