ಹೊಲಾಡು-ಆತ್ರಾಡಿ ಹೆಸಿನಗದ್ದೆ ನಡುವೆ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಆಗ್ರಹ


Team Udayavani, Jul 2, 2019, 5:09 AM IST

0107KLRE5A

ಕೊಲ್ಲೂರು: ವಂಡ್ಸೆ ಗ್ರಾಮದಲ್ಲಿ ಹರಿಯುವ ಚಕ್ರಾ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಬೇಕು ಎನ್ನುವುದು ಹಲವಾರು ವರ್ಷಗಳ ಬೇಡಿಕೆಯಾಗಿದ್ದು, ಇದೀಗ ಶಾಸಕರ ಮುತುವರ್ಜಿಯಿಂದ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ಮಂಜೂರಾತಿ ಆಗಿದೆ. ಈಗ ವಂಡ್ಸೆ ಸೇತುವೆ 700 ಮೀ. ಮೇಲ್ಭಾಗದಲ್ಲಿ ನಿರ್ಮಾಣಕ್ಕೆ ಸ್ಥಳ ಗುರುತಿಸಿದ್ದು, ಇದು ಅವೈಜ್ಞಾನಿಕವಾಗಿದ್ದು, ವಂಡ್ಸೆ ಸೇತುವೆಯ ಕೆಳಭಾಗದಲ್ಲಿ ಹೊಲಾಡು-ಆತ್ರಾಡಿ ಹೆಸಿನಗದ್ದೆ ನಡುವೆ ನಿರ್ಮಾಣವಾದರೆ ಬಹೂಪಯೋಗವಾಗುತ್ತದೆ.

ವಂಡ್ಸೆ ಗ್ರಾಮ ಮಾತ್ರವಲ್ಲದೇ ಕರ್ಕುಂಜೆ, ಕಟ್ಬೇಲ್ತೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಿಗೆ ಅನುಕೂಲವಾಗುತ್ತದೆ. ಹೊಲಾಡು-ಆತ್ರಾಡಿ ಮಧ್ಯೆ ಎಲ್ಲಿಯಾದರೂ ಕಿಂಡಿ ಅಣೆಕಟ್ಟು ಆದರೆ ಜಲಾಶಯದ ನೀರಿನ ಮಟ್ಟವೂ ಸಾಕಷ್ಟು ಇರಲಿದ್ದು, ಹಲವಾರು ನೈಸರ್ಗಿಕವಾದ ತೋಡುಗಳ ಮೂಲಕ ನೀರು ಗ್ರಾಮದ ಒಳಗಡೆ ಹರಿವು ಆಗಿ ಅಂತರ್ಜಲವೂ ವೃದ್ಧಿಸಲಿದೆ. ಹಾಗಾಗಿ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಿ, ಕಿಂಡಿ ಅಣೆಕಟ್ಟು ನಿರ್ಮಾಣ ಸ್ಥಳ ಬದಲಾವಣೆ ಮಾಡುವುದು ಅತ್ಯಗತ್ಯವಾಗಿದೆ ಎಂದು ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಅಭಿಪ್ರಾಯಪಟ್ಟರು.

ವಂಡ್ಸೆ ಚಕ್ರಹೊಳೆಗೆ ನಿರ್ಮಿಸಲು ಉದ್ದೇಶಿಸಿರುವ ಕಿಂಡಿ ಅಣೆಕಟ್ಟು ಸ್ಥಳ ಬದಲಾವಣೆಯ ಕುರಿತು ವಂಡ್ಸೆ ಗ್ರಾ.ಪಂ. ಸಭಾಂಗಣದಲ್ಲಿ ಜು. 1ರಂದು ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗ ನಿರ್ಧರಿಸಿದ ಸ್ಥಳದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾದರೆ ಅದರ ಪ್ರಯೋಜನ ಕಡಿಮೆ. ಮೇಲ್ಭಾಗದಲ್ಲಿ ಹೊಳೆ ಸಮಾನಾಂತರವಾಗಿಲ್ಲ, ಹೆಚ್ಚು ಉದ್ದಕ್ಕೆ ನೀರು ನಿಲ್ಲವುದಿಲ್ಲ. ಹೊಳೆಯ ಇಕ್ಕೆಲಗಳಲ್ಲಿ ಕೃಷಿಕರ ಜಮೀನು ಕಡಿಮೆ, ಬಾವಿಗಳ ಸಂಖ್ಯೆ ಕಡಿಮೆ, ಅರಣ್ಯ ಪ್ರದೇಶ ಜಾಸ್ತಿ ಇದೆ. ಹಾಗಾಗಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಬಹಳಷ್ಟು ಜನರಿಗೆ ಪ್ರಯೋಜನ ಸಿಗಬೇಕಿದ್ದರೆ ಮೂರು ಗ್ರಾ.ಪಂ.ಗಳಿಗೆ ಅನುಕೂಲವಾಗುವಂತೆ ಸೇತುವೆ ಕೆಳಭಾಗದಲ್ಲಿ 1,500 ಮೀ. ಒಳಗಡೆ ಮಾಡುವುದು ಸೂಕ್ತವಾಗಿದೆ ಎಂದರು.

