ಆರೋಪಿ ಸೆರೆ; ಬೈಕ್‌ ವಶಕ್ಕೆ : ನ್ಯಾಯಾಂಗ ಬಂಧನ


Team Udayavani, Feb 3, 2017, 3:45 AM IST

crime.jpg

ಉಡುಪಿ:  ಕರಾವಳಿ ಜಂಕ್ಷನ್‌ ಬಳಿ ರಿಕ್ಷಾ ಚಾಲಕನ ಕೊಲೆ ಹಾಗೂ ಆದಿ ಉಡುಪಿ ಮಸೀದಿಗೆ ಕಲ್ಲೆಸೆದ ಪ್ರಕರಣದ ಆರೋಪಿಯನ್ನು ಪೊಲೀಸರು ಗುರುವಾರ ಸೆಷನ್ಸ್‌ ಕೋರ್ಟ್‌ಗೆ ಹಾಜರುಪಡಿಸಿದ್ದು, 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
 
ಅಂಕಿತ್‌ (24) ಕುಂಪಲ ಬಂಧಿತ ಆರೋಪಿಯಾಗಿದ್ದು, ತನಿಖೆಯ ವೇಳೆ ಎರಡು ಪ್ರಕರಣವನ್ನು  ತಾನೇ ಮಾಡಿದ್ದಾಗಿ ಹೇಳಿಕೊಂಡಿದ್ದಾನೆ. ಶುಕ್ರವಾರ ಮತ್ತೆ ಆರೋಪಿಯನ್ನು ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ಒಪ್ಪಿಸುವ ಬಗ್ಗೆ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ವಿಷ್ಣುವರ್ಧನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
 
ಜ. 28ರ ತಡರಾತ್ರಿ ಅಂಕಿತ್‌ ಮೊದಲು ಮಸೀದಿಗೆ ಕಲ್ಲು ಎಸೆದು, ಆನಂತರ ಕರಾವಳಿ ಬೈಪಾಸ್‌ ಬಳಿಯ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ರಿಕ್ಷಾ ಚಾಲಕ ಹನೀಫ್ ಜತೆ ವಾಹನಕ್ಕೆ ಸೈಡ್‌ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ. ಈ ವೇಳೆ ಅಲ್ಲಿಗೆ ಬಂದ ಹನೀಫ್ ಭಾವ ಶಬ್ಬಿರ್‌ ಹಾಗೂ ಅಂಕಿತ್‌ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತೆರ ಳಿದ್ದು, ಈ ವೇಳೆ ಅಂಕಿತ್‌ ಇಬ್ಬರಿಗೂ ಚೂರಿಯಿಂದ ಇರಿದು ಪರಾರಿ ಯಾಗಿದ್ದ. ಘಟನೆಯಲ್ಲಿ ಹನೀಫ್ ಗಾಯಗೊಂಡು ಮೃತಪಟ್ಟಿದ್ದ.

ಫೆ. 1ರಂದು ಆರೋಪಿ ಅಂಕಿತ್‌ನನ್ನು  ಬಂಧಿಸಲಾಗಿದ್ದು,  ಈ ವೇಳೆ ಆತನಿಂದ ಬೈಕ್‌ ವಶಕ್ಕೆ ಪಡೆಯಲಾಗಿದೆ. ಯಾವುದಾದರೂ ಸಂಘಟನೆ ಸದಸ್ಯನಾಗಿದ್ದಾನೋ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ವಿಷ್ಣುವರ್ಧನ್‌ ಸ್ಪಷ್ಟಪಡಿಸಿದರು.

