ಗೆಲುವಿನ ನಾಗಾಲೋಟ ಮುಂದುವರಿಕೆ: ಬಿಜೆಪಿ


Team Udayavani, May 17, 2018, 11:53 AM IST

bjp.jpg

ಉಡುಪಿ: ಕಳೆದ ಲೋಕ ಸಭಾ ಚುನಾವಣೆಯ ಅನಂತರ ಉಡುಪಿ ಜಿಲ್ಲಾ ಬಿಜೆಪಿ ಗೆಲುವಿನ ನಾಗಾಲೋಟ ಮುಂದುವರಿಸಿಕೊಂಡು ಬಂದಿದೆ. ಈ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 5 ಕ್ಷೆತ್ರಗಳನ್ನು ಗೆದ್ದಿರುವುದು ಕೂಡ ಈ ನಾಗಾಲೋಟದ ಒಂದು ಭಾಗ. ಇದು ಮತ್ತೆ ಮುಂದುವರಿಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದ್ದಾರೆ.

ಮೇ 16ರಂದು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ, ಜನತೆಗೆ ಕೃತಜ್ಞತೆ, ಅಭಿನಂದನೆಗಳನ್ನು ಸಲ್ಲಿಸಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಯುದ್ಧಕಾಲದಲ್ಲಿ ಮಾತ್ರ ಶಸ್ತ್ರಾಭ್ಯಾಸ ಮಾಡುವವರಲ್ಲ. ಯುದ್ಧಕ್ಕೆ ಸದಾ ಸಿದ್ಧರಾಗಿರುವವರು. ಕಳೆದ ಲೋಕಸಭಾ ಚುನಾವಣೆಯ ಅನಂತರ ಜಿ.ಪಂ.,ತಾ.ಪಂ., ಎಪಿಎಂಸಿ, ಗ್ರಾ.ಪಂ. ಚುನಾವಣೆಗಳನ್ನು ಬಿಜೆಪಿ ಗೆದ್ದಿದೆ. ಸದ್ಯದಲ್ಲಿಯೇ ಬರುವ ವಿಧಾನ ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಈಗಾ ಗಲೇ ಸಿದ್ಧತೆ ನಡೆದಿದೆ. ನಗರಸಭೆ ಚುನಾವಣೆಯಲ್ಲಿ 35 ಸ್ಥಾನಗಳ ಪೈಕಿ 30 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಲಾಗಿದೆ. ದಿಕ್ಕು ತಪ್ಪಿರುವ ನಗರಸಭೆ ಆಡಳಿತವನ್ನು ಸರಿಪಡಿಸಲಾಗುವುದು. 2019ರಲ್ಲಿ ಲೋಕಸಭಾ ಚುನಾವಣೆಯಲ್ಲಿ ದೇಶಕ್ಕೆ ಮತ್ತೂಮ್ಮೆ ನರೇಂದ್ರ ಮೋದಿಯವರ ಆಡಳಿತ ದೊರೆಯುವಂತೆ ಮಾಡಲು ಕಾರ್ಯಕರ್ತರು ಸಿದ್ಧಗೊಳ್ಳಲಿದ್ದಾರೆ ಎಂದರು.

ಎರಡು ವರ್ಷಗಳ ಶ್ರಮ
ಕಾರ್ಯಕರ್ತರು 2 ವರ್ಷಗಳಿಂದ ಅವಿರತವಾಗಿ ಶ್ರಮಪಟ್ಟಿದ್ದಾರೆ. 5 ಕ್ಷೇತ್ರಗಳಲ್ಲಿಯೂ ಗೆಲುವಿನ ವಿಶ್ವಾಸ ವಿತ್ತು. ಮತದಾನದ ಸಂದರ್ಭದಲ್ಲಿ ಮತಗಟ್ಟೆಗಳಿಗೆ ತೆರಳಿದಾಗ ಗೆಲುವು ಖಚಿತವಾಗಿತ್ತು. ಜಿಲ್ಲೆಯಲ್ಲಿ ಬಿಜೆಪಿ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನ ಗಳಿಸಿದೆ. ಮತ ಗಳಿಕೆಯಲ್ಲಿ ರಾಜ್ಯದಲ್ಲೇ 3ನೇ ಸ್ಥಾನ ಪಡೆದಿದೆ. ಕಳೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 1 ಸ್ಥಾನ ಮಾತ್ರ ಗೆದ್ದಿದ್ದೆವು. ಪ್ರಮೋದ್‌ ಮತ್ತು ಸೊರಕೆ ಅವರು ಸಚಿವರಾಗಿ ಚುನಾವಣೆಗೆ ಪೂರ್ಣ ಸಿದ್ಧತೆ ಮಾಡಿಕೊಂಡಿದ್ದರು. ಗೋಪಾಲ ಪೂಜಾರಿ ಅವರು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ರಾಗಿದ್ದರು. ಇವೆಲ್ಲವೂ ಬಿಜೆಪಿಗೆ ಸವಾಲಾಗಿತ್ತು. ಕಾರ್ಕಳ ಮತ್ತು ಕುಂದಾಪುರದಲ್ಲಿ ಮಾತ್ರ ದೊಡ್ಡ ಸವಾಲು ಇರಲಿಲ್ಲ. ಆದರೆ ಈಗ ನಿರೀಕ್ಷೆ ಗಿಂತ ಹೆಚ್ಚಿನ ಮತ ಗಳು ದೊರೆತಿವೆ ಎಂದು ಮಟ್ಟಾರು ಹೇಳಿದರು.

ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ, ಬೂತ್‌ ಸಮಿತಿ, ಪೇಜ್‌ ಪ್ರಮುಖರ ಕೆಲಸ, ವಿಸ್ತಾರಕರ ಕೆಲಸ ಗೆಲುವಿಗೆ ನೆರವಾಯಿತು. ಅಮಿತ್‌ ಶಾ, ನರೇಂದ್ರ ಮೋದಿಯವರ ಕಾರ್ಯಕ್ರಮಗಳು ಪೂರಕವಾದವು. ಉಡುಪಿ ಸೇರಿದಂತೆ ನಾಲ್ಕು ಜಿಲ್ಲೆಗಳ ಉಸ್ತುವಾರಿಯಾಗಿದ್ದ ಮುಖಂಡರಾದ ಓಂ ಪ್ರಕಾಶ್‌ ಮಾಥೂರ್‌ ಮತ್ತು ಮಹೇಂದ್ರ ಸಿಂಗ್‌ ಅವರ ಮಾರ್ಗದರ್ಶನ ತುಂಬಾ ಅನು ಕೂಲವಾಯಿತು ಎಂದು ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಟ್ಟಾರು, ಉಡುಪಿಯಲ್ಲಿ ಚುನಾ ವಣಾ ಪ್ರಚಾರ ಕಾರ್ಯದಲ್ಲಿ ಸಂಸದೆ ಶೋಭಾ ಕೂಡ ಪಾಲ್ಗೊಂಡಿದ್ದರು. ಆದರೆ ಅವರಿಗೆ ಅಮಿತ್‌ ಶಾ ರಾಜ್ಯ ಮಟ್ಟದಲ್ಲಿ ಹೆಚ್ಚಿನ ಜವಾಬ್ದಾರಿ ವಹಿ ಸಿದ್ದ ರಿಂದಾಗಿ ಉಡುಪಿಗೆ ಹೆಚ್ಚು ಸಮಯ ನೀಡಲು ಆಗಿಲ್ಲ ಎಂದರು. 

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಯಶ್‌ಪಾಲ್‌ ಸುವರ್ಣ, ಕುಯಿಲಾಡಿ ಸುರೇಶ್‌ ನಾಯಕ್‌, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಶ ನಾಯಕ್‌, ಪ್ರವೀಣ್‌ ಶೆಟ್ಟಿ ಕಪ್ಪೆಟ್ಟು, ನಗರಾಧ್ಯಕ್ಷ ಪ್ರಭಾಕರ ಪೂಜಾರಿ, ಎಸ್‌ಸಿ ಮೋರ್ಚಾದ ಹೇಮಂತ್‌ ಕುಮಾರ್‌ ಉಪಸ್ಥಿತರಿದ್ದರು. 

ದ್ವೇಷದ ರಾಜಕಾರಣವಿಲ್ಲ
ಕಾಂಗ್ರೆಸ್‌ನವರು ನಮ್ಮ ಕಾರ್ಯಕರ್ತರಿಗೆ ತೊಂದರೆ ನೀಡಿದ್ದರೂ ನಾವು ಆ ರೀತಿ ಮಾಡಲು ಹೋಗುವುದಿಲ್ಲ. ಮುಯ್ಯಿಗೆ ಮುಯ್ಯಿ ತೀರಿಸಲು ಯಾವ ಶಾಸಕರಿಗೂ ಸಲಹೆ ನೀಡುವುದಿಲ್ಲ. ಜಾತಿ, ಮತ, ರಾಜಕೀಯ ಭೇದವಿಲ್ಲದೆ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು. ದ್ವೇಷದ ರಾಜಕಾರಣದ ಬದಲು, ಅಭಿವೃದ್ಧಿ ರಾಜಕಾರಣ ಮಾಡಲಾಗುವುದು. ಚುನಾವಣಾ ಪ್ರಣಾ ಳಿಕೆಯನ್ನು ಅನುಷ್ಠಾನಗೊಳಿಸುವುದಕ್ಕಾಗಿ ಪ್ರತಿ ತಿಂಗಳಿಗೊಮ್ಮೆ ಶಾಸಕರ ಜತೆ ಸೇರಿ ಚಿಂತನ ಮಂಥನ ನಡೆಸಲಾಗುವುದು ಎಂದು ಮಟ್ಟಾರು ಹೇಳಿದರು.

21ರಲ್ಲಿ 18 ಗೆಲ್ಲಿಸಿದ ಮಾಥೂರ್‌!
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಓಂ ಪ್ರಕಾಶ್‌ ಮಾಥೂರ್‌ ಅವರು ಉತ್ತರ ಪ್ರದೇಶ ದಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿ ವಹಿಸಿಕೊಂಡು ಗೆಲುವಿಗೆ ಕಾರಣರಾಗಿದ್ದರು. ನಮ್ಮ ರಾಜ್ಯದಲ್ಲಿ ಉಡುಪಿ, ದ.ಕ., ಕೊಡಗು ಮತ್ತು ಉ.ಕ. ಜಿಲ್ಲೆಗಳ ಜವಾಬ್ದಾರಿ ವಹಿಸಿಕೊಂಡಿದ್ದರು. ಈ ಜಿಲ್ಲೆಗಳ ಒಟ್ಟು 21 ಕ್ಷೇತ್ರಗಳಲ್ಲಿ 18 ಕ್ಷೇತ್ರಗಳಲ್ಲಿ ಗೆಲುವಾಗುವಂತೆ ಮಾಡಿದ್ದಾರೆ ಎಂದು ಮಟ್ಟಾರು ತಿಳಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.