ಸಭೆಯಲ್ಲಿ ನೆರೆದ ಗ್ರಾಮಸ್ಥರು ಸೇತುವೆಯ ಕೆಳಭಾಗದಲ್ಲಿ ಡ್ಯಾಮ್‌ ನಿರ್ಮಾಣ ಮಾಡುವುದರಿಂದ ಬಹೂಪಯೋಗವಿದೆ. ನೆರೆಯ ಬಾಳಿಕೆರೆ ಗ್ರಾಮಕ್ಕೂ ಸುಲಭ ಸಂಪರ್ಕವಾಗುತ್ತದೆ. ಮುಖ್ಯವಾಗಿ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ದಟ್ಟವಾಗಿದೆ. ಹೆಮ್ಮಾಡಿ ಕಟ್ಟುವಿನ ಉಪ್ಪುನೀರು ತಡೆ ಅಣೆಕಟ್ಟು ವಿನ ಅವೈಜ್ಞಾನಿಕ ನಿರ್ವಹಣೆಯಿಂದ ಉಪ್ಪುನೀರು ನಿರಂ ತರವಾಗಿ ಒಳ ನುಗ್ಗುತ್ತಿದೆ. ಜನವರಿಯಿಂದಲೇ ಹೊಳೆಯ ಸಮೀಪದ ಬಾವಿಗಳಲ್ಲಿ ಉಪ್ಪು ನೀರು ಕಾಣಿಸಿಕೊಳ್ಳುತ್ತದೆ. ವಂಡ್ಸೆ ಗ್ರಾಮದಲ್ಲಿ ಫೆಬ್ರವರಿ ಮಾರ್ಚ್‌ನಿಂದಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಅಂತರ್ಜಲದ ಮಟ್ಟ ಸಂಪೂರ್ಣ ಕುಸಿದಿರುವ ಕಾರಣ ಹೊಲಾಡು-ಹೆಸಿನಗದ್ದೆ ನಡುವೆ ಡ್ಯಾಂ ನಿರ್ಮಾಣ ಆದರೆ ಕುಡಿಯುವ ನೀರು, ಕೃಷಿಗೂ ಅನುಕೂಲವಾಗುತ್ತದೆ. ಸೇತುವೆಯ ಕೆಳಭಾಗದಲ್ಲಿ ಹೊಳೆ ವಿಶಾಲವಾಗಿದ್ದು, ನೀರು ಶೇಖರಣೆ ವಿಪುಲ ಅವಕಾಶಗಳಿವೆ. ಹೊಳೆಯ ಎರಡು ಭಾಗಗಳಲ್ಲಿ ಯಥೇಚ್ಛ ಪ್ರಮಾಣದಲ್ಲಿ ತೋಟಗಾರಿಕೆ ನಿರತ ಕೃಷಿ ಕುಟುಂಬಗಳಿವೆ. ಭತ್ತ ಬೆಳೆಯುವ ಗದ್ದೆಗಳಿವೆ ಎಂದರು.

ಗ್ರಾ.ಪಂ. ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ಸದಸ್ಯರಾದ ಉದಯ ಕೆ.ನಾಯ್ಕ, ಗುಂಡು ಪೂಜಾರಿ ಹರವರಿ, ಸಿಂಗಾರಿ, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ವಿ.ಕೆ. ಶಿವರಾಮ ಶೆಟ್ಟಿ, ಶ್ರೀನಿವಾಸ ಪೂಜಾರಿ ಕಲ್ಮಾಡಿ, ತ್ಯಾಂಪಣ್ಣ ಶೆಟ್ಟಿ, ಮಹಮ್ಮದ್‌ ರಫೀಕ್‌, ಮಾತೃಭೂಮಿ ಯುವ ಸಂಘಟನೆ ಅಧ್ಯಕ್ಷ ಸಂದೇಶ ಶೆಟ್ಟಿ ಅಡಿಕೆಕೊಡ್ಲು, ಮಾಜಿ ಅಧ್ಯಕ್ಷ ರಮೇಶ ಪೂಜಾರಿ ಬಳಿಹಿತ್ಲು, ಫಾರೂಕ್‌ ಸಾಹೇಬ್‌, ಬಿಜು ಥಾಮಸ್‌ ಅಭಿಪ್ರಾಯ ಮಂಡಿಸಿದರು.