ಮೂರೇ ದಿನದಲ್ಲಿ  ಪ್ರಕರಣ 
ಭೇದಿಸಿದ ತಂಡ

ಮಸೀದಿಗೆ ಕಲ್ಲೆಸತ ಹಾಗೂ ರಿಕ್ಷಾ ಚಾಲಕನ ಕೊಲೆ ಪ್ರಕರಣವನ್ನು ಪೊಲೀಸರು ಮೂರೇ ದಿನದಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಡಿವೈಎಸ್‌ಪಿ ಕುಮಾರಸ್ವಾಮಿ ನೇತೃತ್ವದಲ್ಲಿ 5 ತಂಡ ಹಾಗೂ ಕಲ್ಲೆಸೆತ ಪ್ರಕರಣ ಸಂಬಂಧ 3 ತಂಡ ರಚಿಸಲಾಗಿತ್ತು. ಎಸ್‌ಪಿ ಕೆ. ಟಿ. ಬಾಲಕೃಷ್ಣ ಮಾರ್ಗದರ್ಶನದಲ್ಲಿ  ಪೊಲೀಸ್‌ ವೃತ್ತ ನಿರೀಕ್ಷಕ ನವೀನ್‌ ಚಂದ್ರ ಜೋಗಿ, ಮಣಿಪಾಲ ವೃತ್ತ ನಿರೀಕ್ಷಕ ಸುದರ್ಶನ್‌, ಅಪರಾಧ ಪತ್ತೆ ದಳದ ಪೊಲೀಸ್‌ ನಿರೀಕ್ಷಕ ಸಂಪತ್‌ ಕುಮಾರ್‌, ಬ್ರಹ್ಮಾವರ ವೃತ್ತ ನಿರೀಕ್ಷಕ ಕೆ. ಶ್ರೀಕಾಂತ್‌, ಪಿಎಸ್‌ಐ ಮಧು ಟಿ. ಎಸ್‌., ನಗರ ಠಾಣೆ ಪಿಎಸ್‌ಐ ಅನಂತ ಪದ್ಮನಾಭ, ಸಂಚಾರ ಠಾಣಾ ಪಿಎಸ್‌ಐ ವೆಂಕಟೇಶ್‌, ಎಎಸ್‌ಐ ರೊಸಾರಿಯೋ ಡಿ’ಸೋಜಾ ಹಾಗೂ ಸಿಬಂದಿ ಉಮೇಶ್‌, ಇಮ್ರಾನ್‌, ಮಹಾಬಲೇಶ್ವರ, ರವಿಚಂದ್ರ, ಸುರೇಶ್‌, ರಾಮು ಹೆಗ್ಡೆ, ರಾಘವೇಂದ್ರ, ಚಂದ್ರ ಶೆಟ್ಟಿ, ಸಂತೋಷ್‌ ಕುಂದರ್‌, ಪ್ರವೀಣ್‌, ರಾಜ್‌ ಕುಮಾರ್‌, ದಯಾನಂದ ಪ್ರಭು, ಶಿವಾನಂದ, ರಾಘವೇಂದ್ರ, ಶಿವಾನಂದ,  ನಿತಿನ್‌ ತಂಡ ಕಾರ್ಯನಿರ್ವಹಿಸಿತು. 

ಆರೋಪಿಯ ಹಿನ್ನೆಲೆ
ಬಂಧಿತ ಆರೋಪಿ ಅಂಕಿತ್‌ ಮೂಲತಃ ಉಳ್ಳಾಲದ ಕುಂಪಲ ದವನಾಗಿದ್ದು, ಕಳೆದ ಒಂದೂವರೆ ವರ್ಷಗಳಿಂದ ಉಡುಪಿಯಲ್ಲಿ ಅಕ್ಕನ ಮನೆಯಲ್ಲಿ ವಾಸಿವಾಗಿದ್ದ. ಭಾವನ ಜತೆ ಇಂಟೀರಿಯರ್‌ ಡಿಸೈನ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈತನ ವಿರುದ್ಧ ಈ ಹಿಂದೆ ಉಳ್ಳಾಲ ಠಾಣೆಯಲ್ಲಿ 3-4 ಪ್ರಕರಣ ದಾಖಲಾದ ಬಗ್ಗೆ ಮಾಹಿತಿ ಇದೆ. ಉಳ್ಳಾಲದ ಕುಂಪಲದಲ್ಲೂ ಮಸೀದಿಗೆ ಕಲ್ಲು  ಎಸೆದ ಬಗ್ಗೆ ಪ್ರಕರಣ ದಾಖಲಾಗಿತ್ತು. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.