ಕಟಪಾಡಿ: ನೆರೆ ನೀರಿನಲ್ಲಿ ಮೃತದೇಹ ಹೊತ್ತುಕೊಂಡು ಹೋಗಿ ಶವಸಂಸ್ಕಾರ
Team Udayavani, Jul 2, 2022, 10:25 AM IST
ಕಟಪಾಡಿ: ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಶವವನ್ನು ನೆರೆ ನೀರಿನಲ್ಲಿಯೇ ಹೊತ್ತುಕೊಂಡು ಹೋಗಿ ಶವ ಸಂಸ್ಕಾರ ನಡೆಸಿದ ಘಟನೆ ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ದೇವರಕುದ್ರು ಎಂಬಲ್ಲಿ ಶುಕ್ರವಾರ ನಡೆದಿದೆ.
ದೇವರಕುದ್ರುಗೆ ಸಂಪರ್ಕ ರಸ್ತೆ ಇದ್ದರೂ ರಸ್ತೆ, ತೋಟದಲ್ಲಿ ನೆರೆ ನೀರು ತುಂಬಿದ್ದ ಕಾರಣದಿಂದ ಆ್ಯಂಬುಲೆನ್ಸ್ ಮನೆಯವರೆಗೆ ತಲುಪಲು ಸಾಧ್ಯವಾಗಿಲ್ಲ. ಹಾಗಾಗಿ ಮಟ್ಟು ದೇವರಕುದ್ರು ಬೊಮ್ಮನ್ ತೋಟದ ರಾಮಪ್ಪ ಕುಂದರ್ ಪತ್ನಿ ಬೇಬಿ ಪೂಜಾರಿ ಅವರ ಪಾರ್ಥಿವ ಶರೀರವನ್ನು ಸುಮಾರು ಅರ್ಧ ಕಿ.ಮೀ. ದೂರದವರೆಗೆ ಹೊತ್ತುಕೊಂಡು ಹೋಗಬೇಕಾಯಿತು.
ಇದನ್ನೂ ಓದಿ:ಏಕನಾಥ್ ಶಿಂಧೆ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಿದ ಉದ್ಧವ್ ಠಾಕ್ರೆ
ಬಳಿಕ ಆ್ಯಂಬುಲೆನ್ಸ್ ಮೂಲಕ ಸಾಗಿಸಿ ಕೋಟೆ ಗ್ರಾ.ಪಂ.ನ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವ ಸಂಸ್ಕಾರ ನಡೆಸಲಾಯಿತು ಎಂದು ಸ್ಥಳೀಯ ಲಕ್ಷ್ಮಣ್ ಅಂಚನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