ಈಗ ಪ್ರಸ್ತಾವಿತ ಸ್ಥಳ ಬದಲಾಯಿಸಿ ವಂಡ್ಸೆ ಸೇತುವೆಯ ಕೆಳಭಾಗದಲ್ಲಿ ಹೊಲಾಡು-ಆತ್ರಾಡಿ ಹೆಸಿನಗದ್ದೆ ನಡುವೆ ಕಿಂಡಿ ಅಣೆಕಟ್ಟು ನಿರ್ಮಿಸುವಂತೆ ನಿರ್ಣಯ ಕೈಗೊಳ್ಳಲಾಯಿತು. ಪಂಚಾಯತ್‌ ಅಭಿವೃದ್ದಿ ಅಧಿಕಾರಿ ರೂಪ ಗೋಪಿ ಸ್ವಾಗತಿಸಿ, ವಂದಿಸಿದರು.

ಸೇತುವೆ ಕೆಳಭಾಗದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಬಹೂಪಯೋಗ
ಸೇತುವೆಯ ಕೆಳಭಾಗದಲ್ಲಿ ಡ್ಯಾಮ್‌ ನಿರ್ಮಾಣ ಮಾಡುವುದರಿಂದ ಬಹೂಪಯೋಗವಿದೆ. ನೆರೆಯ ಬಾಳಿಕೆರೆ ಗ್ರಾಮಕ್ಕೂ ಸುಲಭ ಸಂಪರ್ಕವಾಗುತ್ತದೆ. ಮುಖ್ಯವಾಗಿ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ದಟ್ಟವಾಗಿದೆ. ವಂಡ್ಸೆ ಗ್ರಾಮದ ಪಶ್ಚಿಮ ಗಡಿ ಹೆಸಿನಗದ್ದೆ ಆಗಿರುವುದರಿಂದ ಅಲ್ಲಿಂದ ವಂಡ್ಸೆ ಗ್ರಾಮದ ಪೂರ್ವ ಗಡಿ ತನಕ ಇರುವ ಎಲ್ಲರಿಗೂ ಅನುಕೂಲವಾಗುತ್ತದೆ. ವಂಡ್ಸೆ ಗ್ರಾಮದಲ್ಲಿ ಫೆಬ್ರವರಿ ಮಾರ್ಚ್‌ನಿಂದಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದ್ದು ಅಂತರ್ಜಲದ ಮಟ್ಟ ಸಂಪೂರ್ಣ ಕುಸಿದಿರುವ ಕಾರಣ ಹೊಲಾಡು-ಹೆಸಿನಗದ್ದೆ ನಡುವೆ ಡ್ಯಾಂ ನಿರ್ಮಾಣ ಆದರೆ ಕುಡಿಯುವ ನೀರು, ಕೃಷಿಗೂ ಅನುಕೂಲವಾಗುತ್ತದೆ. ಸೇತುವೆಯ ಕೆಳಭಾಗದಲ್ಲಿ ಹೊಳೆ ವಿಶಾಲವಾಗಿದ್ದು, ಜಲಾಶಯದ ನೀರು ಶೇಖರಣ ಮಟ್ಟವೂ ಗರಿಷ್ಠವಾಗಲಿದೆ. ಹೊಳೆಯ ಎರಡು ಭಾಗಗಳಲ್ಲಿ ಯಥೇಚ್ಛ ಪ್ರಮಾಣದಲ್ಲಿ ತೋಟಗಾರಿಕೆ, ಭತ್ತ ಬೆಳೆಯುವ ಗದ್ದೆಗಳಿವೆ, ಹಲವಾರು ನೈಸರ್ಗಿಕ ತೋಡುಗಳು ಹೊಳೆಗೆ ಸಂಪರ್ಕ ಪಡೆಯುವುದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಏರುವುದರಿಂದ ಹಳ್ಳಗಳ ಮೂಲಕ ನೀರು ಗ್ರಾಮದ ಒಳಗಡೆ ಹರಿದು ಅಂತರ್ಜಲ ವೃದ್ಧಿಯಾಗುತ್ತದೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.