ಪಡುಬಿದ್ರಿ: ಪಂಚಾಯತ್ ದುರಾಡಳಿತ, ಸರ್ವಾಧಿಕಾರಿ ಧೋರಣೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ


Team Udayavani, Feb 8, 2022, 12:58 PM IST

ಪಡುಬಿದ್ರಿ: ಪಂಚಾಯತ್ ದುರಾಡಳಿತ, ಸರ್ವಾಧಿಕಾರಿ ಧೋರಣೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪಡುಬಿದ್ರಿ: ರವಿ ಶೆಟ್ಟಿ ಅಧ್ಯಕ್ಷತೆಯಲ್ಲಿನ ಬಿಜೆಪಿ ಬೆಂಬಲಿತ ಗ್ರಾ. ಪಂ. ನ ದುರಾಡಳಿತ ಹಾಗೂ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಗ್ರಾ. ಪಂ. ಎದುರು ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಪ್ರತಿಭಟನೆಯನ್ನು ಫೆ. 8ರಂದು ನಡೆಸಿತು.

ಸದಸ್ಯರನ್ನು ಅಧ್ಯಕ್ಷರು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಮನೆ ನಿವೇಶನಗಳು ಬಡವರಿಗೆ ಸಿಗುತ್ತಿಲ್ಲ. ನಿವೇಶನ ಹಕ್ಕುಪತ್ರ ನೀಡುತ್ತಿಲ್ಲ. ಕಸ ವಿಲೇವಾರಿಯನ್ನು ಸಮರ್ಪಕವಾಗಿ ಮಾಡಲಾಗುತ್ತಿಲ್ಲ. ಪಂಚಾಯತ್ ಎದುರು ಕಸದ ರಾಶಿಯನ್ನು ಹಾಕಲಾಗಿದೆ. ಸದಸ್ಯರ ಕಾನೂನಬದ್ಧ ಹಕ್ಕನ್ನು ಕಸಿದು ಕೊಳ್ಳಲಾಗುತ್ತಿದೆ. ಜಲಜೀವನ್ ಮಿಶನ್ ಯೋಜನೆಯಲ್ಲಿ ತಾರತಮ್ಯ, ಸದಸ್ಯರಿಗೆ ತಿಳಿಸದೇ ಅಧ್ಯಕ್ಷರು ತಾವಾಗಿಯೇ ಸಭೆಯನ್ನು ಕರೆಯುತ್ತಿರುವುದು, ಪಂಚಾಯತ್ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಳ್ಳದೆ ಗ್ರಾ. ಪಂ. ಎದುರು ವಾಣಿಜ್ಯ ಕಟ್ಟಡ ನಿರ್ಮಾಣ, ಕ್ರಿಯಾ ಯೋಜನೆಯಲ್ಲಿರಿಸದೇ ಪಂಚಾಯತ್ ನಿಧಿಯ ದುರ್ಬಳಕೆ ಮುಂತಾದ ವಿಚಾರಗಳ ಬಗೆಗೆ ಮಾಜಿ ಸಚಿವ ಸೊರಕೆ, ಶೇಖರ ಹೆಜಮಾಡಿ, ನವೀನ್. ಎನ್. ಶೆಟ್ಟಿ, ಗಣೇಶ್ ಕೋಟ್ಯಾನ್, ಸ್ಥಾನೀಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ ಸಾರ್ವಜನಿಕರ ಗಮನ ಸೆಳೆದರು.

ಸ್ಥಳಕ್ಕಾಗಮಿಸಿದ ಕಾಪು ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಶಿವಪ್ರಸಾದ್ ಅವರೊಂದಿಗೆ ಮಾಜಿ ಶಾಸಕ ವಿನಯಕುಮಾರ್ ಸೊರಕೆ ಅವರು, ಈ ಬಾರಿ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿದ್ದೇವೆ. ಮುಂದೆ ಸದಸ್ಯರ , ಸಾರ್ವಜನಿಕರ ಬೇಡಿಕೆಗಳು ಈಡೇರದಿದ್ದಲ್ಲಿ ತೀವ್ರ ಪ್ರತಿಭಟನೆಯೊಂದಿಗೆ ಗ್ರಾ. ಪಂ. ಗೆ ಮುತ್ತಿಗೆಯನ್ನು ಹಾಕಲಿರುವುದಾಗಿ ಹೇಳಿದರು.

ಪ್ರತಿಭಟನಕಾರರ ಪರ ಮನವಿ ಪತ್ರವನ್ನು ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಅವರಿಗೆ ನೀಡಲಾಯಿತು.

ಗ್ರಾ. ಪಂ. ಪಿಡಿಒ ಪಂಚಾಕ್ಷರಿ ಸ್ವಾಮಿ, ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್, ಮಾಜಿ ತಾ. ಪಂ. ಸದಸ್ಯರಾದ ನವೀನ್ ಚಂದ್ರ ಶೆಟ್ಟಿ, ದಿನೇಶ್ ಕೋಟ್ಯಾನ್, ಭಾಸ್ಕರ ಪಡುಬಿದ್ರಿ, ರಾಜೇಶ್ ಶೇರಿಗಾರ್, ಜ್ಯೋತಿ ಮೆನನ್, ಸುಚರಿತಾ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಾ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೈನ್, ಬ್ಲಾಕ್ ಎಸ್ ಸಿ/ ಎಸ್ಟಿ ಮೋರ್ಚಾ ಅಧ್ಯಕ್ಷ ಸುಧಾಕರ್ ಮತ್ತಿತರರಿದ್ದರು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.