ಉಪ್ಪೂರು: ಲಾರಿಯಲಿದ್ದ ಹತ್ತಿ ಬೆಂಕಿಗೆ ಆಹುತಿ
Team Udayavani, Aug 31, 2017, 7:35 AM IST
ಬ್ರಹ್ಮಾವರ: ಉಪ್ಪೂರು ಸಾಲ್ಮರ ಬಳಿ ಬುಧವಾರ ಬೆಳಗ್ಗೆ ಲಾರಿಯಲ್ಲಿದ್ದ ಹತ್ತಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಸಾಲ್ಮರ ಬಳಿ ಹಾಸಿಗೆ ತಯಾರಿಕಾ ಘಟಕಕ್ಕೆ ಹಾಸನದಿಂದ ಹತ್ತಿಯನ್ನು ತರಿಸಲಾಗಿತ್ತು. ಹತ್ತಿ ತುಂಬಿದ ಲಾರಿ ಸಾಲ್ಮರ ಸಮೀಪ ಆಗಮಿಸುತ್ತಿದ್ದಾಗ ವಿದ್ಯುತ್ ವಯರ್ ತಗುಲಿ ಬೆಂಕಿ ಹತ್ತಿಕೊಂಡಿತು.
ಘಟನೆಯಲ್ಲಿ ಹತ್ತಿ ಪೂರ್ಣ ಸುಟ್ಟು ಹೋಗಿದ್ದು, ಲಾರಿಗೆ ಹಾನಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಲಾರಿಗೆ ಬೆಂಕಿ ಹಚ್ಚಿಕೊಂಡಿದ್ದರಿಂದ ಈ ರಸ್ತೆಯಲ್ಲಿ ಕೆಲವು ಸಮಯ ವಾಹನ ಸಂಚಾರ ಸ್ಥಗಿತಗೊಂಡಿತು.
ಸ್ಥಳೀಯರ ಮಾಹಿತಿಯಂತೆ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಲು ಯಶಸ್ವಿಯಾಗಿದ್ದಾರೆ. ಬ್ರಹ್ಮಾವರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