ಸಚಿವ ಸಂಪುಟದಲ್ಲಿ  ಕರಾವಳಿಗೆ 3 ಸ್ಥಾನ?


Team Udayavani, Jun 4, 2018, 7:40 AM IST

15.jpg

ಉಡುಪಿ: ಸಚಿವ ಸಂಪುಟ ವಿಸ್ತರಣೆ ಕಾಲ ಸನ್ನಿಹಿತವಾಗಿದೆ. ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ನ ತಲಾ ಒಬ್ಬರು ವಿಧಾನಸಭಾ ಸದಸ್ಯ (ಯು.ಟಿ. ಖಾದರ್‌), ವಿಧಾನ ಪರಿಷತ್‌ ಸದಸ್ಯರು (ಐವನ್‌ ಡಿ’ಸೋಜಾ) ಇದ್ದರೆ ಉಡುಪಿ ಜಿಲ್ಲೆಯಲ್ಲಿ ಒಬ್ಬರು ವಿಧಾನ ಪರಿಷತ್‌ ಸದಸ್ಯರು (ಪ್ರತಾಪಚಂದ್ರ ಶೆಟ್ಟಿ) ಇದ್ದಾರೆ. ಇದಲ್ಲದೆ ಜೆಡಿಎಸ್‌ನಿಂದ ದ.ಕ. ಜಿಲ್ಲೆಯ ಬಿ.ಎಂ. ಫಾರೂಕ್‌ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿದ್ದಾರೆ. 

ಉಡುಪಿಯಲ್ಲಿ ಸಚಿವರಾಗುವ ಏಕೈಕ ಅವಕಾಶ ಪ್ರತಾಪಚಂದ್ರ ಶೆಟ್ಟಿ ಅವರಿಗೆ ಇದೆ. ನಾಲ್ಕು ಬಾರಿ ವಿಧಾನ ಸಭಾ ಸದಸ್ಯರಾಗಿ, ಮೂರನೇ ಬಾರಿ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆ ಯಾಗಿರುವ ಅವರು ಹಿರಿಯ ಶಾಸಕರು. ಅವರಿಗೆ ಇದು ವರೆಗೆ ಸಚಿವ ಸಂಪುಟ ದಲ್ಲಿ ಸ್ಥಾನ ಸಿಕ್ಕಿಲ್ಲ. ಅಲ್ಲದೆ ಕುಂದಾ ಪುರಕ್ಕೂ ಇದು ವರೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಆಡಳಿತದ ಎಳೆ ಎಳೆಯೂ ಗೊತ್ತಿರುವುದು, ಸ್ಥಳೀಯ ಆಡಳಿತದ ಸಂಪೂರ್ಣ ಒಳ- ಹೊರಗು ತಿಳಿದಿರುವುದು ಇವರ ಪ್ಲಸ್‌ ಪಾಯಿಂಟ್‌. ಇವರಿಗೆ ಇರುವ ಏಕೈಕ ಮೈನಸ್‌ ಅಂಶವೆಂದರೆ ಲಾಬಿ ನಡೆಸದೆ ಇರುವುದು. “ನಾವು ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪ್ರತಾಪಚಂದ್ರ ಶೆಟ್ಟಿ ಯವರಿಗೆ ಅವಕಾಶ ಕೊಡಲು ಶಿಫಾರಸು ಮಾಡಿದ್ದೇವೆ’ ಎನ್ನುತ್ತಾರೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜನಾರ್ದನ ತೋನ್ಸೆ.

ದ.ಕ. ಜಿಲ್ಲೆಯಲ್ಲಿ ಯು.ಟಿ. ಖಾದರ್‌ಗೆ ಸಚಿವ ಸ್ಥಾನ ಬಹುತೇಕ ಖಾತ್ರಿ. ಐವನ್‌ ಡಿ’ಸೋಜಾರಿಗೆ ಅವ ಕಾಶ ಸಿಗಲೂಬಹುದು. ಮೀನು ಗಾರಿಕೆ ಇಲಾಖೆ ಜೆಡಿಎಸ್‌ ಪಾಲಿಗೆ ಹೋಗಿರು ವುದರಿಂದ ಕರಾವಳಿಯ ಬಿ.ಎಂ. ಫಾರೂಕ್‌ ಅವರಿಗೆ ಅವ ಕಾಶ ಸಿಗ ಬಹುದು ಎಂಬ ಲೆಕ್ಕಾ ಚಾರವೂ ಇದೆ. ಯುವಜನ ಸೇವಾ ಇಲಾಖೆ ಕಾಂಗ್ರೆಸ್‌ ಪಾಲಿಗೆ ಇದೆ. ಯು.ಟಿ. ಖಾದರ್‌ ದೊಡ್ಡ ಖಾತೆಗಳನ್ನು ನಿಭಾಯಿಸಿರುವ ಕಾರಣ ಅವರಿಗೆ ಪ್ರಬಲ ಇಲಾಖೆಯೇ ದೊರಕಬಹುದು. ಪ್ರತಾಪಚಂದ್ರ ಶೆಟ್ಟಿ ಯವರಿಗೆ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ದೊರಕಬಹುದು ಎಂಬ ಊಹೆ ಇದೆ.

ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌, ಎಐಸಿಸಿ ನಾಯಕ ವೇಣುಗೋಪಾಲ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಅಂತಿಮ ಪಟ್ಟಿ ತಯಾರಿಸುತ್ತಾರೆ. ಹೈಕಮಾಂಡ್‌ ಇದರ ಮೇಲ್ವಿಚಾರಣೆ ನಡೆಸುವು ದಾಗಿ ಡಾ| ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ರಾಹುಲ್‌ ಗಾಂಧಿ ವಿದೇಶದಲ್ಲಿದ್ದು, ಇಂದೇ ಬರಲಿದ್ದಾರೆ. ಅವರು ಬಂದ ತತ್‌ಕ್ಷಣ ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ನಾವು ಜಿಲ್ಲೆಯಿಂದ ಪ್ರತಾಪಚಂದ್ರ ಶೆಟ್ಟಿಯವರ ಹೆಸರನ್ನು ಶಿಫಾರಸು ಮಾಡಿದ್ದೇವೆ.
ಜನಾರ್ದನ ತೋನ್ಸೆ ಜಿಲ್ಲಾ  ಕಾಂಗ್ರೆಸ್‌ ಅಧ್ಯಕ್ಷರು, ಉಡುಪಿ.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.