ಗೋಹತ್ಯೆ ವಿರುದ್ಧ ಹೋರಾಟ ನಿರಂತರ: ಸುರೇಂದ್ರ ಮಾರ್ಕೋಡು
Team Udayavani, Jul 4, 2019, 5:51 AM IST
ಕುಂದಾಪುರ: ಹೈನುಗಾರರ ಜೀವನಾಧಾರವಾದ ಗೋವನ್ನು ಹಟ್ಟಿಗೆ ನುಗ್ಗಿ ಕಳ್ಳತನ ಮಾಡಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುವ ಸ್ಥಿತಿ ಬಂದಿದೆ. ಇದನ್ನು ಪ್ರಶ್ನಿಸುವ ಹಿಂದೂಗಳ ಮೇಲೆ ಕೇಸು ದಾಖಲಿಸಿ ನಮ್ಮ ಭಾವನೆಗಳ ಜತೆ ಸರಕಾರ ಆಟವಾಡುತ್ತಿದೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಗೋಹತ್ಯೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ ನಿರಂತರವಾಗಿ ಇರುತ್ತದೆ ಎಂದು ಬಜರಂಗದಳ ತಾಲೂಕು ಸಂಚಾಲಕ ಸುರೇಂದ್ರ ಮಾರ್ಕೋಡು ಹೇಳಿದರು.
ಅವರು ಬುಧವಾರ ಇಲ್ಲಿನ ಶಾಸ್ತ್ರಿ ಸರ್ಕಲ್ನ ತಾಲೂಕು ಪಂಚಾಯತ್ ಹೊರಾವರಣದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಕುಂದಾಪುರ ತಾಲೂಕು ವತಿಯಿಂದ ನಡೆದ ಗೋಹತ್ಯೆ ವಿರೋಧಿಸಿ ಪ್ರತಿಭಟನೆಯಲ್ಲಿ ಮಾತನಾಡಿದರು.
ಗೋವು ನಮ್ಮ ಶ್ರದ್ಧಾಬಿಂದು
ಕೋಮು ಸಾಮರಸ್ಯ ಹಾಳು ಮಾಡುವ ಅಕ್ರಮ ಗೋಸಾಗಾಟ, ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಬೇಕು. ಗೋವು ನಮ್ಮ ಶ್ರದ್ಧಾಬಿಂದು. ನಮ್ಮ ಧಾರ್ಮಿಕ ಭಾವನೆಗಳ ಜತೆ ಆಟವಾಡಿ ಅನಂತರ ಕಾನೂನು ಸುವ್ಯವಸ್ಥೆ ಹಾಳಾದರೆ ಅದಕ್ಕೆ ಹಿಂದೂ ಸಂಘಟನೆಗಳನ್ನು ಹೊಣೆ ಮಾಡಬೇಡಿ ಎಂದರು.
ತಾಲೂಕು ವಿಹಿಂಪ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಗೋಳಿಯಂಗಡಿ, ಆತ್ಮಸಾಕ್ಷಿಗೆ ಸರಿಯಾಗಿ ಪೊಲೀಸರು ಕೆಲಸ ಮಾಡಿದಾಗ ಇಂತಹ ಘಟನೆಗಳು ನಡೆಯುವುದಿಲ್ಲ. ಕರಾವಳಿ ಜನ ಸುಶಿಕ್ಷಿತರಾಗಿದ್ದು ಧಾರ್ಮಿಕ ಭಾವೆನಗಳ ಚೆಲ್ಲಾಟ ಸರಿಯಲ್ಲ. ಕಾನೂನು ಸುವ್ಯವಸ್ಥೆ ಕುರಿತು ಇಲ್ಲಿನ ಜನರಿಗೆ ಬೋಧನೆ ಅಗತ್ಯ ಇಲ್ಲ. ಆದರೆ ಧಾರ್ಮಿಕ ಭಾವನೆಗೆ ಘಾಸಿಯಾದಾಗ ಸಹಿಸಿಕೊಂಡು ಕೂರು ವವರೂ ಅಲ್ಲ ಎಂದರು.
ವಿಹಿಂಪ ಮುಖಂಡ ಪ್ರೇಮಾನಂದ ಶೆಟ್ಟಿ ಕಟ್ಕೇರಿ, ನಮ್ಮಲ್ಲಿ ಗೌಪ್ಯ ಚಟು ವಟಿಕೆಗಳಿಲ್ಲ. ಸೈನಿಕರು, ಪೊಲೀಸರನ್ನು ಹತ್ಯೆ ಮಾಡುವುದಿಲ್ಲ. ನೆಲ ಜಲ ಉಳಿಸುವ ಹೋರಾಟ ನಮ್ಮದು ಎಂದರು.
ಆರ್ಎಸ್ಎಸ್ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸುಬ್ರಹ್ಮಣ್ಯ ಹೊಳ್ಳ, ಎಲ್ಲರಿಗೆ ಗೋವಿನ ಮಹತ್ವ ತಿಳಿದಿದೆ. ಅಮೆರಿಕದವರು ಗೋವಿನ ವಿವಿಧ ವಸ್ತುಗಳ ಮೇಲೆ ಪೇಟೆಂಟ್ ಮಾಡಲು ಹೊರಟಿದ್ದಾರೆ. ಆದರೆ ನಾವಿನ್ನೂ ಅದರ ಹಿಂಸೆಯನ್ನು ಕಾಣುವ ದಿನಗಳಲ್ಲೇ ಇದ್ದೇವೆ ಎಂದರು.
ಸುರೇಂದ್ರ ನಿರ್ವಹಿಸಿದರು. ತಾಲೂಕು ಬಿಜೆಪಿ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಜಿ.ಪಂ. ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ಪುರಸಭೆ ಸದಸ್ಯರಾದ ಸಂತೋಷ್ ಕುಮಾರ್ ಶೆಟ್ಟಿ, ಪ್ರಭಾಕರ, ಸಂದೀಪ್ ಖಾರ್ವಿ, ಬಿಜೆಪಿ ಮುಖಂಡರಾದ ಭಾಸ್ಕರ ಬಿಲ್ಲವ, ಶಂಕರ ಅಂಕದಕಟ್ಟೆ, ಗುಣರತ್ನ, ಸುನಿಲ್ ಶೆಟ್ಟಿ ಹೇರಿಕುದ್ರು, ಮಹೇಶ್ ಕುಮಾರ್, ಸದಾನಂದ ಬಳ್ಕೂರು ಮೊದಲಾದವರು ಉಪಸ್ಥಿತರಿದ್ದರು.
ಮೆರವಣಿಗೆ ಮೂಲಕ ಸಾಗಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್