ಕಾಂಕ್ರೀಟ್‌ಗೆ ಕರಾರು; ಆದರೆ ಆಗಿದ್ದು ಡಾಮರು ಕಾಮಗಾರಿ

ಮೀನುಗಾರಿಕಾ ಬಂದರಿನ ಒಳರಸ್ತೆ

Team Udayavani, Feb 21, 2020, 5:50 AM IST

2012KDPP1

ಗಂಗೊಳ್ಳಿ: ಕಡಲ್ಕೊರೆತ ತಡೆಗಾಗಿ ಗಂಗೊಳ್ಳಿಯಲ್ಲಿ ಕೈಗೊಂಡ ಬ್ರೇಕ್‌ ವಾಟರ್‌ ಕಾಮಗಾರಿಯಿಂದಾಗಿ ಇಲ್ಲಿನ ಮೀನುಗಾರಿಕಾ ಬಂದರಿನ ಒಳ ರಸ್ತೆಗಳಿಗೆ ಅಪಾರ ಹಾನಿಯಾಗಿದ್ದು, ಇದನ್ನು ಕಾಂಕ್ರೀಟಿಕರಣ ಮಾಡಿಕೊಡುವುದಾಗಿ ಡಿಸಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕರಾರು ಆಗಿದ್ದರೂ, ಈಗ ಕಳಪೆ ಡಾಮರೀಕರಣ ಮಾಡಿ ಗುತ್ತಿಗೆದಾರರು ಕೈ ತೊಳೆದುಕೊಂಡಿದ್ದಾರೆ ಎನ್ನುವ ಆರೋಪ ಮೀನುಗಾರರಿಂದ ವ್ಯಕ್ತವಾಗಿದೆ.

ಗಂಗೊಳ್ಳಿಯಲ್ಲಿನ ಬ್ರೇಕ್‌ ವಾಟರ್‌ ಕಾಮಗಾರಿಗೆ ಬೇಕಾದ ಟೆಟ್ರಾಫೈಡ್‌ ಮತ್ತಿತರ ಘನ ಗಾತ್ರದ ಸರಕುಗಳ ಸಾಗಾಟ ವಾಹನಗಳಿಂದಾಗಿ ಬಂದರಿನೊಳಗಿನ ಎಲ್ಲ ರಸ್ತೆಗಳ ಡಾಮರೆಲ್ಲ ಕಿತ್ತು ಹೋಗಿದೆ. ಈ ಸಂಬಂಧ ಮೀನುಗಾರರು ಅನೇಕ ಸಮಯಗಳಿಂದ ಕರಾರರಿನಂತೆ ಕಾಂಕ್ರೀಟಿಕರಣ ಮಾಡಿಕೊಡಿ ಎನ್ನುವುದಾಗಿ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡವರಲ್ಲಿ ಬೇಡಿಕೆ ಇಡುತ್ತಲೇ ಬಂದಿದ್ದರೂ, ಆಗಿರಲಿಲ್ಲ.
ಅಂತೂ – ಇಂತೂ ಎರಡು ವಾರಗಳ ಹಿಂದೆ ಒಳ ರಸ್ತೆಗಳ ದುರಸ್ತಿಗೆ ಗುತ್ತಿಗೆ ಸಂಸ್ಥೆ ಮುಂದಾಗಿತ್ತು. ಈಗ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಆದರೆ ಮೀನುಗಾರರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ರಸ್ತೆ ಕೇವಲ 9 ಅಡಿ ಅಗಲಿ ಇದೆ. ಕನಿಷ್ಠ 12 ಅಡಿ ಅಗಲೀಕರಣವಾಗಬೇಕು.

ಮುಖ್ಯ ರಸ್ತೆಗೂ ಹಾನಿ
ಬ್ರೇಕ್‌ ವಾಟರ್‌ ಕಾಮಗಾರಿಯಿಂದಾಗಿ ಕೇವಲ ಬಂದರಿನೊಳಗಿನ ಒಳ ರಸ್ತೆಗಳು ಮಾತ್ರವಲ್ಲದೆ, ಕುಂದಾಪುರ – ಗಂಗೊಳ್ಳಿ ಮುಖ್ಯ ರಸ್ತೆಗೂ ಹಾನಿಯಾಗಿದೆ. ಇದನ್ನು ಕೂಡ ಸರಿಮಾಡಿಕೊಡುವ ಜವಾಬ್ದಾರಿ ಗುತ್ತಿಗೆ ಸಂಸ್ಥೆಯವರದ್ದೆ ಆಗಿದೆ ಎನ್ನುವುದು ಮೀನುಗಾರರ ಆಗ್ರಹವಾಗಿದೆ.

ಕಳಪೆಯಲ್ಲ
ಈ ರಸ್ತೆಯಯು ಹಿಂದೆ ಹೇಗಿತ್ತೋ, ಹಾಗೇ ಮಾಡಿಕೊಟ್ಟಿದ್ದಾರೆ. ಗುತ್ತಿಗೆದಾರರೇ ಸ್ವತಃ ಕೈಯಿಂದ ಹಣ ಹಾಕಿ ಕಾಮಗಾರಿ ನಿರ್ವಹಿಸಿದ್ದಾರೆ. ಅವರಿಗೆ ಕೇಂದ್ರದಿಂದ ಇನ್ನೂ ಪೂರ್ಣ ಅನುದಾನ ಬಿಡುಗಡೆಯಾಗಿಲ್ಲ. ಇದು ಮುಂದಿನ 2-3 ವರ್ಷಗಳವರೆಗೆ ಬಾಳಿಕೆ ಬರುತ್ತದೆ. ಇದು ಕಳಪೆಯಲ್ಲ ಎನ್ನುವುದಾಗಿ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಇಂಜಿನಿಯರ್‌ ತಿಳಿಸಿದ್ದಾರೆ.

