ಮನೆ ನಿರ್ಮಾಣ: ಉಡುಪಿ ಜಿಲ್ಲೆಯಲ್ಲಿ ಮಳೆ ಕೊಯ್ಲು ಕಡ್ಡಾಯ
Team Udayavani, Jul 11, 2019, 5:16 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಜಿಲ್ಲೆಯ ಎಲ್ಲ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಸಂದರ್ಭದಲ್ಲಿ ಮಳೆ ನೀರು ಮರು ಪೂರಣ ಯೋಜನೆ ಕಡ್ಡಾಯಗೊಳಿಸಲಾಗಿದೆ. ಇಲ್ಲದಿದ್ದರೆ, ಮನೆ ನಿರ್ಮಾಣ ಅನಂತರ ಕಂಪ್ಲೀಷನ್ ಸರ್ಟಿಫಿಕೆಟ್ (ಸಿಸಿ) ಸಿಗುವುದಿಲ್ಲ.
ಭಾರತ ಸರಕಾರವು ಜಲಭದ್ರತೆಗಾಗಿ “ಜಲ ಶಕ್ತಿ ಅಭಿಯಾನ’ ಕಾರ್ಯಕ್ರಮವನ್ನು ರಾಜ್ಯ ಸರಕಾರಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಬುಧವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಈಗಾಗಲೇ ಪ್ರಗತಿಯಲ್ಲಿರುವ ಮನೆಗಳು ಕಾಮಗಾರಿ ಪೂರ್ಣಗೊಳ್ಳುವ ಮೊದಲು ಮಳೆ ನೀರು ಕೊಯ್ಲು ಯೋಜನೆಯನ್ನು ಕೈಗೊಳ್ಳಬೇಕು. ಹೊಸದಾಗಿ ನಿರ್ಮಾಣಗೊಳ್ಳಲಿರುವ ಮನೆಗಳ ಮೂಲ ಪ್ಲಾನ್ನಲ್ಲಿಯೇ ಮಳೆ ಕೊಯ್ಲು ಯೋಜನೆ ಇರಬೇಕು. ಇಲ್ಲದಿದ್ದರೆ ಅಂತಹ ಮನೆ ನಿರ್ಮಾಣಕ್ಕೆ ಲೈಸೆನ್ಸ್ ನೀಡದಂತೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾ. ಪಂ.ಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ತೆರೆದ ಬಾವಿ, ಬೋರ್ವೆಲ್ ಅಥವಾ ಪ್ರತ್ಯೇಕ ಇಂಗು ಗುಂಡಿ ಕೊರೆದು ಮಳೆ ನೀರು ಶೇಖರಣೆಗೆ ಯೋಜನೆ ಹಾಕಿಕೊಳ್ಳಬೇಕು ಎಂದು ಹೇಳಿದರು.
ಗಿಡ ನೆಡಲು ಸೂಚನೆ
ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಪ್ರಮುಖ ಕೆರೆ, ಮದಗಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿಗೊಳಿಸಲು ಅವರು ತಿಳಿಸಿದರು.
ಉಡುಪಿ ನಗರ ಸಭೆ ವ್ಯಾಪ್ತಿಯ 5 ವಾರ್ಡ್ಗಳನ್ನು ಆಯ್ಕೆ ಮಾಡಿ ಅಲ್ಲಿನ ಪ್ರತೀ ಮನೆಗೆ 5 ಗಿಡಗಳನ್ನು ನೀಡಿ ಬೆಳೆಸಲು ಪ್ರೋತ್ಸಾಹಿಸಬೇಕು. ಜುಲೈ ಅಂತ್ಯದೊಳಗೆ 20 ಸಾವಿರ ಗಿಡಗಳನ್ನು ಈ 5 ವಾರ್ಡ್ಗಳಲ್ಲಿ ನೆಟ್ಟು ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ನಗರಸಭೆ ಆಯುಕ್ತರಿಗೆ ಸೂಚನೆ ನೀಡಿದರು.
ಜಿ.ಪಂ. ಸಿಇಒ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಡಿಸಿ ಕಚೇರಿಯಲ್ಲಿ ಮಾಹಿತಿ
ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಿದ ಹಾಗೂ ಪೂರ್ಣಗೊಂಡ ಮನೆಗಳ ಸಂಖ್ಯೆ ಹಾಗೂ ಅವುಗಳಲ್ಲಿ ಮಳೆ ಕೊಯ್ಲು ಅಳವಡಿಸಿರುವ ಬಗ್ಗೆ ನಿಗಾ ವಹಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಗ್ರ ಮಾಹಿತಿ ಇಟ್ಟುಕೊಳ್ಳಲಾಗುವುದು. ಈ ಮಾಹಿತಿಗಳನ್ನು ಸಾರ್ವಜನಿಕವಾಗಿಯೇ ಪ್ರಕಟಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