ಹೆಮ್ಮಾಡಿ – ಕಟ್ಟು: ಮಣ್ಣಿನ ತಡೆ ದಂಡೆ ನಿರ್ಮಾಣ ಅಗತ್ಯ

ಉಪ್ಪು ನೀರಿನ ಕಾರಣ ಹಡಿಲು ಬಿದ್ದಿರುವ ಹತ್ತಾರು ಎಕ್ರೆ ಗದ್ದೆಗಳು

Team Udayavani, May 17, 2019, 6:20 AM IST

hemmady

ಹೆಮ್ಮಾಡಿ: ಇಲ್ಲಿನ ಕಟ್ಟು ಭಾಗದಲ್ಲಿ ಹಿಂದೆಲ್ಲ ಸಮೃದ್ಧ ಫಸಲು ತೆಗೆಯುತ್ತಿದ್ದ ಹತ್ತಾರು ಎಕರೆ ಗದ್ದೆಗಳು ಈಗ ಹಡಿಲು ಬಿದ್ದಿವೆ. ಹಲವು ವರ್ಷಗಳಿಂದ ಇಲ್ಲಿನ ರೈತರು ಗದ್ದೆಗಳಿಗೆ ಉಪ್ಪು ನೀರಿನ ಹಾವಳಿ ಬರದಂತೆ ತಡೆಯಲು ಮಣ್ಣಿನ ತಡೆ ದಂಡೆಗೆ ಬೇಡಿಕೆಯಿಟ್ಟಿದ್ದರೂ, ಇನ್ನೂ ಈಡೇರಿಲ್ಲ.

ಉಪ್ಪು ನೀರಿನಿಂದಾಗಿ ಕಟ್ಟು ಭಾಗದ ರೈತರಿಗೆ ಈ ವರ್ಷ ಒಂದೇ ಒಂದು ಬೆಳೆ ಬೆಳೆಯಲೂ ಸಾಧ್ಯವಾಗಿಲ್ಲ. 2 ವರ್ಷಗಳ ಹಿಂದೊಮ್ಮೆ ಹೆಮ್ಮಾಡಿ ಗ್ರಾ.ಪಂ. ನಿಂದ ಇದೇ ಭಾಗದಲ್ಲಿ ತುಸು ಮಣ್ಣಿನ ತಡೆ ದಂಡೆ ನಿರ್ಮಿಸಲಾಗಿತ್ತು. ಆದರೆ ಅದು ಇನ್ನಷ್ಟು ವಿಸ್ತರಿಸಿದರೆ ಮಾತ್ರ ಅನುಕೂಲವಾದೀತು ಎನ್ನುವುದು ಇಲ್ಲಿನ ರೈತರ ಅಭಿಪ್ರಾಯ.

400 ಮೀ. ವಿಸ್ತರಣೆ

2 ವರ್ಷದ ಹಿಂದೆ ಸ್ವಲ್ಪ ದೂರದವರೆಗೆ ಮಣ್ಣಿನ ದಂಡೆಯನ್ನು ನಿರ್ಮಿಸಲಾಗಿತ್ತು. ಆದರೆ ಇದರಿಂದ ಇಲ್ಲಿನ ರೈತರಿಗೆ ಪ್ರಯೋಜನಕ್ಕಿಂತ, ತೊಂದರೆಯೇ ಹೆಚ್ಚು. ಇನ್ನು ಸುಮಾರು 400 ಮೀಟರ್‌ನಷ್ಟು ಮಣ್ಣಿನ ತಡೆದಂಡೆಯನ್ನು ನಿರ್ಮಿಸಿದರೆ ಗದ್ದೆಗೆ ಉಪ್ಪು ನೀರು ಬರದಂತೆ ತಡೆಯಬಹುದು ಎನ್ನುತ್ತಾರೆ ಕೃಷಿಕ ನರಸಿಂಹ.

ಎಕರೆಗಟ್ಟಲೆ ಗದ್ದೆ ಹಡಿಲು ಇಲ್ಲಿ ಒಂದು ಬದಿ ಸೇವಂತಿಗೆ ಬೆಳೆಯುತ್ತಾರೆ. ಆದರೆ ರಸ್ತೆಯ ಈ ಕಡೆ ಉಪ್ಪು ನೀರಿನ ಸಮಸ್ಯೆಯಿಂದಾಗಿ ಸೇವಂತಿ ಬೆಳೆ ಸಹಿತ ಯಾವುದೇ ಕೃಷಿ ಮಾಡಲು ಆಗುತ್ತಿಲ್ಲ. ಇಲ್ಲಿ ಸುಮಾರು 75 ಮನೆಗಳಿದ್ದು, 50 ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ ಮಾಡಲಾಗುತ್ತಿತ್ತು. ಆದರೆ ಈಗ ಉಪ್ಪು ನೀರಿನ ಸಮಸ್ಯೆಯಿಂದಾಗಿ ಆ ಗದ್ದೆಗಳಲ್ಲಿ ಕೃಷಿ ಮಾಡದೇ ಹಡಿಲು ಬಿಡಲಾಗಿದೆ.

ಮನವಿ ಕೊಟ್ಟಿದ್ದರೆ ಪರಿಶೀಲನೆ

ಇಲ್ಲಿ ಎರಡು ಬೆಳೆ ಬೆಳೆಯಲು ಸಾಧ್ಯವಿಲ್ಲ. ಆದರೆ ಈಗ ಇಲ್ಲಿ ಒಂದು ಬೆಳೆ ಕೂಡ ಬೆಳೆಯಲು ಕಷ್ಟವಾಗುತ್ತಿದೆ. ಈ ಸಲವಾದರೂ 400 ಮೀ.ನಷ್ಟು ಮಣ್ಣಿನ ದಂಡೆ ವಿಸ್ತರಿಸಿದರೆ ಈ ಭಾಗದ ರೈತರಿಗೆ ಪ್ರಯೋಜನವಾಗಲಿದೆ. ಪ್ರತಿ ಸಲವೂ ಪಂಚಾಯತ್‌ಗೆ ಈ ಬಗ್ಗೆ ಮನವಿ ಕೊಟ್ಟಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. – ನರಸಿಂಹ ಕಟ್ಟು, ಕೃಷಿಕರು ಈ ಬಗ್ಗೆ ಪಂಚಾಯತ್‌ಗೆ ಈ ಹಿಂದೆ ಮನವಿ ಕೊಟ್ಟಿದ್ದರೆ, ಅದನ್ನು ಪರಿಶೀಲಿಸಿ, ಕ್ರಿಯಾ ಯೋಜನೆಯಲ್ಲಿ ಸೇರಿಸಲಾಗುವುದು. ಆ ಬಳಿಕ ಉದ್ಯೋಗ ಖಾತರಿ ಅಥವಾ ಬೇರೆ ಯಾವುದರ ಮೂಲಕವಾದರೂ ಮಣ್ಣಿನ ತಡೆ ದಂಡೆ ವಿಸ್ತರಣೆಗೆ ಪ್ರಯತ್ನಿಸಲಾಗುವುದು.
– ಮಂಜಯ್ಯ ಬಿಲ್ಲವ,ಹೆಮ್ಮಾಡಿ ಗ್ರಾ.ಪಂ. ಪಿಡಿಒ
– ಪ್ರಶಾಂತ್ ಪಾದೆ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.