ಡಿಸಿ ಸಭೆಯಲ್ಲಿ ಏನು ತೀರ್ಮಾನ?
2015 ರಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಆಗಿನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಸಮ್ಮುಖದಲ್ಲಿ ಅಧಿಕಾರಿಗಳು, ಮೀನುಗಾರರು, ಗುತ್ತಿಗೆ ಸಂಸ್ಥೆ ಅಧಿಕಾರಿಗಳ ಸಮ್ಮುಖದಲ್ಲಿ ಕುಂದು ಕೊರತೆ ಸಭೆ ನಡೆದಿತ್ತು. ಆ ಸಭೆಯಲ್ಲಿ ಒಂದೋ ಗುತ್ತಿಗೆ ಸಂಸ್ಥೆಯುವರು ಪ್ರತ್ಯೇಕ ರಸ್ತೆ ನಿರ್ಮಿಸಿ ಸರಕು ಸಾಗಾಟ ಮಾಡಬೇಕು ಎನ್ನುವ ಆಗ್ರಹ ಮೀನುಗಾರರಿಂದ ಕೇಳಿ ಬಂದಿತ್ತು. ಸಭೆಯಲ್ಲಿ ಆಗಿನ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಬಂದರಿನೊಳಗೆ ಹಾಳಾದ ರಸ್ತೆಯನ್ನು ಗುತ್ತಿಗೆದಾರರೇ ಕಾಮಗಾರಿ ಮುಗಿದ ಬಳಿಕ ಸಂಪೂರ್ಣ ಕಾಂಕ್ರೀಟಿಕರಣ ಮಾಡಬೇಕು ಎಂದು ಹೇಳಿದ್ದರು. ಇದಲ್ಲದೆ ಪರಿಸರ ರಕ್ಷಣೆಗಾಗಿ ಶೇ.5 ರಷ್ಟು ಅನುದಾನವನ್ನು ವಿನಿಯೋಗಿಸಬೇಕು ಎನ್ನುವುದು ಕೂಡ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಕಾಂಕ್ರೀಟಿಕರಣವೇ ಆಗಬೇಕು
ಈ ಹಿಂದೆ ಡಿಸಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕಾಂಕ್ರೀಟಿಕರಣ ಆಗಬೇಕು ಎನ್ನುವ ತೀರ್ಮಾನ ಆಗಿತ್ತು. ಈ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು, ಗಂಗೊಳ್ಳಿಯ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರು ಕೂಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕೂಡಲೇ ಸಂಬಂಧಪಟ್ಟ ಇಂಜಿನಿಯರ್‌ಗಳನ್ನು ಕರೆಯಿಸಿ ವಿವರಣೆ ಪಡೆಯಲಾಗುವುದು. ಕರಾರಿನಂತೆ ಕಾಂಕ್ರೀಟಿಕರಣವೇ ಆಗಬೇಕು.
ಗಣೇಶ್‌ ಕೆ.,
ಉಪ ನಿರ್ದೇಶಕರು, ಮೀನುಗಾರಿಕಾ ಇಲಾಖೆ ಉಡುಪಿ

ತೀರಾ ಕಳಪೆ ಕಾಮಗಾರಿ
ಈಗ ಮಾಡಿರುವ ಡಾಮರೀಕರಣ ಕಾಮಗಾರಿ ತೀರಾ ಕಳಪೆಯಾಗಿದೆ. ಇಂಜಿನಿಯರ್‌ಗಳೇ ಗುತ್ತಿಗೆ ಸಂಸ್ಥೆಯವರ ಪರ ವಹಿಸಿ ಮಾತನಾಡುತ್ತಿದ್ದಾರೆ. ಬ್ರೇಕ್‌ ವಾಟರ್‌ ಕಾಮಗಾರಿಯಿಂದಲೇ ನಮ್ಮ ಬಂದರಿನ ರಸ್ತೆಗಳಿಗೆ ಹಾನಿಯಾಗಿದ್ದು, ಆದರೆ ಈಗ ಅವರೇ ಸ್ವಂತ ಕೈಯಿಂದ ಹಣ ಹಾಕಿ ಕಾಮಗಾರಿ ಮಾಡುತ್ತಿದ್ದಾರೆ ಅಂತ ಹೇಳುತ್ತಿದ್ದಾರೆ. ಈ ಹಿಂದೆ ಕಾಂಕ್ರೀಟಿಕರಣ ಮಾಡಿಕೊಡಲು ಅವರಿಗೆ ಸೂಚಿಸಲಾಗಿತ್ತು. ಆದರೆ ಇವರು ಕೇವಲ ಡಾಮರೀಕರಣ ಮಾತ್ರ ಮಾಡಿದ್ದಾರೆ.
– ರವಿಶಂಕರ್‌ ಖಾರ್ವಿ, ಮೀನುಗಾರ ಮುಖಂಡರು

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.